Homeಮುಖಪುಟಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಯೋಜಿತ ಕುತಂತ್ರ?

ಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಯೋಜಿತ ಕುತಂತ್ರ?

- Advertisement -
- Advertisement -

ದೇಶದಾದ್ಯಂತ ಲೋಕಸಭೆ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಎರಡು ಹಂತಗಳ ಮತದಾನ ಮುಗಿದಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳ ಮತದಾನವೂ ಏಪ್ರಿಲ್ 26ರಂದು ನಡೆದಿದೆ.

ಈ ನಡುವೆ ಗುಜರಾತ್‌ನ ಸೂರತ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರವನ್ನು ಮೂವರು ಸೂಚಕರ ಸಹಿ ಇಲ್ಲಾ ಎಂಬ ಕಾರಣ ನೀಡಿ ಜಿಲ್ಲಾ ಚುನಾವಣಾಧಿಕಾರಿ ಏಪ್ರಿಲ್ 21 ರಂದು ತಿರಸ್ಕರಿಸಿದ್ದರು. ಅದೇ ಕಾರಣ ನೀಡಿ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನೂ ಅಧಿಕಾರಿಗಳು ತಿರಸ್ಕರಿಸಿದ್ದರು. ಹಾಗಾಗಿ, ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿ ಇಲ್ಲದಂತಾಯಿತು.

ನಂತರ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಹೊರತುಪಡಿಸಿ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂತೆಗೆಕೊಂಡರು. ಏಪ್ರಿಲ್ 22, 2024 ರಂದು ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ‘ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು. ಮೇ 7ರಂದು ಕ್ಷೇತ್ರದಲ್ಲಿ ಮತದಾನ ನಡೆಯಬೇಕಿತ್ತು. ಅದಕ್ಕೂ ಎರಡು ವಾರಗಳ ಮೊದಲು ಈ ಬೆಳವಣಿಗೆ ನಡೆದಿದೆ.

ಅವಿರೋಧ ಆಯ್ಕೆ ಯೋಜಿತ ಕುತಂತ್ರ?

ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳು ಇಲ್ಲದಿದ್ದರೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಸಾಮಾನ್ಯ ಪ್ರಕ್ರಿಯೆ. ಸೂರತ್‌ನಲ್ಲಿ ಹಾಗೆಯೇ ನಡೆದಿದೆ. ಆದರೆ, ಇಲ್ಲಿ ಯೋಜಿತ ಕುತಂತ್ರ ಮಾಡಿ ಬಿಜೆಪಿ ಅಭ್ಯರ್ಥಿಗೆ ಪ್ರತಿಸ್ಪರ್ಧಿಗಳು ಇಲ್ಲದಂತೆ ಮಾಡಲಾಗಿದೆಯಾ? ಎಂಬ ಅನುಮಾನ ಮೂಡಿದೆ.

ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದವರು ಆ ಸಹಿ ತಮ್ಮದಲ್ಲ ಎಂದು ಹೇಳಿದ್ದರಿಂದಾಗಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಇಲ್ಲಿ ಕುತೂಹಲಕಾರಿ ಅಂಶವೆಂದರೆ, ಕಾಂಗ್ರೆಸ್‌ ಅಭ್ಯರ್ಥಿಯ ನಾಪಪತ್ರಕ್ಕೆ ಸಹಿ ಹಾಕಿವರು ಅಭ್ಯರ್ಥಿಯ ಸ್ವಂತ ಭಾವ, ಅಳಿಯ ಮತ್ತು ಪಾಲುದಾರರು. ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದ ಬದಲಿ ಅಭ್ಯರ್ಥಿಯ ಸೂಚಕರಲ್ಲಿ ಒಬ್ಬರು ತನ್ನ ಸಹಿ ಫೋರ್ಜರಿ ಮಾಡಲಾಗಿದೆ ಎಂದು ಹೇಳಿದ್ದರಿಂದ ಅವರ ನಾಮಪತ್ರವೂ ತಿರಸ್ಕೃತಗೊಂಡಿದೆ.

ಇಲ್ಲಿ ಅನುಮಾನಕ್ಕೆ ಕಾರಣವಾದ ಅಂಶವೇನೆಂದರೆ, ಅಭ್ಯರ್ಥಿಯ ಸ್ವಂತ ಭಾವ, ಅಳಿಯ ಮತ್ತು ಪಾಲುದಾರನೇ ಸಹಿ ನಮ್ಮದಲ್ಲ ಎಂದಿರುವುದು ಯಾಕೆ? ಹಾಗಾದರೆ, ಅವರು ಸಹಿ ಹಾಕದೆ ಇನ್ಯಾರು ಸಹಿ ಹಾಕಿದರು? ಒಂದು ವೇಳೆ ಸಹಿ ಅವರದ್ದೇ ಆದರೂ ನಮ್ಮದಲ್ಲ ಎಂದಿರುವುದು ಯಾಕೆ? ಈ ವಿಚಾರಗಳು ಅಭ್ಯರ್ಥಿಗೆ ಗೊತ್ತಿಲ್ಲವೇ? ಲೋಕಸಭೆ ಚುನಾವಣೆಯಂತಹ ಅತ್ಯಂತ ಮಹತ್ವದ ಸ್ಪರ್ಧೆಯಲ್ಲಿ ಅಭ್ಯರ್ಥಿ ಇಷ್ಟೊಂದು ನಿರ್ಲಕ್ಷ್ಯ ವಹಿಸಲು ಸಾಧ್ಯವೇ ಎಂಬುದಾಗಿದೆ.

