Homeಮುಖಪುಟಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಯೋಜಿತ ಕುತಂತ್ರ?

ಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಯೋಜಿತ ಕುತಂತ್ರ?

- Advertisement -
- Advertisement -

ದೇಶದಾದ್ಯಂತ ಲೋಕಸಭೆ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಎರಡು ಹಂತಗಳ ಮತದಾನ ಮುಗಿದಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳ ಮತದಾನವೂ ಏಪ್ರಿಲ್ 26ರಂದು ನಡೆದಿದೆ.

ಈ ನಡುವೆ ಗುಜರಾತ್‌ನ ಸೂರತ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರವನ್ನು ಮೂವರು ಸೂಚಕರ ಸಹಿ ಇಲ್ಲಾ ಎಂಬ ಕಾರಣ ನೀಡಿ ಜಿಲ್ಲಾ ಚುನಾವಣಾಧಿಕಾರಿ ಏಪ್ರಿಲ್ 21 ರಂದು ತಿರಸ್ಕರಿಸಿದ್ದರು. ಅದೇ ಕಾರಣ ನೀಡಿ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನೂ ಅಧಿಕಾರಿಗಳು ತಿರಸ್ಕರಿಸಿದ್ದರು. ಹಾಗಾಗಿ, ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿ ಇಲ್ಲದಂತಾಯಿತು.

ನಂತರ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಹೊರತುಪಡಿಸಿ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂತೆಗೆಕೊಂಡರು. ಏಪ್ರಿಲ್ 22, 2024 ರಂದು ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ‘ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು. ಮೇ 7ರಂದು ಕ್ಷೇತ್ರದಲ್ಲಿ ಮತದಾನ ನಡೆಯಬೇಕಿತ್ತು. ಅದಕ್ಕೂ ಎರಡು ವಾರಗಳ ಮೊದಲು ಈ ಬೆಳವಣಿಗೆ ನಡೆದಿದೆ.

ಅವಿರೋಧ ಆಯ್ಕೆ ಯೋಜಿತ ಕುತಂತ್ರ?

ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳು ಇಲ್ಲದಿದ್ದರೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಸಾಮಾನ್ಯ ಪ್ರಕ್ರಿಯೆ. ಸೂರತ್‌ನಲ್ಲಿ ಹಾಗೆಯೇ ನಡೆದಿದೆ. ಆದರೆ, ಇಲ್ಲಿ ಯೋಜಿತ ಕುತಂತ್ರ ಮಾಡಿ ಬಿಜೆಪಿ ಅಭ್ಯರ್ಥಿಗೆ ಪ್ರತಿಸ್ಪರ್ಧಿಗಳು ಇಲ್ಲದಂತೆ ಮಾಡಲಾಗಿದೆಯಾ? ಎಂಬ ಅನುಮಾನ ಮೂಡಿದೆ.

ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದವರು ಆ ಸಹಿ ತಮ್ಮದಲ್ಲ ಎಂದು ಹೇಳಿದ್ದರಿಂದಾಗಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಇಲ್ಲಿ ಕುತೂಹಲಕಾರಿ ಅಂಶವೆಂದರೆ, ಕಾಂಗ್ರೆಸ್‌ ಅಭ್ಯರ್ಥಿಯ ನಾಪಪತ್ರಕ್ಕೆ ಸಹಿ ಹಾಕಿವರು ಅಭ್ಯರ್ಥಿಯ ಸ್ವಂತ ಭಾವ, ಅಳಿಯ ಮತ್ತು ಪಾಲುದಾರರು. ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದ ಬದಲಿ ಅಭ್ಯರ್ಥಿಯ ಸೂಚಕರಲ್ಲಿ ಒಬ್ಬರು ತನ್ನ ಸಹಿ ಫೋರ್ಜರಿ ಮಾಡಲಾಗಿದೆ ಎಂದು ಹೇಳಿದ್ದರಿಂದ ಅವರ ನಾಮಪತ್ರವೂ ತಿರಸ್ಕೃತಗೊಂಡಿದೆ.

ಇಲ್ಲಿ ಅನುಮಾನಕ್ಕೆ ಕಾರಣವಾದ ಅಂಶವೇನೆಂದರೆ, ಅಭ್ಯರ್ಥಿಯ ಸ್ವಂತ ಭಾವ, ಅಳಿಯ ಮತ್ತು ಪಾಲುದಾರನೇ ಸಹಿ ನಮ್ಮದಲ್ಲ ಎಂದಿರುವುದು ಯಾಕೆ? ಹಾಗಾದರೆ, ಅವರು ಸಹಿ ಹಾಕದೆ ಇನ್ಯಾರು ಸಹಿ ಹಾಕಿದರು? ಒಂದು ವೇಳೆ ಸಹಿ ಅವರದ್ದೇ ಆದರೂ ನಮ್ಮದಲ್ಲ ಎಂದಿರುವುದು ಯಾಕೆ? ಈ ವಿಚಾರಗಳು ಅಭ್ಯರ್ಥಿಗೆ ಗೊತ್ತಿಲ್ಲವೇ? ಲೋಕಸಭೆ ಚುನಾವಣೆಯಂತಹ ಅತ್ಯಂತ ಮಹತ್ವದ ಸ್ಪರ್ಧೆಯಲ್ಲಿ ಅಭ್ಯರ್ಥಿ ಇಷ್ಟೊಂದು ನಿರ್ಲಕ್ಷ್ಯ ವಹಿಸಲು ಸಾಧ್ಯವೇ ಎಂಬುದಾಗಿದೆ.

