Homeಕರ್ನಾಟಕಭಟ್ಕಳದ ಎಮ್ಮೆಲ್ಲೆ ಇಪ್ಪತ್ತೈದೇ ದಿನಕ್ಕೆ ಖಡಕ್ ಎಎಸ್‍ಪಿಯನ್ನು ಎತ್ತಂಗಡಿ ಮಾಡಿಸಿದೇಕೆ? ಶುದ್ದೋಧನ

ಭಟ್ಕಳದ ಎಮ್ಮೆಲ್ಲೆ ಇಪ್ಪತ್ತೈದೇ ದಿನಕ್ಕೆ ಖಡಕ್ ಎಎಸ್‍ಪಿಯನ್ನು ಎತ್ತಂಗಡಿ ಮಾಡಿಸಿದೇಕೆ? ಶುದ್ದೋಧನ

- Advertisement -
- Advertisement -

ಭಟ್ಕಳದ ಎಎಸ್‍ಪಿಯಾಗಿ ಚಾರ್ಜ್‍ತೆಗೆದು ಕೊಂಡ ಕೇವಲ ಇಪ್ಪತ್ತೈದು ದಿನಗಳಲ್ಲೇ ಐಪಿಎಸ್‍ ಅಧಿಕಾರಿ ನಿಖಿಲ್ ಬುಳ್ಳಾ ಅವರ ಎತ್ತಂಗಡಿ ಆಗಿರೋದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ. ಸಮಾಜ ಕಂಟಕರಿಗೆ, ದೋನಂಬರಿನ ದಂಧೆದಾರರ ನಿದ್ದೆಗೆಡಿಸಿದ್ದ ನಿಖಿಲ್‍ರನ್ನು ಸ್ಥಳೀಯ ಬಿಜೆಪಿ ಶಾಸಕನೂ ಸ್ವಯಂಘೋಷಿತ ದೇಶಭಕ್ತ ಹೆಂಡೋದ್ಯಮಿಯೂ ಆಗಿರುವ ಸುನಿಲ್ ನಾಯ್ಕನೇ ಹಠಕ್ಕೆ ಬಿದ್ದು ಜಡಿಸಿದ್ದಾನೆಂಬುದೀಗ ಜಗಜ್ಜಾಹೀರಾಗಿ ಹೋಗಿದೆ! ಖುದ್ದು ಸಿಎಂ ಸಾಹೇಬರ ಅಪ್ಪಣೆಯಂತೆಯೇ ಈ ಎತ್ತಂಗಡಿ ನಡೆದಿರೋದು ಈಗ ರಹಸ್ಯವಾಗುಳಿದಿಲ್ಲ.

 

 

ಅಷ್ಟಕ್ಕೂ ನಿಖಿಲ್, ಶಾಸಕನ ಪಿತ್ತ ನೆತ್ತಿಗೇರಿಸುವಂಥ “ಉದ್ಧಟತನ” ಮಾಡಿದ್ದಾದರೂ ಏನು? ಭಟ್ಕಳದಲ್ಲಿ ಹಾವಳಿ ಎಬ್ಬಿಸಿರುವ ಅಕ್ರಮ ಹೆಂಡ ಮತ್ತು ಜೂಜು ಮಾಫಿಯಾದ ಹೆಡೆಮುರಿಕಟ್ಟುವ ನಿರ್ಧಾರಕ್ಕೆ ಬಂದಿದ್ದ ನಿಖಿಲ್‍ ಅಕ್ರಮ ಮದ್ಯ ಮಾರಾಟದ ಕಿಂಗ್‍ಪಿನ್‍ಗಳ ಮೇಲೆ ಒಂದರಹಿಂದೊಂದರಂತೆ ನಾಲ್ಕು ಪ್ರಕರಣ ದಾಖಲಿಸಿದ್ದರು.ತನ್ನ ಕೃಪಾಶಿರ್ವಾದವಿದ್ದ ನಾಲ್ವರು ಕಳ್ಳ ಹೆಂಡದಂಧೆದಾರರನ್ನು ಜೈಲಿಗಟ್ಟಿದ್ದೇ ಶಾಸಕನ ಪಿತ್ತ ನೆತ್ತಿಗೇರಿಸಿತ್ತು. ಕಮ್ಯುನಲಿ ಸೆನ್ಸಿಟಿವ್ ಎಂಬ ಹಣೆಪಟ್ಟಿಯ ಭಟ್ಕಳದಲ್ಲಿ ಬಲು ನಾಜೂಕಿನಿಂದಲೇ ಕಾರ್ಯಾಚರಣೆಗಿಳಿದಿದ್ದ ನಿಖಿಲ್ “ಪ್ರಭಾವಿಗಳ” ಮೇಲೆ 21 ಜೂಜು ಪ್ರಕರಣಜಡಿದಿದ್ದಲ್ಲದೆ ಸಿಗರೇಟ್ ಮತ್ತು ತಂಬಾಕುಉತ್ಪನ್ನಕಾಯ್ದೆಯಡಿ 93 ಕೇಸು ಹಾಕಿದ್ದರು.

