Homeಮುಖಪುಟಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ: 2ಜಿ ಪ್ರಕರಣದ ತೀರ್ಪು ತಿದ್ದುಪಡಿ ಕೋರಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ: 2ಜಿ ಪ್ರಕರಣದ ತೀರ್ಪು ತಿದ್ದುಪಡಿ ಕೋರಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

- Advertisement -
- Advertisement -

ಯುಪಿಎ ಆಡಳಿತದಲ್ಲಿ 2ಜಿ ಸ್ಪೆಕ್ಟ್ರಂನ ಆಡಳಿತಾತ್ಮಕ ಹಂಚಿಕೆಯನ್ನು ‘ಹಗರಣ’ ಎಂದು ಕರೆದಿದ್ದ ಬಿಜೆಪಿ, ಈಗ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಹರಾಜು ಇಲ್ಲದೆ ಸ್ಪೆಕ್ಟ್ರಂ ನೀಡಲು ಸುಪ್ರೀಂ ಕೋರ್ಟ್‌ನಿಂದ ಅನುಮತಿ ಕೇಳುತ್ತಿದ್ದು, ಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ ತನ್ನ ತೀರ್ಪನ್ನು ಮಾರ್ಪಡಿಸುವಂತೆ ಕೋರಿ ಕೇಂದ್ರವು ಸೋಮವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಮೋದಿ ಸರ್ಕಾರ ಮತ್ತು ಭ್ರಷ್ಟ ಜನತಾ ಪಾರ್ಟಿಯ ಬೂಟಾಟಿಕೆಗೆ ಯಾವುದೇ ಮಿತಿಯಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ, 2ಜಿ ಸ್ಪೆಕ್ಟ್ರಂ ಆಡಳಿತಾತ್ಮಕ ಹಂಚಿಕೆಯನ್ನು ‘ಹಗರಣ’ ಎಂದು ಬಿಜೆಪಿ ಹೇಳಿತ್ತು. ಈಗ ಅದಕ್ಕೆ ತದ್ವಿರುದ್ಧವಾಗಿ ವಾದ ಮಂಡಿಸುತ್ತಿದ್ದಾರೆ. ಹರಾಜು ಮಾಡದೆ ತಮಗೆ ಬೇಕಾದವರಿಗೆ ಸ್ಪೆಕ್ಟ್ರಂ ನೀಡಲು ಅನುಮತಿ ನೀಡಲು ಕೇಂದ್ರವು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ಖಂಡಿತವಾಗಿಯೂ, ಈ ‘ಮೋದಾನಿ ಆಡಳಿತ’ ಈಗಾಗಲೇ ಸಾರ್ವಜನಿಕ ಸಂಪನ್ಮೂಲಗಳನ್ನು ಪ್ರಧಾನ ಮಂತ್ರಿಯ ಕ್ರೂರಿ ಬಂಡವಾಳಶಾಹಿ ಸ್ನೇಹಿತರಿಗೆ ಹಸ್ತಾಂತರಿಸುತ್ತಿದೆ. ವಿಮಾನ ನಿಲ್ದಾಣಗಳನ್ನು ಒಂದು ಕಂಪನಿಗೆ ಹಸ್ತಾಂತರಿಸಲಾಗಿದೆ. ಕಲ್ಲಿದ್ದಲು ಗಣಿಗಳನ್ನು ಮೋಸದ ಹರಾಜಿನಲ್ಲಿ ನೀಡಲಾಗಿದೆ. ಉಪಗ್ರಹ ಸ್ಪೆಕ್ಟ್ರಮ್ ಅನ್ನು ಸಹ ಹಸ್ತಾಂತರಿಸಲಾಗಿದೆ” ಎಂದು ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

“ಒಟ್ಟಾರೆಯಾಗಿ 150 ಕೋಟಿ ರೂಪಾಯಿಗಳ ಚುನಾವಣಾ ಬಾಂಡ್‌ಗಳಿಗೆ ಬದಲಾಗಿ, ಅವರು ಈಗಾಗಲೇ ತಮ್ಮ ಕಾರ್ಪೊರೇಟ್ ದಾನಿಗಳಿಗೆ 4 ಲಕ್ಷ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಸಂಪನ್ಮೂಲಗಳನ್ನು ಹಸ್ತಾಂತರಿಸಿದ್ದಾರೆ” ಎಂದಿದ್ದಾರೆ.

“ಜೂನ್ 4 ರಂದು, ಭಾರತದ ಮತದಾರರು ಈ ಪಕ್ಷಕ್ಕೆ ‘ಸಂಘಟಿತ ಲೂಟಿ’ ಬಾಗಿಲನ್ನು ತೋರಿಸಲಿದ್ದಾರೆ. ಇಂಡಿಯಾ ಸರ್ಕಾರವು ಅದಾನಿ ಮೆಗಾ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿ ಮೂಲಕ ತನಿಖೆ ನಡೆಸಲಿದೆ. ಪ್ರಧಾನಿ ತಮ್ಮ ಸುಸಜ್ಜಿತವಾದ ‘ಚಾರ್ ರಾಸ್ತೆ’ ಮೂಲಕ 8200 ಕೋಟಿ ರೂ. ಸಂಗ್ರಹಿಸಿದ
#PayPM ಹಗರಣ ಸೇರಿದಂತೆ ಇತರ ಹಗರಣಗಳನ್ನು ಸರ್ಕಾರ ತನಿಖೆ ನಡೆಸಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಫೆಬ್ರವರಿ 2, 2012 ರಂದು ನೀಡಿದ್ದ ತೀರ್ಪಿನಲ್ಲಿ, ಜನವರಿ 2008ರಲ್ಲಿ ಎ ರಾಜಾ ಅವರು ದೂರಸಂಪರ್ಕ ಸಚಿವರಾಗಿದ್ದ ಅವಧಿಯಲ್ಲಿ ವಿವಿಧ ಸಂಸ್ಥೆಗಳಿಗೆ ನೀಡಲಾಗಿದ್ದ 2ಜಿ ತರಂಗಾಂತರ ಪರವಾನಗಿಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

ಸೋಮವಾರ, ಕೇಂದ್ರದ ಪರವಾಗಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಅವರ ಪೀಠದ ಮುಂದೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದು, ಕೆಲವು ಪ್ರಕರಣಗಳಲ್ಲಿ ಕೇಂದ್ರವು 2ಜಿ ಸ್ಪೆಕ್ಟ್ರಂ ಪರವಾನಗಿಗಳನ್ನು ನೀಡಲು ಬಯಸಿರುವುದರಿಂದ 2012 ರ ತೀರ್ಪನ್ನು ಮಾರ್ಪಾಡು ಮಾಡಬೇಕು ಎಂದು ಮನವಿ ಮಾಡಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : 27 ಪ್ರಕರಣಗಳು: ಪ್ರಧಾನಿ ಮೋದಿ ವಿರುದ್ಧದ ದೂರುಗಳಿಗೆ ಸಂಬಂಧಿಸಿ ಚುನಾವಣಾ ಆಯೋಗ ಏನು ಮಾಡಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...