Homeಮುಖಪುಟ'ನೋಟಾ'ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಅಭ್ಯರ್ಥಿ ಪಡೆದಿರುವುದಕ್ಕಿಂತ ಹೆಚ್ಚು ಮತಗಳು ನೋಟಾಗೆ ಚಲಾವಣೆಯಾದರೆ, ಅಂತಹ ಕ್ಷೇತ್ರಗಳ ಚುನಾವಣೆಯನ್ನು ‘ಅನೂರ್ಜಿತ’ ಎಂದು ಘೋಷಿಸಿ, ಮರು ಮತದಾನ ನಡೆಸಲು ನಿರ್ದೇಶನ ನೀಡುವಂತೆ ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ (ಏ.26) ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ನೋಟಾಗಿಂತ ಕಡಿಮೆ ಮತ ಪಡೆದ ಅಭ್ಯರ್ಥಿ ಮತ್ತೆ ಚುನಾವಣೆಗೆ ಸ್ಪರ್ಧಿಸುವುದಕ್ಕೆ ನಿರ್ಬಂಧ ಹೇರಬೇಕು. ನೋಟಾವನ್ನು “ಕಾಲ್ಪನಿಕ ಅಭ್ಯರ್ಥಿ” ಎಂದು ಸರಿಯಾಗಿ ಪ್ರಚಾರ ಮಾಡಬೇಕು. ಈ ನಿಟ್ಟಿನಲ್ಲಿ ಸೂಕ್ತ ನಿಯಮಗಳನ್ನು ರೂಪಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಶಿವ ಖೇರಾ ಎಂಬವರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಒಪ್ಪಿಕೊಂಡಿದೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಸಲ್ಲಿಸಿದ್ದ ಪಿಐಎಲ್‌ಗೆ ಸಂಬಂಧಿಸಿದಂತೆ 2013ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನದ ಅನುಸಾರ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ನೋಟಾ ಪರಿಚಯಿಸಲಾಯಿತು. ಎಲ್ಲಾ ಅಭ್ಯರ್ಥಿಗಳು ಅತೃಪ್ತಿಕರ ಎಂದು ತಿರಸ್ಕರಿಸಲು ಮತದಾರರಿಗೆ ನೋಟಾ ಆಯ್ಕೆಯನ್ನು ನೀಡುತ್ತದೆ. ಈಗಿರುವ ನಿಯಮಗಳ ಪ್ರಕಾರ ಅಭ್ಯರ್ಥಿಗಿಂತ ಹೆಚ್ಚು ಮತಗಳು ನೋಟಾಗೆ ಚಲಾವಣೆಯಾದರೆ, ನೋಟಾದ ಬಳಿಕ ಹೆಚ್ಚು ಮತಗಳನ್ನು ಪಡೆದ ಅಭ್ಯರ್ಥಿಯನ್ನೇ ವಿಜೇತ ಎಂದು ಘೋಷಿಸಲಾಗ್ತಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್‌ ಶಂಕರನಾರಾಯಣ್‌ ಅವರು, ಸೂರತ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡು ಇತರೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದ ಕಾರಣ ಯಾವುದೇ ಚುನಾವಣೆಯಿಲ್ಲದೆ ಬಿಜೆಪಿ ಅಭ್ಯರ್ಥಿ ವಿಜಯಿ ಎಂದು ಘೋಷಿಸಿದ ಇತ್ತೀಚಿನ ಉದಾಹರಣೆಯನ್ನು ನ್ಯಾಯಾಲಯದ ಮುಂದೆ ಉಲ್ಲೇಖಿಸಿದ್ದಾರೆ.

ಒಬ್ಬರೇ ಅಭ್ಯರ್ಥಿ ಇದ್ದರೂ, ಮತದಾರರಿಗೆ ನೋಟಾಕ್ಕೆ ಮತ ಹಾಕುವ ಅವಕಾಶವಿರುವುದರಿಂದ ಚುನಾವಣೆ ನಡೆಯಬೇಕು. ಅವಿರೋಧ ಆಯ್ಕೆ ಎಂಬುವುದು ಪ್ರತಿಸ್ಪರ್ಧಿ ಇಲ್ಲ ಎಂಬ ಕಾರಣಕ್ಕೆ ಯಾರೇ ಅಭ್ಯರ್ಥಿಯಾದರೂ ಅವರು ಒಪ್ಪಿಕೊಳ್ಳುವಂತೆ ಮತದಾರರನ್ನು ಬಲವಂತಪಡಿಸುವುದಾಗಿದೆ ಎಂದು ವಕೀಲ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ಕಾನೂನನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಅರ್ಜಿದಾರರು ಬಯಸುತ್ತಿರುವುದನ್ನು ಗಮನಿಸಿದ ಸಿಜೆಐ ಚಂದ್ರಚೂಡ್ ಅವರು ಈ ವಿಷಯವನ್ನು ಪರಿಗಣಿಸಲು ಒಪ್ಪಿಕೊಂಡಿದ್ದಾರೆ. ಚುನಾವಣಾ ಆಯೋಗ ಏನು ಹೇಳುತ್ತದೆ ನೋಡೋಣ ಎಂದು ಸಿಜೆಐ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...