ಈ ಕಾರಣಕ್ಕೇ ನಿಖಿಲ್‍ ಜನರ ನಡುವೆ ಭರ್ಜರಿ ಪ್ರಶಂಸೆಗೆ ಪಾತ್ರರಾಗಿದ್ದರು. ಶಾಸಕರ ಪರಮಾಪ್ತರು, ನೆಂಟರು-ಇಷ್ಟರೇ ಗ್ರಾಮೀಣ ಭಾಗದಲ್ಲಿ ಕಳ್ಳ ಹೆಂಡ ಯಥೇಚ್ಛವಾಗಿ ಸರಬರಾಜು ಮಾಡುತ್ತಿದ್ದುದನ್ನು ನಿಖಿಲ್‍ ಕಂಡುಹಿಡಿದಿದ್ದರು. ಇವರ್ಯಾರಿಗೂ ಆತ ಸೊಪ್ಪು ಹಾಕಲಿಲ್ಲ. ಅಕ್ರಮ ಹೆಂಡ ಹಂಚಿಕೆ ಬಗ್ಗೆ ಸಾರ್ವಜನಿಕರಿಂದ ದೂರೇನಾದರೂ ಬಂದರೆ ಆ ವ್ಯಾಪ್ತಿಯ ಅಧಿಕಾರಿಗಳೇ ಹೊಣೆಯೆಂಬ ಎಚ್ಚರಿಕೆ ತನ್ನ ಅಧೀನ ಸಿಬ್ಬಂದಿಗೆ ಕೊಟ್ಟಿದ್ದರು.ಹೀಗಾಗಿ ಶಾಸಕ ಸುನಿಲ್ ನಾಯ್ಕ ಸೂತ್ರಧಾರತ್ವದ ಮದ್ಯ ಮಾಫಿಯಾ ವಿಲ ವಿಲ ಒದ್ದಾಡುವಂತಾಗಿತ್ತು.

ಶಿರಾಲಿಯ ಬಾಳೆಲೆಚಂದ್ರು ಯಾನೆಚಂದ್ರು ನಾಯ್ಕ ಶಾಸಕ ಸುನಿಲ್ ನಾಯ್ಕನ ಕಷ್ಟ-ಸುಖದ ನಿಷ್ಠ ಸನ್ಮಿತ್ರ! ಹೊಟೇಲ್‍ ಉದ್ಯಮಿಯಾಗಿದ್ದಚಂದ್ರು, ದೋಸ್ತ್‍ ಎಮ್ಮೆಲ್ಲೆ ಆಗಿದ್ದೇತಡ ಸರ್ಕಾರಿಕಾಮಗಾರಿ ನಡೆಸುವ ಲಕ್ಷಾಧೀಶ ಗುತ್ತಿಗೆದಾರನಾಗಿ ಅವತರಿಸಿದ್ದಾನೆ. ಇಂಥಚಂದ್ರುನ ಭಾಮೈದ ಶಿರಾಲಿಯಲ್ಲಿ ನಡೆಸುತ್ತಿದ್ದ ಮೀನು ಊಟದ ಹೊಟೇಲಿನಲ್ಲಿ ಪರವಾನಗಿಇಲ್ಲದ ಹೆಂಡದ ವ್ಯವಹಾರ ಲಕ್ಷದ ಲೆಕ್ಕದಲ್ಲೇ ದಿನವೂ ನಡೆಯುತ್ತಿತ್ತು. ಈ ಹೊಟೇಲಿನ ಮೇಲೆ ರೇಡು ಹಾಕಿದ ಎಎಸ್‍ಪಿ ಪಡೆ ಚಂದ್ರುನ ಭಾಮೈದನ ಎತ್ಹಾಕಿಕೊಂಡು ಬಂದಿತ್ತು! ಆಗ ಶಾಸಕ ಸಾಹೇಬ ಫೋನಾಯಿಸಿದರೂ ಕೇರ್ ಮಾಡಿರಲಿಲ್ಲ.