ಬದಲಿ ಅಭ್ಯರ್ಥಿಯದ್ದೂ ಇದೇ ಕಥೆ. ಅವರ ಸೂಚಕರಲ್ಲಿ ಒಬ್ಬರು ತನ್ನ ಸಹಿ ಫೋರ್ಜರಿ ಮಾಡಲಾಗಿದೆ ಎಂದಿದ್ದರು. ಹಾಗಾದರೆ, ನಿಜವಾಗಿಯೂ ಸೂಚಕರ ಸಹಿ ಫೋರ್ಜರಿ ಮಾಡಲಾಗಿತ್ತಾ? ಒಂದು ವೇಳೆ ಮಾಡಿದ್ದರೂ ಯಾಕೆ? ಅಭ್ಯರ್ಥಿಯ ಗಮನಕ್ಕೆ ಬಾರದೆ ಇದು ನಡೆಯಿತಾ? ಎಂಬ ಪ್ರಶ್ನೆಗಳು ಮೂಡುತ್ತವೆ.

ಸ್ವತಂತ್ರ ಅಭ್ಯರ್ಥಿಗಳಿಂದ ನಾಮಪತ್ರ ಹಿಂತೆಗೆಸಿದ ಬಿಜೆಪಿ?

ಕಾಂಗ್ರೆಸ್‌ನ ಮುಖ್ಯ ಅಭ್ಯರ್ಥಿ ಮತ್ತು ಬದಲಿ ಅಭ್ಯರ್ಥಿ ಇಬ್ಬರ ನಾಮಪತ್ರವೂ ತಿರಸ್ಕೃತಗೊಂಡ ಬಳಿಕ, ಚುನಾವಣಾ ಕಣದಲ್ಲಿದ್ದ ಒಬ್ಬರು ಬಿಎಸ್‌ಪಿ ಮತ್ತು 8 ಮಂದಿ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂತೆಗೆದುಕೊಂಡಿದ್ದರು. ಈ ಮೂಲಕ ಬಿಜೆಪಿ ಅಭ್ಯರ್ಥಿ ಸ್ಪರ್ಧೆ ಇಲ್ಲದೆ ಆಯ್ಕೆಯಾಗಲು ದಾರಿ ಮಾಡಿ ಕೊಟ್ಟಿದ್ದರು. ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ಒಂದೇ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಇಲ್ಲಿ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಬಿಜೆಪಿ ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಹಿಂತೆಗೆಸುವ ಮೂಲಕ ತನ್ನ ಅಭ್ಯರ್ಥಿಯ ಗೆಲುವಿಗೆ ದಾರಿ ಮಾಡಿಕೊಟ್ಟಿತ್ತು ಎಂಬ ಮಾತುಗಳು ಆರಂಭದಲ್ಲಿ ಕೇಳಿ ಬಂದಿತ್ತು. ಇದನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್ ತಾವ್ಡೆ ಏಪ್ರಿಲ್ 23ರಂದು ಒಪ್ಪಿಕೊಂಡಿದ್ದಾರೆ. “ಸೂರತ್‌ನಲ್ಲಿ ಸ್ವತಂತ್ರ ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯುವಂತೆ ನಾವು ಕೇಳಿಕೊಂಡಿದ್ದೆವು” ಎಂದು ತಾವ್ಡೆ ಹೇಳಿದ್ದಾರೆ.

ಅಭ್ಯರ್ಥಿಯನ್ನು ಉಚ್ಚಾಟಿಸಿದ ಕಾಂಗ್ರೆಸ್‌ :

ಬಿಜೆಪಿ ಅಭ್ಯರ್ಥಿಯ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ನಾಪತ್ತೆಯಾಗಿದ್ದರು. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಕೆಲ ವರದಿಗಳು ಬಿಜೆಪಿಯವರು ನೀಲೇಶ್ ಅವರನ್ನು ಅಪಹರಿಸಿದ್ದಾರೆಯೇ? ಎಂಬ ಅನುಮಾನ ವ್ಯಕ್ತಪಡಿಸಿತ್ತು. ಕುಂಭಾಣಿ ಬಿಜೆಪಿ ರೂಪಿಸಿದ ಸಂಚಿನ ಪಾಲುದಾರ ಎಂಬ ಆರೋಪಗಳೂ ಕೇಳಿ ಬಂದಿತ್ತು.

