Homeಕರ್ನಾಟಕಬಾಕಿ ಬರ ಪರಿಹಾರಕ್ಕಾಗಿ ಹೋರಾಟ ಮುಂದುವರಿಯಲಿದೆ: ಸಿಎಂ ಸಿದ್ದರಾಮಯ್ಯ

ಬಾಕಿ ಬರ ಪರಿಹಾರಕ್ಕಾಗಿ ಹೋರಾಟ ಮುಂದುವರಿಯಲಿದೆ: ಸಿಎಂ ಸಿದ್ದರಾಮಯ್ಯ

"ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ನೀಡಬೇಕಾಗಿದ್ದರೂ, ಕೇಂದ್ರ ಸರ್ಕಾರ ಕೇವಲ 3,498.98 ಕೋಟಿ ರೂ.ಗೆ ಅನುಮೋದನೆ ನೀಡಿ, 3,454 ಕೋಟಿ ರೂ. ಬಿಡುಗಡೆ ಮಾಡಿದೆ".

- Advertisement -
- Advertisement -

ಎನ್‌ಡಿಆರ್‌ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ 18,171 ಕೋಟಿ ರೂಪಾಯಿ ಬರ ಪರಿಹಾರ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3,498.98 ಕೋಟಿ ರೂ.ಗೆ ಅನುಮೋದನೆ ನೀಡಿ, 3,454 ಕೋಟಿ ರೂ. ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3, 454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ ಎಂಬ ಸುದ್ದಿಯ ಬೆನ್ನಲ್ಲೇ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರ ಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರವು ರಾಜಕೀಯ ದುರುದ್ದೇಶದಿಂದ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಮೋದಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದು ತಿಳಿಸಿದ್ದಾರೆ.

ಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯ ಬಿಜೆಪಿ ನಾಯಕರದ್ದಾಗಲಿ, ಕೇಂದ್ರ ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಈ ಬರ ಪರಿಹಾರ ಬಿಡುಗಡೆಯ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ನಾವು 13-9-2024ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ. ಕೇಂದ್ರ ಬಿಜೆಪಿ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು. ಅಂದರೆ ರೂ.18,171 ಕೋಟಿ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು ರೂ. 3,454 ಕೋಟಿ ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಕೇಂದ್ರದ ಜೊತೆ ಜಟಾಪಟಿ ನಡೆಸಿ ರಾಜ್ಯಕ್ಕೆ ಬರ ಪರಿಹಾರ ತಂದ ಸಿದ್ದರಾಮಯ್ಯ ಸರಕಾರ: 3,454 ಕೋಟಿ ರೂ. ಬರ ಪರಿಹಾರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...