ಕಂಡಕಂಡಲ್ಲಿ ಎಎಸ್‍ಪಿಗೆ ಬುದ್ಧಿ ಕಲಿಸುವ ಆವಾಜ್ ಹಾಕತೊಡಗಿದ್ದ ಎಮ್ಮೆಲ್ಲೆ ಸುನೀಲ್ ನಾಯ್ಕ ತನ್ನ ಖಾಸಾ ಭಾಮೈದನ ಕಳ್ಳಹೆಂಡದ ವ್ಯವಹಾರಕ್ಕೆ ತೊಂದರೆ ಪೊಲೀಸರಿಂದಾದಾಗ ನಿಗಿ ನಿಗಿ ಬೆಂಕಿಯಾಗಿ ಹೋದ!! ಭಟ್ಕಳದ ಹಳ್ಳಿಗಳ ಗೂಡಂಗಡಿಯಲ್ಲಿ ಹೆಂಡದ ವ್ಯಾಪಾರಜೋರಾಗಿದೆ. ಈ ಗೂಡಂಗಡಿಗಳಿಗೆ ಹೆಂಡ ಪೂರೈಕೆಯಾಗುವುದು ಶಾಸಕನ ಭಾಮೈದನ “ಕಂಪನಿ”ಯಿಂದ. ಹಾಡುವಳ್ಳಿ ಎಂಬಲ್ಲಿ ಗೂಡಂಗಡಿಯಲ್ಲಿ ಅಕ್ರಮವಾಗಿ ಸಾರಾಯಿ ಮಾಡುತ್ತಿದ್ದವನನ್ನು ಎಎಸ್‍ಪಿ ಬಂಧಿಸಿದ್ದರು. ಹೆಂಡ ಮಾರಾಟಗಾರ ಕಾಂಗ್ರೆಸ್‍ನ ಹಿಂದಿನ ಶಾಸಕ ಮಂಕಾಳು ವೈದ್ಯನ ಶಿಷ್ಯನಾದರೆ ಹೆಂಡ ಪೂರೈಸಿದವರು ಬಿಜೆಪಿ ಶಾಸಕನ ನೆಂಟನಗ್ಯಾಂಗಿನವರು. ಎರಡೂ ಕಡೆಯಿಂದ ಎಎಸ್‍ಪಿಗೆ ಫೋನ್ ಹೋಗಿದೆ. “ಇಲ್ಲ…. ಇಲ್ಲಾ…. ಕಾನೂನು ಬಿಟ್ಟು ನಾನು ನಡೆಯುವುದಿಲ್ಲ…..” ಎಂದಿದ್ದಾರೆ ಎಎಸ್‍ಪಿ ನಿಖಿಲ್.

