Homeಕರ್ನಾಟಕಬೆಂಗಳೂರು ದಕ್ಷಿಣ ಕ್ಷೇತ್ರದ ಮತಗಟ್ಟೆಯೊಂದರಲ್ಲಿ 'ನಕಲಿ ಮತದಾನ'!

ಬೆಂಗಳೂರು ದಕ್ಷಿಣ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ‘ನಕಲಿ ಮತದಾನ’!

- Advertisement -
- Advertisement -

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಟಿಎಂ ಲೇಔಟ್‌ನ ಮತಗಟ್ಟೆಯಲ್ಲಿ ನಕಲಿ ಮತದಾನ ನಡೆದಿರುವ ಆರೋಪ ಕೇಳಿ ಬಂದಿದೆ.

ಈ ಕ್ಷೇತ್ರದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ. ನಕಲಿ ಮತದಾನ ನಡೆದಿರುವ ಆರೋಪದ ಬಳಿಕ ಕಾಂಗ್ರೆಸ್ ನಾಯಕರು ಮಧ್ಯಪ್ರವೇಶಿಸಿದ್ದು, ಸಂಬಂಧಿತ ನಿಯಮಗಳ ಅಡಿಯಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ.

ಬೆಂಗಳೂರಿನ ಬಿಟಿಎಂ ಲೇಔಟ್‌ನ ನಲವತ್ತು ವರ್ಷದ ಸುಲ್ತಾನಾ ಮತ ಚಲಾಯಿಸಲು ಬೂತ್‌ ಸಂಖ್ಯೆ 195ಕ್ಕೆ ತೆರಳಿದ್ದರು, ಆದರೆ ಅವರ ಮತವನ್ನು ಈಗಾಗಲೇ ಹಾಕಲಾಗಿದೆ ಎಂದು ಮತಗಟ್ಟೆಯ ಸಿಬ್ಬಂದಿಗಳು ಹೇಳಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ನಾನು ಬೂತ್‌ಗೆ ಹೋದಾಗ ಚುನಾವಣಾ ಆಯೋಗದ ಅಧಿಕಾರಿಗಳು, ನಾನು ಈಗಾಗಲೇ ಮತವನ್ನು ಹಾಕಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಅನೇಕರಿಗೆ ಈ ರೀತಿ ಹೇಳುತ್ತಿರುವುದನ್ನು ನಾನು ಗಮನಿಸಿದ್ದೇನೆ ಎಂದು ಸುಲ್ತಾನಾ ಹೇಳಿದ್ದಾರೆ.

ಈ ಬಗ್ಗೆ ಚುನಾವಣಾಧಿಕಾರಿಗಳನ್ನು ಪ್ರಶ್ನಿಸಿದಾಗ, ಬುರ್ಖಾ ಧರಿಸಿದ್ದರಿಂದ ನಮಗೆ ಸರಿಯಾಗಿ ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಮತದಾರರು ಮತ್ತು ಚುನಾವಣಾಧಿಕಾರಿಗಳ ನಡುವಿನ ವಾಗ್ವಾದದ ವಿಡಿಯೋ ವೈರಲ್‌ ಆಗಿದೆ, ಮತದಾರರು ಮತಗಟ್ಟೆಯೊಳಗೆ ಅಧಿಕಾರಿಗಳನ್ನು ಪ್ರಶ್ನಿಸುತ್ತಿರುವುದನ್ನು ವಿಡಿಯೋ ತೋರಿಸುತ್ತಿದೆ. ಅದೇ ಮತಗಟ್ಟೆಯ ಇತರ ಇಬ್ಬರು ಮತದಾರರು ಕೂಡ  ತಮ್ಮ ಮತಗಳನ್ನು ಬೇರೆ ಯಾರೋ ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಕಲಿ ಮತಗಳ ನಿಖರ ಸಂಖ್ಯೆ ಸರಿಯಾಗಿ ತಿಳಿದು ಬಂದಿಲ್ಲ. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಮೇಯರ್ ಬಿಎನ್ ಮಂಜುನಾಥ್ ರೆಡ್ಡಿ, ಆ ಮತಗಟ್ಟೆಯಲ್ಲಿ 9 ಮತದಾರರು ಇದೇ ಪರಿಸ್ಥಿತಿ ಎದುರಿಸಿದ್ದಾರೆ. ನಾವು ರಿಜಿಸ್ಟರ್‌ನಲ್ಲಿ  ನಕಲಿ ಮತದಾನ ಮಾಡಿದವರ ಸಹಿಯನ್ನು ತೋರಿಸಲು ಅಧಿಕಾರಿಗಳನ್ನು ಕೇಳಿದಾಗ, ಚುನಾವಣಾ ಅಧಿಕಾರಿಗಳು ನಿರಾಕರಿಸಿದರು. ಸಾಕಷ್ಟು ಪ್ರತಿಭಟನೆ ಮತ್ತು ವಾದದ ನಂತರ ಅವರು ಅಂತಿಮವಾಗಿ 5.30ಕ್ಕೆ ಜನರಿಗೆ ಮತ ಚಲಾಯಿಸಲು ಅವಕಾಶ ಮಾಡಿಕೊಟ್ಟರು ಎಂದು ಹೇಳಿದ್ದಾರೆ.

ಚುನಾವಣಾ ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ಇಂತಹ ಒಂದೇ ಒಂದು ಘಟನೆ ಮಾತ್ರ ನಡೆದಿದೆ. ನಾವು ಟೆಂಡರ್ ಮತದಾನಕ್ಕೆ ಅವಕಾಶ ನೀಡಿದ್ದೇವೆಯೇ ಹೊರತು ಸವಾಲಿನ ಮತಕ್ಕಲ್ಲ. ಘಟನೆ ಬೆಳಕಿಗೆ ಬಂದ ನಂತರ ಮತಗಟ್ಟೆ ಅಧಿಕಾರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ.

ಸಂತ್ರಸ್ತ ಮತದಾರರಿಗೆ ಚಾಲೆಂಜಿಂಗ್‌ ವೋಟ್‌’ ಹಾಕಲು ಅವಕಾಶ ನೀಡಬೇಕಿತ್ತು ಆದರೆ ಅಧಿಕಾರಿಗಳು ಅದಕ್ಕೆ ಅವಕಾಶ ನೀಡಲಿಲ್ಲ. ಬದಲಿಗೆ ಟೆಂಡರ್ ಮತದಾನಕ್ಕೆ ಅವಕಾಶ ನೀಡಿದ್ದಾರೆ ಎಂದು ಮಂಜುನಾಥ್ ರೆಡ್ಡಿ ಹೇಳಿದ್ದಾರೆ. ಮತದಾರರು ತಮ್ಮ ಬದಲಿಗೆ ಯಾರಾದರೂ ಮೊದಲೇ ಮತದಾನ ಮಾಡಿದ್ದರೆ 49P ಅಡಿಯಲ್ಲಿ ಮತ್ತೆ ಮತ ಚಲಾಯಿಸಬಹುದು. ಈ ಟೆಂಡರ್ ಮತಗಳನ್ನು ಬ್ಯಾಲೆಟ್ ಪೇಪರ್‌ಗಳಲ್ಲಿ ಹಾಕಲಾಗುತ್ತದೆ. ಪ್ರತ್ಯೇಕವಾಗಿ ವಿನ್ಯಾಸ ಮಾಡಿರುವ ಬ್ಯಾಲೆಟ್ ಪೇಪರ್‌ನಲ್ಲಿ ಮತ ಚಲಾಯಿಸಲು ಮತದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ.

ಇದನ್ನು ಓದಿ:ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...