Homeಮುಖಪುಟಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಯೋಜಿತ ಕುತಂತ್ರ?

ಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಯೋಜಿತ ಕುತಂತ್ರ?

- Advertisement -
- Advertisement -

ದೇಶದಾದ್ಯಂತ ಲೋಕಸಭೆ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಎರಡು ಹಂತಗಳ ಮತದಾನ ಮುಗಿದಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳ ಮತದಾನವೂ ಏಪ್ರಿಲ್ 26ರಂದು ನಡೆದಿದೆ.

ಈ ನಡುವೆ ಗುಜರಾತ್‌ನ ಸೂರತ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರವನ್ನು ಮೂವರು ಸೂಚಕರ ಸಹಿ ಇಲ್ಲಾ ಎಂಬ ಕಾರಣ ನೀಡಿ ಜಿಲ್ಲಾ ಚುನಾವಣಾಧಿಕಾರಿ ಏಪ್ರಿಲ್ 21 ರಂದು ತಿರಸ್ಕರಿಸಿದ್ದರು. ಅದೇ ಕಾರಣ ನೀಡಿ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನೂ ಅಧಿಕಾರಿಗಳು ತಿರಸ್ಕರಿಸಿದ್ದರು. ಹಾಗಾಗಿ, ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿ ಇಲ್ಲದಂತಾಯಿತು.

ನಂತರ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಹೊರತುಪಡಿಸಿ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂತೆಗೆಕೊಂಡರು. ಏಪ್ರಿಲ್ 22, 2024 ರಂದು ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ‘ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು. ಮೇ 7ರಂದು ಕ್ಷೇತ್ರದಲ್ಲಿ ಮತದಾನ ನಡೆಯಬೇಕಿತ್ತು. ಅದಕ್ಕೂ ಎರಡು ವಾರಗಳ ಮೊದಲು ಈ ಬೆಳವಣಿಗೆ ನಡೆದಿದೆ.

ಅವಿರೋಧ ಆಯ್ಕೆ ಯೋಜಿತ ಕುತಂತ್ರ?

ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳು ಇಲ್ಲದಿದ್ದರೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಸಾಮಾನ್ಯ ಪ್ರಕ್ರಿಯೆ. ಸೂರತ್‌ನಲ್ಲಿ ಹಾಗೆಯೇ ನಡೆದಿದೆ. ಆದರೆ, ಇಲ್ಲಿ ಯೋಜಿತ ಕುತಂತ್ರ ಮಾಡಿ ಬಿಜೆಪಿ ಅಭ್ಯರ್ಥಿಗೆ ಪ್ರತಿಸ್ಪರ್ಧಿಗಳು ಇಲ್ಲದಂತೆ ಮಾಡಲಾಗಿದೆಯಾ? ಎಂಬ ಅನುಮಾನ ಮೂಡಿದೆ.

ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದವರು ಆ ಸಹಿ ತಮ್ಮದಲ್ಲ ಎಂದು ಹೇಳಿದ್ದರಿಂದಾಗಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಇಲ್ಲಿ ಕುತೂಹಲಕಾರಿ ಅಂಶವೆಂದರೆ, ಕಾಂಗ್ರೆಸ್‌ ಅಭ್ಯರ್ಥಿಯ ನಾಪಪತ್ರಕ್ಕೆ ಸಹಿ ಹಾಕಿವರು ಅಭ್ಯರ್ಥಿಯ ಸ್ವಂತ ಭಾವ, ಅಳಿಯ ಮತ್ತು ಪಾಲುದಾರರು. ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದ ಬದಲಿ ಅಭ್ಯರ್ಥಿಯ ಸೂಚಕರಲ್ಲಿ ಒಬ್ಬರು ತನ್ನ ಸಹಿ ಫೋರ್ಜರಿ ಮಾಡಲಾಗಿದೆ ಎಂದು ಹೇಳಿದ್ದರಿಂದ ಅವರ ನಾಮಪತ್ರವೂ ತಿರಸ್ಕೃತಗೊಂಡಿದೆ.

ಇಲ್ಲಿ ಅನುಮಾನಕ್ಕೆ ಕಾರಣವಾದ ಅಂಶವೇನೆಂದರೆ, ಅಭ್ಯರ್ಥಿಯ ಸ್ವಂತ ಭಾವ, ಅಳಿಯ ಮತ್ತು ಪಾಲುದಾರನೇ ಸಹಿ ನಮ್ಮದಲ್ಲ ಎಂದಿರುವುದು ಯಾಕೆ? ಹಾಗಾದರೆ, ಅವರು ಸಹಿ ಹಾಕದೆ ಇನ್ಯಾರು ಸಹಿ ಹಾಕಿದರು? ಒಂದು ವೇಳೆ ಸಹಿ ಅವರದ್ದೇ ಆದರೂ ನಮ್ಮದಲ್ಲ ಎಂದಿರುವುದು ಯಾಕೆ? ಈ ವಿಚಾರಗಳು ಅಭ್ಯರ್ಥಿಗೆ ಗೊತ್ತಿಲ್ಲವೇ? ಲೋಕಸಭೆ ಚುನಾವಣೆಯಂತಹ ಅತ್ಯಂತ ಮಹತ್ವದ ಸ್ಪರ್ಧೆಯಲ್ಲಿ ಅಭ್ಯರ್ಥಿ ಇಷ್ಟೊಂದು ನಿರ್ಲಕ್ಷ್ಯ ವಹಿಸಲು ಸಾಧ್ಯವೇ ಎಂಬುದಾಗಿದೆ.