ಈ ಎಲ್ಲಾ ಗೊಂದಲಗಳ ನಡುವೆ ನೀಲೇಶ್ ಕುಂಭಾಣಿಯನ್ನು ಕಾಂಗ್ರೆಸ್ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ನೀಲೇಶ್ ಕುಂಭಾಣಿ ನಾಮಪತ್ರ ಸಲ್ಲಿಕೆ ವೇಳೆ ಅತ್ಯಂತ ನಿರ್ಲಕ್ಷ್ಯವಹಿಸಿದ್ದಾರೆ ಅಥವಾ ಬಿಜೆಪಿ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. “ನಿಮ್ಮ ನಾಮಪತ್ರದ ತಿರಸ್ಕಾರವು ನೀವು ಅತ್ಯಂತ ನಿರ್ಲಕ್ಷ್ಯವಹಿಸಿರುವುದು ಅಥವಾ ಬಿಜೆಪಿಯೊಂದಿಗೆ ಸಂಬಂಧವನ್ನು ಹೊಂದಿದ್ದೀರಿ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಆದರೂ, ನ್ಯಾಯದ ತತ್ವಗಳಿಗೆ ಅನುಸಾರವಾಗಿ, ಶಿಸ್ತು ಸಮಿತಿಯು ಅದರ ಮುಂದೆ ನಿಮ್ಮ ವಾದವನ್ನು ಮಂಡಿಸಲು ಪಕ್ಷ ಸಾಕಷ್ಟು ಸಮಯವನ್ನು ಒದಗಿಸಿತ್ತು. ಆದರೆ, ನೀವು ಪಕ್ಷಕ್ಕೆ ಯಾವುದೇ ವಿವರಣೆ ನೀಡದೆ ಏಕಾಏಕಿ ನಾಪತ್ತೆಯಾಗಿರುವುದು ನಿಮ್ಮನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ನಿರ್ಧಾರಕ್ಕೆ ಕಾರಣವಾಗಿದೆ” ಎಂದು ಶಿಸ್ತು ಸಮಿತಿ ಸದಸ್ಯ ಬಾಲುಭಾಯ್ ಪಟೇಲ್ ಸಹಿ ಹಾಕಿರುವ ಅಮಾನತು ಆದೇಶದಲ್ಲಿ ಹೇಳಲಾಗಿದೆ.

ವಿಡಿಯೋ ಸಂದೇಶವೊಂದರಲ್ಲಿ ಕುಂಭಾಣಿ ಅವರು ತಾನು ನಾಪತ್ತೆಯಾಗಿರುವುದನ್ನು ನಿರಾಕರಿಸಿದ್ದಾರೆ. “ಕಾಂಗ್ರೆಸ್‌ ಪಕ್ಷಕ್ಕೆ ನಾನು ಬದ್ಧನಾಗಿದ್ದೇನೆ. ನಾನು ಕಾಂಗ್ರೆಸ್‌ನ ನಿಷ್ಠಾವಂತ ಸದಸ್ಯನಾಗಿದ್ದೇನೆ ಮತ್ತು ಪಕ್ಷದಲ್ಲೇ ಉಳಿಯುತ್ತೇನೆ. ಪಕ್ಷದ ಉನ್ನತ ನಾಯಕತ್ವದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ” ಎಂದು ಹೇಳಿದ್ದಾರೆ.

‘ಮ್ಯಾಚ್ ಫಿಕ್ಸಿಂಗ್’ ಎಂದ ಜೈರಾಮ್ ರಮೇಶ್

ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಯ ಕುರಿತು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ತೀವ್ರ ಕಳವಳ, ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ.

ಮೋದಿಯವರ ‘ಅನ್ಯಾಯ ಕಾಲ’ದಲ್ಲಿ ಎಂಎಸ್‌ಎಂಇ ಮಾಲೀಕರು ಮತ್ತು ಉದ್ಯಮಿಗಳು ಎದುರಿಸುತ್ತಿರುವ ಸಂಕಷ್ಟ ಮತ್ತು ಅವರ ಆಕ್ರೋಶ ಬಿಜೆಪಿಯನ್ನು ಯಾವ ಹಂತಕ್ಕೆ ಕೊಂಡೊಯ್ದಿದೆ ಎಂದರೆ, ಅವರು 1984ರಿಂದ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿರುವ ಸೂರತ್ ಕ್ಷೇತ್ರದಲ್ಲಿ ‘ಮ್ಯಾಚ್-ಫಿಕ್ಸ್’ ಮಾಡಲು ಪ್ರಯತ್ನಿಸಿದ್ದಾರೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ನಮ್ಮ ಚುನಾವಣೆಗಳು, ನಮ್ಮ ಪ್ರಜಾಪ್ರಭುತ್ವ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಎಲ್ಲವೂ ಅಪಾಯದಲ್ಲಿದೆ. ಇದು ನಮ್ಮ ಜೀವಮಾನದ ಪ್ರಮುಖ ಚುನಾವಣೆ!” ಎಂದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...