Homeಮುಖಪುಟಗೌಪ್ಯತೆಯ ಬದ್ಧತೆ ಮುರಿಯಲು ಒತ್ತಾಯಿಸಿದರೆ ಭಾರತ ತೊರೆಯುತ್ತೇವೆ: ನ್ಯಾಯಾಲಯಕ್ಕೆ ತಿಳಿಸಿದ ವಾಟ್ಸಾಪ್

ಗೌಪ್ಯತೆಯ ಬದ್ಧತೆ ಮುರಿಯಲು ಒತ್ತಾಯಿಸಿದರೆ ಭಾರತ ತೊರೆಯುತ್ತೇವೆ: ನ್ಯಾಯಾಲಯಕ್ಕೆ ತಿಳಿಸಿದ ವಾಟ್ಸಾಪ್

- Advertisement -
- Advertisement -

ವಾಟ್ಸಾಪ್‌ನಲ್ಲಿ ಸಂದೇಶಗಳ ಖಾಸಗಿತನ/ಗೌಪ್ಯತೆ (ಎಂಡ್‌-ಟು-ಎಂಡ್ ಎನ್‌ಕ್ರಿಪ್ಶನ್‌) ಯಿಂದ ಸಂದೇಶ ಕಳಿಸಿದವರು, ಸ್ವೀಕರಿಸಿದವರಲ್ಲದೆ ಮೂರನೇ ವ್ಯಕ್ತಿ ಆ ಸಂದೇಶ ನೋಡಲಾಗದು. ಈ ನಿಯಮವನ್ನು ಉಲ್ಲಂಘಿಸಲು ಒತ್ತಾಯಿಸಿದರೆ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ರದ್ದುಗೊಳಿಸುವುದಾಗಿ ಮೆಟಾ ಒಡೆತನದ ವಾಟ್ಸಾಪ್‌ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಯಂತ್ರಿಸುವ ‘ಮಾಹಿತಿ ತಂತ್ರಜ್ಞಾನ ನಿಯಮ ನಿಯಮಗಳು-2021’ ಅನ್ನು ಪ್ರಶ್ನಿಸಿ 2021ರಲ್ಲಿ ವಾಟ್ಸಾಪ್‌ ನ್ಯಾಯಾಲಯದ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪ್ರೀತಮ್ ಸಿಂಗ್ ಅರೋರಾ ಅವರಿದ್ದ ವಿಭಾಗೀಯ ಪೀಠ ನಡೆಸುತ್ತಿದೆ. “ಬಳಕೆದಾರರ ಖಾಸಗಿತನವನ್ನು ಉಲ್ಲಂಘಿಸುವಂತೆ ಒತ್ತಾಯಿಸಿದರೆ ಭಾರತ ತೊರೆಯುತ್ತೇವೆ” ಎಂದು ವಾಟ್ಸಾಪ್‌ ಕಂಪನಿಯ ವಕೀಲ ತೇಜಸ್‌ ಕರಿಯಾ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಭಾರತದಲ್ಲಿ 400 ಮಿಲಿಯನ್‌ಗೂ ಹೆಚ್ಚು ಬಳಕೆದಾರರನ್ನು ವಾಟ್ಸಾಪ್ ಹೊಂದಿದೆ. ವಾಟ್ಸಾಪ್ ಒದಗಿಸುವ ಗೌಪ್ಯತೆ ವೈಶಿಷ್ಟ್ಯಗಳ ಕಾರಣದಿಂದಾಗಿಯೇ ಜನರು ಅದನ್ನು ಹೆಚ್ಚಾಗಿ ನಂಬಿದ್ದಾರೆ ಮತ್ತು ಬಳಸುತ್ತಿದ್ದಾರೆ.
ಬಳಕೆದಾರರ ಗೌಪ್ಯತೆಯನ್ನು ದುರ್ಬಲಗೊಳಿಸುವ ಯಾವುದೇ ನಿಯಮಗಳು ಭಾರತದ ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾಟ್ಸಾಪ್ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.

ಗೌಪ್ಯತೆಯನ್ನು ಉಲ್ಲಂಘಿಸುವ ನಿಯಮಗಳು ಜಗತ್ತಿನಲ್ಲಿ ಎಲ್ಲೂ ಇಲ್ಲ. ಬ್ರೆಝಿಲ್‌ನಲ್ಲಿಯೂ ಇಂತಹ ನಿಯಮಗಳಿಲ್ಲ. ಹೊಸ ನಿಯಮದ ಪ್ರಕಾರ ನಾವು ಎಲ್ಲಾ ಸಂದೇಶಗಳನ್ನು ಸ್ಟೋರ್ ಮಾಡಿ ಇಟ್ಟುಕೊಳ್ಳಬೇಕಾಗುತ್ತದೆ. ಸರ್ಕಾರ ಯಾವ ಸಂದೇಶವನ್ನು ಡೀಕ್ರಿಪ್ಟ್ ಮಾಡಲು ಹೇಳುತ್ತದೆ ಎಂದು ನಮಗೆ ಗೊತ್ತಿಲ್ಲ. ಸರ್ಕಾರದ ನಿಯಮ ಪಾಲಿಸುವುದಾದರೆ, ನಾವು ಹಲವಾರು ವರ್ಷಗಳವರೆಗೆ ಲಕ್ಷಾಂತರ ಸಂದೇಶಗಳನ್ನು ಸಂಗ್ರಹಿಸಿಡಬೇಕಾಗುತ್ತದೆ ಎಂದು ವಾಟ್ಸಾಪ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಇಲ್ಲಿ ಎರಡು ವಿಚಾರಗಳಿವೆ. ಒಂದು, ಬಳಕೆದಾರರ ಖಾಸಗಿತನ, ಗೌಪ್ಯತೆ. ಎರಡು, ಸರ್ಕಾರವು ಬಳಕೆದಾರರ ಸಂದೇಶಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕನ್ನು ಹೊಂದಿದೆ. ಉದಾಹರಣೆಗೆ, ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂಬ ಆರೋಪದ ಮೇಲೆ ಆತನನ್ನು ಹಿಡಿಯಲು, ಆತ ಕಳುಹಿಸುವ ಸಂದೇಶಗಳಿಗಾಗಿ ಸರ್ಕಾರವು ನಮ್ಮ ಮೇಲೆ ಒತ್ತಡ ಹೇರುತ್ತದೆ. ನಾವು ಬಳಕೆದಾರ ಮತ್ತು ಸರ್ಕಾರಗಳ ನಡುವೆ ಸಿಲುಕಿದ್ದೇವೆ. ಒಂದು ಸೂಚನೆಗಾಗಿ ನಾವು ನಮ್ಮ ಗೌಪ್ಯತೆಯ ನಿಲುವನ್ನು ಮುರಿಯಬೇಕೆ? ಈ ನಿಯಮದ ಸಾಂವಿಧಾನಿಕ ಸಿಂಧುತ್ವವನ್ನು ನ್ಯಾಯಾಲಯವು ಪರಿಶೀಲಿಸಬೇಕಾಗುತ್ತದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿ ಈ ನಿಯಮ ರೂಪಿಸಲು ಸರ್ಕಾರಕ್ಕೆ ಅವಕಾಶವಿಲ್ಲ” ಎಂದು ವಕೀಲರು ವಾದಿಸಿದ್ದಾರೆ.

ಇದನ್ನೂ ಓದಿ : ‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...