ಬದಲಿ ಅಭ್ಯರ್ಥಿಯದ್ದೂ ಇದೇ ಕಥೆ. ಅವರ ಸೂಚಕರಲ್ಲಿ ಒಬ್ಬರು ತನ್ನ ಸಹಿ ಫೋರ್ಜರಿ ಮಾಡಲಾಗಿದೆ ಎಂದಿದ್ದರು. ಹಾಗಾದರೆ, ನಿಜವಾಗಿಯೂ ಸೂಚಕರ ಸಹಿ ಫೋರ್ಜರಿ ಮಾಡಲಾಗಿತ್ತಾ? ಒಂದು ವೇಳೆ ಮಾಡಿದ್ದರೂ ಯಾಕೆ? ಅಭ್ಯರ್ಥಿಯ ಗಮನಕ್ಕೆ ಬಾರದೆ ಇದು ನಡೆಯಿತಾ? ಎಂಬ ಪ್ರಶ್ನೆಗಳು ಮೂಡುತ್ತವೆ.

ಸ್ವತಂತ್ರ ಅಭ್ಯರ್ಥಿಗಳಿಂದ ನಾಮಪತ್ರ ಹಿಂತೆಗೆಸಿದ ಬಿಜೆಪಿ?

ಕಾಂಗ್ರೆಸ್‌ನ ಮುಖ್ಯ ಅಭ್ಯರ್ಥಿ ಮತ್ತು ಬದಲಿ ಅಭ್ಯರ್ಥಿ ಇಬ್ಬರ ನಾಮಪತ್ರವೂ ತಿರಸ್ಕೃತಗೊಂಡ ಬಳಿಕ, ಚುನಾವಣಾ ಕಣದಲ್ಲಿದ್ದ ಒಬ್ಬರು ಬಿಎಸ್‌ಪಿ ಮತ್ತು 8 ಮಂದಿ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂತೆಗೆದುಕೊಂಡಿದ್ದರು. ಈ ಮೂಲಕ ಬಿಜೆಪಿ ಅಭ್ಯರ್ಥಿ ಸ್ಪರ್ಧೆ ಇಲ್ಲದೆ ಆಯ್ಕೆಯಾಗಲು ದಾರಿ ಮಾಡಿ ಕೊಟ್ಟಿದ್ದರು. ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ಒಂದೇ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಇಲ್ಲಿ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಬಿಜೆಪಿ ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಹಿಂತೆಗೆಸುವ ಮೂಲಕ ತನ್ನ ಅಭ್ಯರ್ಥಿಯ ಗೆಲುವಿಗೆ ದಾರಿ ಮಾಡಿಕೊಟ್ಟಿತ್ತು ಎಂಬ ಮಾತುಗಳು ಆರಂಭದಲ್ಲಿ ಕೇಳಿ ಬಂದಿತ್ತು. ಇದನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್ ತಾವ್ಡೆ ಏಪ್ರಿಲ್ 23ರಂದು ಒಪ್ಪಿಕೊಂಡಿದ್ದಾರೆ. “ಸೂರತ್‌ನಲ್ಲಿ ಸ್ವತಂತ್ರ ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯುವಂತೆ ನಾವು ಕೇಳಿಕೊಂಡಿದ್ದೆವು” ಎಂದು ತಾವ್ಡೆ ಹೇಳಿದ್ದಾರೆ.

ಅಭ್ಯರ್ಥಿಯನ್ನು ಉಚ್ಚಾಟಿಸಿದ ಕಾಂಗ್ರೆಸ್‌ :

ಬಿಜೆಪಿ ಅಭ್ಯರ್ಥಿಯ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ನಾಪತ್ತೆಯಾಗಿದ್ದರು. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಕೆಲ ವರದಿಗಳು ಬಿಜೆಪಿಯವರು ನೀಲೇಶ್ ಅವರನ್ನು ಅಪಹರಿಸಿದ್ದಾರೆಯೇ? ಎಂಬ ಅನುಮಾನ ವ್ಯಕ್ತಪಡಿಸಿತ್ತು. ಕುಂಭಾಣಿ ಬಿಜೆಪಿ ರೂಪಿಸಿದ ಸಂಚಿನ ಪಾಲುದಾರ ಎಂಬ ಆರೋಪಗಳೂ ಕೇಳಿ ಬಂದಿತ್ತು.