ಬದಲಿ ಅಭ್ಯರ್ಥಿಯದ್ದೂ ಇದೇ ಕಥೆ. ಅವರ ಸೂಚಕರಲ್ಲಿ ಒಬ್ಬರು ತನ್ನ ಸಹಿ ಫೋರ್ಜರಿ ಮಾಡಲಾಗಿದೆ ಎಂದಿದ್ದರು. ಹಾಗಾದರೆ, ನಿಜವಾಗಿಯೂ ಸೂಚಕರ ಸಹಿ ಫೋರ್ಜರಿ ಮಾಡಲಾಗಿತ್ತಾ? ಒಂದು ವೇಳೆ ಮಾಡಿದ್ದರೂ ಯಾಕೆ? ಅಭ್ಯರ್ಥಿಯ ಗಮನಕ್ಕೆ ಬಾರದೆ ಇದು ನಡೆಯಿತಾ? ಎಂಬ ಪ್ರಶ್ನೆಗಳು ಮೂಡುತ್ತವೆ.

ಸ್ವತಂತ್ರ ಅಭ್ಯರ್ಥಿಗಳಿಂದ ನಾಮಪತ್ರ ಹಿಂತೆಗೆಸಿದ ಬಿಜೆಪಿ?

ಕಾಂಗ್ರೆಸ್‌ನ ಮುಖ್ಯ ಅಭ್ಯರ್ಥಿ ಮತ್ತು ಬದಲಿ ಅಭ್ಯರ್ಥಿ ಇಬ್ಬರ ನಾಮಪತ್ರವೂ ತಿರಸ್ಕೃತಗೊಂಡ ಬಳಿಕ, ಚುನಾವಣಾ ಕಣದಲ್ಲಿದ್ದ ಒಬ್ಬರು ಬಿಎಸ್‌ಪಿ ಮತ್ತು 8 ಮಂದಿ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂತೆಗೆದುಕೊಂಡಿದ್ದರು. ಈ ಮೂಲಕ ಬಿಜೆಪಿ ಅಭ್ಯರ್ಥಿ ಸ್ಪರ್ಧೆ ಇಲ್ಲದೆ ಆಯ್ಕೆಯಾಗಲು ದಾರಿ ಮಾಡಿ ಕೊಟ್ಟಿದ್ದರು. ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ಒಂದೇ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಇಲ್ಲಿ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಬಿಜೆಪಿ ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಹಿಂತೆಗೆಸುವ ಮೂಲಕ ತನ್ನ ಅಭ್ಯರ್ಥಿಯ ಗೆಲುವಿಗೆ ದಾರಿ ಮಾಡಿಕೊಟ್ಟಿತ್ತು ಎಂಬ ಮಾತುಗಳು ಆರಂಭದಲ್ಲಿ ಕೇಳಿ ಬಂದಿತ್ತು. ಇದನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್ ತಾವ್ಡೆ ಏಪ್ರಿಲ್ 23ರಂದು ಒಪ್ಪಿಕೊಂಡಿದ್ದಾರೆ. “ಸೂರತ್‌ನಲ್ಲಿ ಸ್ವತಂತ್ರ ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯುವಂತೆ ನಾವು ಕೇಳಿಕೊಂಡಿದ್ದೆವು” ಎಂದು ತಾವ್ಡೆ ಹೇಳಿದ್ದಾರೆ.

ಅಭ್ಯರ್ಥಿಯನ್ನು ಉಚ್ಚಾಟಿಸಿದ ಕಾಂಗ್ರೆಸ್‌ :

ಬಿಜೆಪಿ ಅಭ್ಯರ್ಥಿಯ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ನಾಪತ್ತೆಯಾಗಿದ್ದರು. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಕೆಲ ವರದಿಗಳು ಬಿಜೆಪಿಯವರು ನೀಲೇಶ್ ಅವರನ್ನು ಅಪಹರಿಸಿದ್ದಾರೆಯೇ? ಎಂಬ ಅನುಮಾನ ವ್ಯಕ್ತಪಡಿಸಿತ್ತು. ಕುಂಭಾಣಿ ಬಿಜೆಪಿ ರೂಪಿಸಿದ ಸಂಚಿನ ಪಾಲುದಾರ ಎಂಬ ಆರೋಪಗಳೂ ಕೇಳಿ ಬಂದಿತ್ತು.