ಈ ಎಎಸ್‍ಪಿಯನ್ನು ಹೀಗೆ ಬಿಟ್ಟರೆ ತಮ್ಮ ಕಳ್ಳ ವ್ಯವಹಾರಕ್ಕೆ ಸಂಚಕಾರ ಬರುತ್ತದೆಂದು ಕಂಗಾಲಾದ ಎಮ್ಮೆಲ್ಲೆ ಪಟಾಲಮ್‍ ಆತನ ಎತ್ತಂಗಡಿಗೆ ಪ್ರಯತ್ನ ಪ್ರಾರಂಭಿಸಿಯೇ ಬಿಟ್ಟರು. “…. ನೀನು ನಿನ್ನಡ್ಯೂಟಿ ಮಾಡಿದೆಯಲ್ಲಾ…. ಈಗ ನಾನು ನನ್ನಡ್ಯೂಟಿ ಮಾಡ್ತೇನೆ ನೋಡು….. ನೀನು ಒಂದು ಮಾತೂ ಕೇಳೋನಲ್ಲ….” ಎಂದು ಎಗರಾಡಿದ್ದ ಸುನಿಲ್ ರಾತ್ರೋರಾತ್ರಿ ಬೆಂಗಳೂರಿಗೆ ಹೋಗಿ, ಸಿಎಂ ಯಡ್ಡಿಗೆ ಗಂಟು ಬಿದ್ದು ಎಎಸ್‍ಪಿ ವರ್ಗ ಮಾಡುವಂತೆ ಅಲವತ್ತುಕೊಂಡಿದ್ದಾನೆ. ಒಂದು ವಾರ ಬೆಂಗಳೂರಲ್ಲೇ ಠಿಕಾಣಿ ಹೂಡಿ ಅಂತಿಮವಾಗಿ ಸಾಕ್ಷಾತ್ ಸಿಎಂ ಸಾಹೇಬರಿಂದಲೇ ಎಎಸ್‍ಪಿ ವರ್ಗಾವಣೆ ಆದೇಶ ಮಾಡಿಸಿದ್ದಾನೆ. ಆ ಜಾಗಕ್ಕೆ ತನ್ನಜಾತಿ ಬಂಧುವಾದ ನಾನ್‍ ಐಪಿಎಸ್‍ ಅಧಿಕಾರಿಯನ್ನು ಹಾಕಿಸಿಕೊಂಡಿದ್ದಾನೆ.
ಶಿರಾಲಿಯಲ್ಲಿ ತನ್ನ ಹೆಂಡದ ಅಂಗಡಿ ಸುತ್ತಲೆಲ್ಲೂ ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ ತಲೆಯೆತ್ತದಂತೆ ಮಾಡಿರುವ ಸುನಿಲ್ ನಾಯ್ಕ ಅಕ್ರಮ ಸಾರಾಯಿದಂಧೆ ನಿರಾತಂಕ ಮಾಡಿಕೊಂಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತನ್ನ ಪಕ್ಷದ ಶಾಸಕ ಕಾಯಕಕ್ಕೆ ಅಡ್ಡಿಪಡಿಸಿದ ಅಧಿಕಾರಿಯನ್ನು ಎತ್ತಂಗಡಿ ಮಾಡಿರುವ ಯಡಿಯೂರಪ್ಪನವರ ಸಾಧನೆ ಪ್ರಶಂಸನೀಯ ಮತ್ತು ಅನುಕರಣೆಗೆ ಯೋಗ್ಯವಾದದ್ದು!? ಭೇಷ್ ಯಡಿಯೂರಪ್ಪನವರ ಮರಿ ಸರ್ವಾಧಿಕಾರಕ್ಕೆ ಭೋಪರಾಕ್. ಒಂದು ಕಡೆ ಮಾಧ್ಯಮಕ್ಕೆ ನಿರ್ಬಂಧ. ಮತ್ತೊಂದು ಕಡೆ ಕಾನೂನಿನ ಬಗ್ಗೆ ನಿಷ್ಠೆ ಉಳ್ಳ ಅಧಿಕಾರಿಯ ಎತ್ತಂಗಡಿ. ಇದಕ್ಕಿಂತಲೂ ಒಳ್ಳೆಯ “ರಾಮ ರಾಜ್ಯ” ಯಾರಿಂದಲೂ ಸಾಧ್ಯವಿಲ್ಲ.

  2. ಇಂತಹ ಸುಳ್ಳು ಸುದ್ದಿ ಬಿತ್ತರಿಸುವ ನಿಮ್ಮಂತ ನಾಯಿಗಳನ್ನು ನಡು ಬೀದಿಯಲ್ಲಿ ದುಓಡಗೆ ನಿಲ್ಲಿಸಬೇಕು. ಗೌರಿಯಂತ ಶನಿಯಿಂದ ಮುಕ್ತಿ ಸಿಕ್ಕಿದ್ದರು ಅವಳ ಹೆಸರಿನ ಶನಿ ಕರ್ನಾಟಕವನ್ನು ಕಾಡುತ್ತಲೇ ಇದೆ.

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...