Homeಮುಖಪುಟಗೌಪ್ಯತೆಯ ಬದ್ಧತೆ ಮುರಿಯಲು ಒತ್ತಾಯಿಸಿದರೆ ಭಾರತ ತೊರೆಯುತ್ತೇವೆ: ನ್ಯಾಯಾಲಯಕ್ಕೆ ತಿಳಿಸಿದ ವಾಟ್ಸಾಪ್

ಗೌಪ್ಯತೆಯ ಬದ್ಧತೆ ಮುರಿಯಲು ಒತ್ತಾಯಿಸಿದರೆ ಭಾರತ ತೊರೆಯುತ್ತೇವೆ: ನ್ಯಾಯಾಲಯಕ್ಕೆ ತಿಳಿಸಿದ ವಾಟ್ಸಾಪ್

- Advertisement -
- Advertisement -

ವಾಟ್ಸಾಪ್‌ನಲ್ಲಿ ಸಂದೇಶಗಳ ಖಾಸಗಿತನ/ಗೌಪ್ಯತೆ (ಎಂಡ್‌-ಟು-ಎಂಡ್ ಎನ್‌ಕ್ರಿಪ್ಶನ್‌) ಯಿಂದ ಸಂದೇಶ ಕಳಿಸಿದವರು, ಸ್ವೀಕರಿಸಿದವರಲ್ಲದೆ ಮೂರನೇ ವ್ಯಕ್ತಿ ಆ ಸಂದೇಶ ನೋಡಲಾಗದು. ಈ ನಿಯಮವನ್ನು ಉಲ್ಲಂಘಿಸಲು ಒತ್ತಾಯಿಸಿದರೆ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ರದ್ದುಗೊಳಿಸುವುದಾಗಿ ಮೆಟಾ ಒಡೆತನದ ವಾಟ್ಸಾಪ್‌ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಯಂತ್ರಿಸುವ ‘ಮಾಹಿತಿ ತಂತ್ರಜ್ಞಾನ ನಿಯಮ ನಿಯಮಗಳು-2021’ ಅನ್ನು ಪ್ರಶ್ನಿಸಿ 2021ರಲ್ಲಿ ವಾಟ್ಸಾಪ್‌ ನ್ಯಾಯಾಲಯದ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪ್ರೀತಮ್ ಸಿಂಗ್ ಅರೋರಾ ಅವರಿದ್ದ ವಿಭಾಗೀಯ ಪೀಠ ನಡೆಸುತ್ತಿದೆ. “ಬಳಕೆದಾರರ ಖಾಸಗಿತನವನ್ನು ಉಲ್ಲಂಘಿಸುವಂತೆ ಒತ್ತಾಯಿಸಿದರೆ ಭಾರತ ತೊರೆಯುತ್ತೇವೆ” ಎಂದು ವಾಟ್ಸಾಪ್‌ ಕಂಪನಿಯ ವಕೀಲ ತೇಜಸ್‌ ಕರಿಯಾ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಭಾರತದಲ್ಲಿ 400 ಮಿಲಿಯನ್‌ಗೂ ಹೆಚ್ಚು ಬಳಕೆದಾರರನ್ನು ವಾಟ್ಸಾಪ್ ಹೊಂದಿದೆ. ವಾಟ್ಸಾಪ್ ಒದಗಿಸುವ ಗೌಪ್ಯತೆ ವೈಶಿಷ್ಟ್ಯಗಳ ಕಾರಣದಿಂದಾಗಿಯೇ ಜನರು ಅದನ್ನು ಹೆಚ್ಚಾಗಿ ನಂಬಿದ್ದಾರೆ ಮತ್ತು ಬಳಸುತ್ತಿದ್ದಾರೆ.
ಬಳಕೆದಾರರ ಗೌಪ್ಯತೆಯನ್ನು ದುರ್ಬಲಗೊಳಿಸುವ ಯಾವುದೇ ನಿಯಮಗಳು ಭಾರತದ ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾಟ್ಸಾಪ್ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.

ಗೌಪ್ಯತೆಯನ್ನು ಉಲ್ಲಂಘಿಸುವ ನಿಯಮಗಳು ಜಗತ್ತಿನಲ್ಲಿ ಎಲ್ಲೂ ಇಲ್ಲ. ಬ್ರೆಝಿಲ್‌ನಲ್ಲಿಯೂ ಇಂತಹ ನಿಯಮಗಳಿಲ್ಲ. ಹೊಸ ನಿಯಮದ ಪ್ರಕಾರ ನಾವು ಎಲ್ಲಾ ಸಂದೇಶಗಳನ್ನು ಸ್ಟೋರ್ ಮಾಡಿ ಇಟ್ಟುಕೊಳ್ಳಬೇಕಾಗುತ್ತದೆ. ಸರ್ಕಾರ ಯಾವ ಸಂದೇಶವನ್ನು ಡೀಕ್ರಿಪ್ಟ್ ಮಾಡಲು ಹೇಳುತ್ತದೆ ಎಂದು ನಮಗೆ ಗೊತ್ತಿಲ್ಲ. ಸರ್ಕಾರದ ನಿಯಮ ಪಾಲಿಸುವುದಾದರೆ, ನಾವು ಹಲವಾರು ವರ್ಷಗಳವರೆಗೆ ಲಕ್ಷಾಂತರ ಸಂದೇಶಗಳನ್ನು ಸಂಗ್ರಹಿಸಿಡಬೇಕಾಗುತ್ತದೆ ಎಂದು ವಾಟ್ಸಾಪ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಇಲ್ಲಿ ಎರಡು ವಿಚಾರಗಳಿವೆ. ಒಂದು, ಬಳಕೆದಾರರ ಖಾಸಗಿತನ, ಗೌಪ್ಯತೆ. ಎರಡು, ಸರ್ಕಾರವು ಬಳಕೆದಾರರ ಸಂದೇಶಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕನ್ನು ಹೊಂದಿದೆ. ಉದಾಹರಣೆಗೆ, ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂಬ ಆರೋಪದ ಮೇಲೆ ಆತನನ್ನು ಹಿಡಿಯಲು, ಆತ ಕಳುಹಿಸುವ ಸಂದೇಶಗಳಿಗಾಗಿ ಸರ್ಕಾರವು ನಮ್ಮ ಮೇಲೆ ಒತ್ತಡ ಹೇರುತ್ತದೆ. ನಾವು ಬಳಕೆದಾರ ಮತ್ತು ಸರ್ಕಾರಗಳ ನಡುವೆ ಸಿಲುಕಿದ್ದೇವೆ. ಒಂದು ಸೂಚನೆಗಾಗಿ ನಾವು ನಮ್ಮ ಗೌಪ್ಯತೆಯ ನಿಲುವನ್ನು ಮುರಿಯಬೇಕೆ? ಈ ನಿಯಮದ ಸಾಂವಿಧಾನಿಕ ಸಿಂಧುತ್ವವನ್ನು ನ್ಯಾಯಾಲಯವು ಪರಿಶೀಲಿಸಬೇಕಾಗುತ್ತದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿ ಈ ನಿಯಮ ರೂಪಿಸಲು ಸರ್ಕಾರಕ್ಕೆ ಅವಕಾಶವಿಲ್ಲ” ಎಂದು ವಕೀಲರು ವಾದಿಸಿದ್ದಾರೆ.

ಇದನ್ನೂ ಓದಿ : ‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...