Homeಮುಖಪುಟಎಎಪಿ ಜೊತೆಗಿನ ಮೈತ್ರಿಗೆ ಅಸಮಾಧಾನ: ದೆಹಲಿ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ರಾಜೀನಾಮೆ

ಎಎಪಿ ಜೊತೆಗಿನ ಮೈತ್ರಿಗೆ ಅಸಮಾಧಾನ: ದೆಹಲಿ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ರಾಜೀನಾಮೆ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ದೆಹಲಿ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದ್ದು, ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡಿದ್ದು, ಎಎಪಿ ಜೊತೆಗೆ ರಾಜ್ಯದಲ್ಲಿ ಮೈತ್ರಿಯಿಂದ ಅಸಮಾಧಾನಗೊಂಡು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಅರವಿಂದರ್ ಸಿಂಗ್ ಲವ್ಲಿ ಅವರನ್ನು ಆಗಸ್ಟ್ 31, 2023ರಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ದಿವಂಗತ ಶೀಲಾ ದೀಕ್ಷಿತ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಅವರು ಸಚಿವರೂ ಕೂಡ ಆಗಿದ್ದರು.

ಅರವಿಂದರ್ ಸಿಂಗ್ ಲವ್ಲಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, ದೆಹಲಿ ಕಾಂಗ್ರೆಸ್‌ ಘಟಕವು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದೊಂದಿಗಿನ(ಎಎಪಿ) ಮೈತ್ರಿಗೆ ವಿರುದ್ಧವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸಿ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಗೆ ದಿಲ್ಲಿ ಕಾಂಗ್ರೆಸ್ ಘಟಕವು ವಿರುದ್ಧವಾಗಿತ್ತು. ಅದರೂ  ಪಕ್ಷವು ದಿಲ್ಲಿಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಮಾಡಿದೆ ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ, ಲೋಕಸಭೆ ಚುನಾವಣೆಗಾಗಿ ದೆಹಲಿಯಲ್ಲಿ ಎಎಪಿ ಜೊತೆ 4:3 ಸೀಟು ಹಂಚಿಕೆ ಒಪ್ಪಂದಕ್ಕೆ ಕಾಂಗ್ರೆಸ್ ಆಗಮಿಸಿತ್ತು. ಈ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಕಾಂಗ್ರೆಸ್ 3 ಸ್ಥಾನಗಳನ್ನು ಪಡೆದುಕೊಂಡಿದೆ. ವಾಯವ್ಯ ದೆಹಲಿ, ಈಶಾನ್ಯ ದೆಹಲಿ ಮತ್ತು ಚಾಂದಿನಿ ಚೌಕ್‌ನ್ನು ಕಾಂಗ್ರೆಸ್‌ಗೆ ಬಿಟ್ಟಕೊಡಲಾಗಿತ್ತು.

ದೆಹಲಿ ಕಾಂಗ್ರೆಸ್ ಘಟಕದಲ್ಲಿ ಅಸಮಾಧಾನದ ಹೊರತಾಗಿಯೂ, ಇಡೀ ರಾಜ್ಯ ಘಟಕವು ಹೈಕಮಾಂಡ್‌ನ ಅಂತಿಮ ಆದೇಶವನ್ನು ಅನುಸರಿಸುತ್ತದೆ ಎಂದು ಅವರು ಖಚಿತಪಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯ ಸೂಚನೆಯ ಮೇರೆಗೆ, ನಾನು ಕೇಜ್ರಿವಾಲ್ ಅವರ ಬಂಧನದ ರಾತ್ರಿ ಸುಭಾಷ್ ಚೋಪ್ರಾ ಮತ್ತು ಸಂದೀಪ್ ದೀಕ್ಷಿತ್ ಅವರೊಂದಿಗೆ ಕೇಜ್ರಿವಾಲ್‌ ನಿವಾಸಕ್ಕೆ ತೆರಳಿದ್ದೆ, ಇದು ನನಗೆ ಇಷ್ಟವಿರಲಿಲ್ಲ ಎಂದು ಹೇಳಿದ್ದಾರೆ.

ಸೀಟು ಹಂಚಿಕೆ ಒಪ್ಪಂದವನ್ನು ಪ್ರಕಟಿಸಿದ ಕೂಡಲೇ ಚುನಾವಣಾ ಕಣದಿಂದ ಸಾರ್ವಜನಿಕವಾಗಿ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದೇನೆ ಮತ್ತು ದೆಹಲಿಯ ಇತರ ಹಿರಿಯ ಕಾಂಗ್ರೆಸ್ ನಾಯಕರಿಗೆ ಟಿಕೆಟ್ ಸಿಗುವಂತೆ ಮಾಡಲು ನಾನು ಈ ರೀತಿಯ ನಿರ್ಧಾರಕ್ಕೆ ಬಂದಿದ್ದೆ ಎಂದು ಅರವಿಂದರ್ ಸಿಂಗ್ ಲವ್ಲಿ ಹೇಳಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...