Homeಮುಖಪುಟ27 ಪ್ರಕರಣಗಳು: ಪ್ರಧಾನಿ ಮೋದಿ ವಿರುದ್ಧದ ದೂರುಗಳಿಗೆ ಸಂಬಂಧಿಸಿ ಚುನಾವಣಾ ಆಯೋಗ ಏನು ಮಾಡಿದೆ?

27 ಪ್ರಕರಣಗಳು: ಪ್ರಧಾನಿ ಮೋದಿ ವಿರುದ್ಧದ ದೂರುಗಳಿಗೆ ಸಂಬಂಧಿಸಿ ಚುನಾವಣಾ ಆಯೋಗ ಏನು ಮಾಡಿದೆ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧ 2019ರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಮೇಲೆ  ವಿರೋಧ ಪಕ್ಷಗಳು ಭಾರತೀಯ ಚುನಾವಣಾ ಆಯೋಗಕ್ಕೆ ಕನಿಷ್ಠ 27 ದೂರುಗಳನ್ನು ನೀಡಿದೆ. ಆದರೆ ಇದ್ಯಾವುದೇ ಪ್ರಕರಣಗಳಲ್ಲಿ ಪ್ರಧಾನಿಯ ವಿರುದ್ಧ ಕ್ರಮವನ್ನು ತೆಗೆದುಕೊಂಡಿಲ್ಲ ಎನ್ನುವುದು ಪ್ರತಿಪಕ್ಷಗಳ ಆರೋಪವಾಗಿದೆ.

ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ನೀಡಿದ ದೂರುಗಳಲ್ಲಿ ದ್ವೇಷ ಭಾಷಣದ ಆರೋಪಗಳು, ಮತಗಳನ್ನು ಪಡೆಯಲು ಸಶಸ್ತ್ರ ಪಡೆಗಳ ಬಳಕೆ, ಧರ್ಮದ ಹೆಸರಿನಲ್ಲಿ ಮತಯಾಚಣೆ ಮತ್ತು ಪ್ರಧಾನ ಮಂತ್ರಿಯ ಚುನಾವಣಾ ರ್ಯಾಲಿಗಳಿಗೆ ಭಾಷಣಗಳನ್ನು ತಯಾರಿಸಲು ಸರ್ಕಾರಿ ಸಚಿವಾಲಯಗಳ ಬಳಕೆ ಸೇರಿದಂತೆ ಇತರ ಆರೋಪಗಳ ಮೇಲೆ ಪ್ರಧಾನಿ ವಿರುದ್ಧ ಪ್ರತಿಪಕ್ಷಗಳು 2019ರಿಂದ 27 ದೂರುಗಳನ್ನು ದಾಖಲಿಸಿದ್ದವು.

ಆದರೆ ಮೊದಲ ಬಾರಿಗೆ, ಚುನಾವಣಾ ಆಯೋಗವು ಏಪ್ರಿಲ್ 25 ರಂದು ಮೋದಿ ರಾಜಸ್ಥಾನದಲ್ಲಿ ಮಾಡಿದ್ದ  ದ್ವೇಷದ ಭಾಷಣಕ್ಕೆ ಸಂಬಂಧಿಸಿ ಬಿಜೆಪಿ ಅಧ್ಯಕ್ಷ  ಜೆಪಿ ನಡ್ಡಾ ಅವರಿಗೆ ನೊಟೀಸ್‌ನ್ನು ನೀಡಿದೆ. ನೋಟಿಸ್‌ನಲ್ಲಿ ಕಾಂಗ್ರೆಸ್, ಸಿಪಿಐ(ಎಂ), ಮತ್ತು ಸಿಪಿಐ(ಎಂ) ನೀಡಿದ ದೂರಿನ ಪ್ರತಿಯನ್ನು ಉಲ್ಲೇಖಿಸಿದೆ.

ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು.

ಭಿನ್ನಾಭಿಪ್ರಾಯಗಳನ್ನು ಉಲ್ಬಣಗೊಳಿಸುವ ಅಥವಾ ಪರಸ್ಪರ ದ್ವೇಷವನ್ನು ಉಂಟುಮಾಡುವ ಅಥವಾ ವಿವಿಧ ಜಾತಿಗಳು ಮತ್ತು ಸಮುದಾಯಗಳ ನಡುವೆ ಅಥವಾ ಧರ್ಮಗಳು, ವಿಭಿನ್ನ ಭಾಷಿಗರ ನಡುವೆ ಉದ್ವಿಗ್ನತೆಗೆ ಪ್ರಚೋದಿಸುವ ಚಟುವಟಿಕೆಯಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ತೊಡಗಿಸಿಕೊಳ್ಳಬಾರದು ಎಂದು ಚುನಾವಣಾ ಆಯೋಗ ಹೇಳುತ್ತದೆ. ಮೋದಿಯ ಭಾಷಣಕ್ಕೆ ಸಂಬಂಧಿಸಿ ತನ್ನ ನೋಟಿಸ್‌ಗೆ ಏಪ್ರಿಲ್ 29ರೊಳಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗವು ಬಿಜೆಪಿಗೆ ಸೂಚಿಸಿದೆ.