ಈ ಎಲ್ಲಾ ಗೊಂದಲಗಳ ನಡುವೆ ನೀಲೇಶ್ ಕುಂಭಾಣಿಯನ್ನು ಕಾಂಗ್ರೆಸ್ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ನೀಲೇಶ್ ಕುಂಭಾಣಿ ನಾಮಪತ್ರ ಸಲ್ಲಿಕೆ ವೇಳೆ ಅತ್ಯಂತ ನಿರ್ಲಕ್ಷ್ಯವಹಿಸಿದ್ದಾರೆ ಅಥವಾ ಬಿಜೆಪಿ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. “ನಿಮ್ಮ ನಾಮಪತ್ರದ ತಿರಸ್ಕಾರವು ನೀವು ಅತ್ಯಂತ ನಿರ್ಲಕ್ಷ್ಯವಹಿಸಿರುವುದು ಅಥವಾ ಬಿಜೆಪಿಯೊಂದಿಗೆ ಸಂಬಂಧವನ್ನು ಹೊಂದಿದ್ದೀರಿ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಆದರೂ, ನ್ಯಾಯದ ತತ್ವಗಳಿಗೆ ಅನುಸಾರವಾಗಿ, ಶಿಸ್ತು ಸಮಿತಿಯು ಅದರ ಮುಂದೆ ನಿಮ್ಮ ವಾದವನ್ನು ಮಂಡಿಸಲು ಪಕ್ಷ ಸಾಕಷ್ಟು ಸಮಯವನ್ನು ಒದಗಿಸಿತ್ತು. ಆದರೆ, ನೀವು ಪಕ್ಷಕ್ಕೆ ಯಾವುದೇ ವಿವರಣೆ ನೀಡದೆ ಏಕಾಏಕಿ ನಾಪತ್ತೆಯಾಗಿರುವುದು ನಿಮ್ಮನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ನಿರ್ಧಾರಕ್ಕೆ ಕಾರಣವಾಗಿದೆ” ಎಂದು ಶಿಸ್ತು ಸಮಿತಿ ಸದಸ್ಯ ಬಾಲುಭಾಯ್ ಪಟೇಲ್ ಸಹಿ ಹಾಕಿರುವ ಅಮಾನತು ಆದೇಶದಲ್ಲಿ ಹೇಳಲಾಗಿದೆ.

ವಿಡಿಯೋ ಸಂದೇಶವೊಂದರಲ್ಲಿ ಕುಂಭಾಣಿ ಅವರು ತಾನು ನಾಪತ್ತೆಯಾಗಿರುವುದನ್ನು ನಿರಾಕರಿಸಿದ್ದಾರೆ. “ಕಾಂಗ್ರೆಸ್‌ ಪಕ್ಷಕ್ಕೆ ನಾನು ಬದ್ಧನಾಗಿದ್ದೇನೆ. ನಾನು ಕಾಂಗ್ರೆಸ್‌ನ ನಿಷ್ಠಾವಂತ ಸದಸ್ಯನಾಗಿದ್ದೇನೆ ಮತ್ತು ಪಕ್ಷದಲ್ಲೇ ಉಳಿಯುತ್ತೇನೆ. ಪಕ್ಷದ ಉನ್ನತ ನಾಯಕತ್ವದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ” ಎಂದು ಹೇಳಿದ್ದಾರೆ.

‘ಮ್ಯಾಚ್ ಫಿಕ್ಸಿಂಗ್’ ಎಂದ ಜೈರಾಮ್ ರಮೇಶ್

ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಯ ಕುರಿತು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ತೀವ್ರ ಕಳವಳ, ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ.

ಮೋದಿಯವರ ‘ಅನ್ಯಾಯ ಕಾಲ’ದಲ್ಲಿ ಎಂಎಸ್‌ಎಂಇ ಮಾಲೀಕರು ಮತ್ತು ಉದ್ಯಮಿಗಳು ಎದುರಿಸುತ್ತಿರುವ ಸಂಕಷ್ಟ ಮತ್ತು ಅವರ ಆಕ್ರೋಶ ಬಿಜೆಪಿಯನ್ನು ಯಾವ ಹಂತಕ್ಕೆ ಕೊಂಡೊಯ್ದಿದೆ ಎಂದರೆ, ಅವರು 1984ರಿಂದ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿರುವ ಸೂರತ್ ಕ್ಷೇತ್ರದಲ್ಲಿ ‘ಮ್ಯಾಚ್-ಫಿಕ್ಸ್’ ಮಾಡಲು ಪ್ರಯತ್ನಿಸಿದ್ದಾರೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ನಮ್ಮ ಚುನಾವಣೆಗಳು, ನಮ್ಮ ಪ್ರಜಾಪ್ರಭುತ್ವ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಎಲ್ಲವೂ ಅಪಾಯದಲ್ಲಿದೆ. ಇದು ನಮ್ಮ ಜೀವಮಾನದ ಪ್ರಮುಖ ಚುನಾವಣೆ!” ಎಂದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...