ಈ ಎಲ್ಲಾ ಗೊಂದಲಗಳ ನಡುವೆ ನೀಲೇಶ್ ಕುಂಭಾಣಿಯನ್ನು ಕಾಂಗ್ರೆಸ್ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ನೀಲೇಶ್ ಕುಂಭಾಣಿ ನಾಮಪತ್ರ ಸಲ್ಲಿಕೆ ವೇಳೆ ಅತ್ಯಂತ ನಿರ್ಲಕ್ಷ್ಯವಹಿಸಿದ್ದಾರೆ ಅಥವಾ ಬಿಜೆಪಿ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. “ನಿಮ್ಮ ನಾಮಪತ್ರದ ತಿರಸ್ಕಾರವು ನೀವು ಅತ್ಯಂತ ನಿರ್ಲಕ್ಷ್ಯವಹಿಸಿರುವುದು ಅಥವಾ ಬಿಜೆಪಿಯೊಂದಿಗೆ ಸಂಬಂಧವನ್ನು ಹೊಂದಿದ್ದೀರಿ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಆದರೂ, ನ್ಯಾಯದ ತತ್ವಗಳಿಗೆ ಅನುಸಾರವಾಗಿ, ಶಿಸ್ತು ಸಮಿತಿಯು ಅದರ ಮುಂದೆ ನಿಮ್ಮ ವಾದವನ್ನು ಮಂಡಿಸಲು ಪಕ್ಷ ಸಾಕಷ್ಟು ಸಮಯವನ್ನು ಒದಗಿಸಿತ್ತು. ಆದರೆ, ನೀವು ಪಕ್ಷಕ್ಕೆ ಯಾವುದೇ ವಿವರಣೆ ನೀಡದೆ ಏಕಾಏಕಿ ನಾಪತ್ತೆಯಾಗಿರುವುದು ನಿಮ್ಮನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ನಿರ್ಧಾರಕ್ಕೆ ಕಾರಣವಾಗಿದೆ” ಎಂದು ಶಿಸ್ತು ಸಮಿತಿ ಸದಸ್ಯ ಬಾಲುಭಾಯ್ ಪಟೇಲ್ ಸಹಿ ಹಾಕಿರುವ ಅಮಾನತು ಆದೇಶದಲ್ಲಿ ಹೇಳಲಾಗಿದೆ.

ವಿಡಿಯೋ ಸಂದೇಶವೊಂದರಲ್ಲಿ ಕುಂಭಾಣಿ ಅವರು ತಾನು ನಾಪತ್ತೆಯಾಗಿರುವುದನ್ನು ನಿರಾಕರಿಸಿದ್ದಾರೆ. “ಕಾಂಗ್ರೆಸ್‌ ಪಕ್ಷಕ್ಕೆ ನಾನು ಬದ್ಧನಾಗಿದ್ದೇನೆ. ನಾನು ಕಾಂಗ್ರೆಸ್‌ನ ನಿಷ್ಠಾವಂತ ಸದಸ್ಯನಾಗಿದ್ದೇನೆ ಮತ್ತು ಪಕ್ಷದಲ್ಲೇ ಉಳಿಯುತ್ತೇನೆ. ಪಕ್ಷದ ಉನ್ನತ ನಾಯಕತ್ವದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ” ಎಂದು ಹೇಳಿದ್ದಾರೆ.

‘ಮ್ಯಾಚ್ ಫಿಕ್ಸಿಂಗ್’ ಎಂದ ಜೈರಾಮ್ ರಮೇಶ್

ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಯ ಕುರಿತು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ತೀವ್ರ ಕಳವಳ, ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ.

ಮೋದಿಯವರ ‘ಅನ್ಯಾಯ ಕಾಲ’ದಲ್ಲಿ ಎಂಎಸ್‌ಎಂಇ ಮಾಲೀಕರು ಮತ್ತು ಉದ್ಯಮಿಗಳು ಎದುರಿಸುತ್ತಿರುವ ಸಂಕಷ್ಟ ಮತ್ತು ಅವರ ಆಕ್ರೋಶ ಬಿಜೆಪಿಯನ್ನು ಯಾವ ಹಂತಕ್ಕೆ ಕೊಂಡೊಯ್ದಿದೆ ಎಂದರೆ, ಅವರು 1984ರಿಂದ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿರುವ ಸೂರತ್ ಕ್ಷೇತ್ರದಲ್ಲಿ ‘ಮ್ಯಾಚ್-ಫಿಕ್ಸ್’ ಮಾಡಲು ಪ್ರಯತ್ನಿಸಿದ್ದಾರೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ನಮ್ಮ ಚುನಾವಣೆಗಳು, ನಮ್ಮ ಪ್ರಜಾಪ್ರಭುತ್ವ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಎಲ್ಲವೂ ಅಪಾಯದಲ್ಲಿದೆ. ಇದು ನಮ್ಮ ಜೀವಮಾನದ ಪ್ರಮುಖ ಚುನಾವಣೆ!” ಎಂದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...