2019ರಿಂದ ಪ್ರತಿಪಕ್ಷಗಳು ಪ್ರಧಾನಿ ವಿರುದ್ಧ ದಾಖಲಿಸಿದ ಕನಿಷ್ಠ 27 ದೂರುಗಳು ಈ ಕೆಳಗಿನ ಆರೋಪಕ್ಕೆ ಸಂಬಂಧಿಸಿದೆ.

ಇವುಗಳಲ್ಲಿ 12 ದೂರುಗಳನ್ನು ಕೋಮು ಭಾಷಣದ ಆರೋಪಕ್ಕೆ ಸಂಬಂಧಿಸಿ ನೀಡಲಾಗಿದೆ.

ಮತ ಕೇಳಲು ಸಶಸ್ತ್ರ ಪಡೆಗಳನ್ನು ಬಳಸಿದ್ದಕ್ಕೆ 8 ದೂರುಗಳನ್ನು ಚುನಾವಣಾ ಆಯೋಗಕ್ಕೆ ನೀಡಲಾಗಿದೆ.

ರಾಜಕೀಯ ಜಾಹೀರಾತುಗಳಲ್ಲಿ ಸರ್ಕಾರದ ಯೋಜನೆಗಳನ್ನು ಬಳಸುವುದಕ್ಕಾಗಿ ದೂರನ್ನು ನೀಡಲಾಗಿದೆ.

ಧರ್ಮದ ಆಧಾರದ ಮೇಲೆ ಮತ ಕೇಳಿದ ಆರೋಪದಲ್ಲಿ ಒಂದು ಪ್ರಕರಣ ದಾಖಲಾಗಿದೆ

ಚುನಾವಣಾ ಭಾಷಣಗಳನ್ನು ಸಿದ್ಧಪಡಿಸಲು ಸರ್ಕಾರಿ ಸಚಿವಾಲಯಗಳನ್ನು ಬಳಕೆ ಆರೋಪದಲ್ಲಿ ದೂರನ್ನು ದಾಖಲಿಸಲಾಗಿದೆ.

ಪ್ರಚಾರದ ವೇಳೆ ಪ್ರಧಾನಿಯವರ ಹೆಲಿಕಾಪ್ಟರ್‌ನಲ್ಲಿ ಅನುಮಾನಾಸ್ಪದ ಕಪ್ಪು ಪೆಟ್ಟಿಗೆ ಇತ್ತೆಂದು ಎರಡು ದೂರುಗಳನ್ನು ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ನೀಡಲಾಗಿದೆ.

ಪ್ರಚಾರಗಳಲ್ಲಿ ಅಪ್ರಾಪ್ತರನ್ನು ಬಳಸುವುದಕ್ಕಾಗಿ ಒಂದು ದೂರು ದಾಖಲಾಗಿದೆ. ಆದರೆ ವಿರೋಧ ಪಕ್ಷಗಳ ಪ್ರಕಾರ, ಈ ಯಾವುದೇ ದೂರನ್ನು ಗಂಭೀರವಾಗಿ ಪರಿಗಣಿಸಿ ಪ್ರಧಾನಿ ವಿರುದ್ಧ ಚುನಾವಣಾ ಆಯೋಗ ಕ್ರಮವನ್ನು ಕೈಗೊಂಡಿಲ್ಲ. ಆದರೆ ಈ ಬಾರಿ ಮಾತ್ರ ರಾಜಸ್ಥಾನದಲ್ಲಿ ಮಾಡಿದ ಮೋದಿಯ ದ್ವೇಷ ಭಾಷಣಕ್ಕೆ ಸಂಬಂಧಿಸಿ ನೊಟೀಸ್‌ ನೀಡಿದೆ. ಅದು ಕೂಡ ಮೋದಿಗೆ ನೀಡದೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾಗೆ ನೊಟೀಸ್‌ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ ಚುನಾವಣಾ ಆಯೋಗ ಮೋದಿ ವಿಚಾರದಲ್ಲಿ ಜಾಗರೂಕರಾಗಿದೆ ಎಂದು ಟೀಕಿಸಿತ್ತು.

ಇದನ್ನು ಓದಿ: ತ್ರಿಪುರದಲ್ಲಿ ಬುಡಕಟ್ಟು ಜನರಿಂದ ಮತದಾನ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...