Homeಮುಖಪುಟ'ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ..'; ಪ್ರಧಾನಿ ಮೋದಿ ವಿರುದ್ಧ ಸಿಎಂ ಟೀಕಾಪ್ರಹಾರ

‘ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ..’; ಪ್ರಧಾನಿ ಮೋದಿ ವಿರುದ್ಧ ಸಿಎಂ ಟೀಕಾಪ್ರಹಾರ

ನಿಮ್ಮ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಹಣ ಕಾರ್ಪೋರೇಟ್ ದೊರೆಗಳ ಜೇಬು ಸೇರಿದೆ

- Advertisement -
- Advertisement -

ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದು, ‘ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಸ್ವಾಗತ’ ಎಂದು ಲೇವಡಿ ಮಾಡಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಸ್ವಾಗತ. ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ‍್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕೋರುತ್ತೇನೆ. ನಿಮ್ಮ ಇತ್ತೀಚಿನ ಅತಿದೊಡ್ಡ ಸುಳ್ಳಿನ ಬಗ್ಗೆ ಕೆಲವು ಪ್ರಶ್ನೆಗಳನ್ನು ನಿಮಗೆ ಕೇಳಬೇಕೆಂದಿದ್ದೇನೆ, ನಿಮ್ಮ ಇಂದಿನ ಭಾಷಣದಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸುವಿರೆಂದು ನಂಬಿದ್ದೇನೆ’ ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ. ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿ” ಎಂದು ಆಗ್ರಹಿಸಿದ್ದಾರೆ.

“ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿತ್ತು. ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2019ರ ಬಜೆಟ್ ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈಗ ನಿರ್ಮಲಾ ಸೀತಾರಾಮನ್ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆ ಎನ್ನವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಹೆಚ್.ಡಿ.ದೇವೇಗೌಡರು. ಮೋದಿಯವರೇ ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ” ಎಂದು ಅವರು ಗಮನ ಸೆಳೆದಿದ್ದಾರೆ.

“ನಿಮ್ಮದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಾದುದೇನಲ್ಲ. 2019ರಲ್ಲಿ ನಿಮ್ಮದೇ ಸರ್ಕಾರ ಶೇಕಡಾ 30ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ ಎನ್ನುವುದು ನಿಮಗೆ ತಿಳಿದಿರಲಿ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಪ್ರಧಾನಿ ಮೋದಿಯವರೇ, ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ” ಎಂದು ಪ್ರಶ್ನಿಸಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ” ಎಂದು ಸಿಎಂ ಸವಾಲು ಹಾಕಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿಯವರೇ, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ? ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆಮಾಡಬೇಕೆಂದು ನಿಮಗೆ ಅನಿಸಲಿಲ್ಲವೇ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಹಿಂದಿನ ಪ್ರಧಾನಿಗಳಾದ ಜವಾಹರಲಾಲ್ ನೆಹರೂ 33, ಲಾಲ್ ಬಹದ್ದೂರ್ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್ ಗಾಂಧಿಯವರು 16, ವಿ.ಪಿ.ಸಿಂಗ್ ಅವರು 2, ಐ.ಕೆ.ಗುಜ್ರಾಲ್ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್ ಸಿಂಗ್ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ನಿಮ್ಮ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದೀರಿ. ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದರೆ ಇದೇನಾ” ಎಂದು ಟೀಕಿಸಿದ್ದಾರೆ.

“ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿ, ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಆನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು. ನಿಮ್ಮ ಹತ್ತು ವರ್ಷಗಳಲ್ಲಿ ನೀವು ಆಸ್ತಿಮಾಡಿಕೊಟ್ಟಿದ್ದು ಅದಾನಿ-ಅಂಬಾನಿಗಳಿಗೆ ಮಾತ್ರ ಅಲ್ಲವೇ? ವಿಮಾನ ನಿಲ್ದಾಣಗಳು, ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್ ನಿಗಮಗಳು ಒಂದೇ ಎರಡೇ ಇವೆಲ್ಲವೂ ನಿಮ್ಮ ಕಾಲದಲ್ಲಿಯೇ ಅಲ್ಲವೇ ಅದಾನಿ-ಅಂಬಾನಿ ಮಡಿಲು ಸೇರಿದ್ದು? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ” ಎಂದು ಅವರು ಪ್ರಧಾನಿ ಮೋದಿ ಮುಂದೆ ಸಾಲುಸಾಲು ಪ್ರಶ್ನೆಗಳನ್ನಿಟ್ಟಿದ್ದಾರೆ.

ಇದನ್ನೂ ಓದಿ; ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...