Homeಕರ್ನಾಟಕಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ: ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ: ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿಕೆ ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ವಿಧಾನಸೌಧದ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ 18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ₹3,498 ಕೋಟಿಗೆ ಅನುಮೋದನೆ ನೀಡಿ,  3,454 ಕೋಟಿ ಬಿಡುಗಡೆ ಮಾಡಿದೆ. ಇದು ಒಟ್ಟು ಬಾಕಿ ಮೊತ್ತದ ಶೇ.20ಕ್ಕಿಂತ ಕಡಿಮೆಯಾಗಿದ್ದು, ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇದಲ್ಲದೆ ಇಂದು ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಪ್ರತಿಭಟನಾಕಾರರು ಗೋ-ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಕ್ಕೂಟ ವ್ಯವಸ್ಥೆಯಲ್ಲಿ ನಾವಿದ್ದೇವೆ, ಈ ವ್ಯವಸ್ಥೆಯಲ್ಲಿ ಬರ ಬಂದಾಗ ಪರಿಹಾರ ನೀಡುವುದು ಕೇಂದ್ರದ ಕರ್ತವ್ಯ, ನಾವು ಭಿಕ್ಷೆ ಬೇಡುತ್ತಿಲ್ಲ, 223 ತಾಲೂಕುಗಳಲ್ಲಿ ಬರಗಳ ಇದೆ, 100ವರ್ಷಗಳಲ್ಲಿ ಇದು ಭೀಕರ ಬರಗಾಲವಾಗಿದೆ. ನಾನೇ ಕುದ್ದು ಪ್ರಧಾನಿ, ಅಮಿತ್‌ ಶಾಗೆ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಆಗ್ರಹಿಸಿದ್ದೆವು, ಆದರೆ ಅವರು ಪರಿಹಾರ ಕೊಟ್ಟಿಲ್ಲ, ಅದಕ್ಕೆ ನಾವು ಅನಿವಾರ್ಯವಾಗಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದೇವೆ. 35,000ಕೋಟಿಗೂ ಹೆಚ್ಚು ಮೌಲ್ಯದ ಬೆಳೆ ನಷ್ಟವಾಗಿದೆ. ಎನ್‌ಡಿಆರ್‌ಎಫ್ ಪ್ರಕಾರ, 18,172 ಕೋಟಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಲಾಗಿತ್ತು. ಈಗ 19%ಕ್ಕಿಂತ ಕಡಿಮೆ ಪರಿಹಾರ ನೀಡಿದ್ದಾರೆ, ಇದು ಬಹಳ ಕಡಿಮೆಯಾಗಿದೆ. ಇದರಿಂದ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಕರ್ನಾಟಕಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಜನರಿಗೆ ಖಾಲಿ ಚೊಂಬು ತಂದಿದ್ದಾರೆ. ಕರ್ನಾಟಕ ಕೇಳಿದ್ದ 18,172 ಕೋಟಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ಸೆಪ್ರೆಂಬರ್ 2023ರಿಂದಲೂ ನಿರಾಕರಿಸುತ್ತಲೇ ಬಂದಿದೆ. ಸುಪ್ರೀಂ ಕೋರ್ಟ್ ಹೇಳಿದ ಬಳಿಕವೂ ಇವರು ರಾಜ್ಯದ ರೈತರ ಕೈಗೆ ಕೊಟ್ಟಿದ್ದು ಲಾಲಿಪಾಪ್ ಅಷ್ಟೇ! ನಾವೇನು ಭಿಕ್ಷೆ ಕೇಳುತ್ತಿಲ್ಲ, ಬರ ಪರಿಹಾರ ರೈತರ ಹಕ್ಕು ಎಂದು ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌, ಬರಗಾಲದಿಂದ ಸಂಕಷ್ಟದಲ್ಲಿರುವ ರೈತರು, ಕಾರ್ಮಿಕರು, ಕೂಲಿ ಕೆಲಸಗಾರರಿಗಾಗಿ ನಾವು ಕೇಳುತ್ತಿದ್ದೇವೆ. ರಾಜ್ಯ ಸರ್ಕಾರದಿಂದ ನಾವು ಎಷ್ಟು ಸಾಧ್ಯವೋ ಅಷ್ಟು ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ 7 ತಿಂಗಳು ಕಳೆದ ಬಳಿಕ ಕೇವಲ 3,454 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಆಗ್ರಹಿಸಿ ನಮ್ಮ ಹೋರಾಟ ನ್ಯಾಯಾಲಯದಲ್ಲಿ ಹಾಗೂ ಜನರ ನಡುವೆಯೂ ಮುಂದುವರೆಯಲಿದೆ. ನಾವು ಅವರ ಮನೆಯ ಹಣ ಕೇಳುತ್ತಿಲ್ಲ, ನನಗೆ ಕೊಡಿ, ಸಿದ್ದರಾಮಯ್ಯ ಅವರಿಗೆ ಕೊಡಿ ಎಂದು ಕೇಳ್ತಿದ್ದೀವಾ? ರಾಜ್ಯಕ್ಕೆ ಭಿಕ್ಷೆ ಬೇಡ, ಇದು ನಮ್ಮ ಹಕ್ಕು, ಅದನ್ನು ನಾವು ಕೇಳುತ್ತಿದ್ದೇವೆ, ನಮಗೆ ಸೆಪ್ಟಂಬರ್‌ನಿಂದ ಇಲ್ಲಿಯವರೆಗೆ ಆಗುತ್ತಿರುವ ನಷ್ಟವನ್ನು ಸೇರಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಚಿವರಾದ ಡಾ.ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎನ್‌. ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಕೆ. ಎಚ್. ಮುನಿಯಪ್ಪ, ಶಾಸಕರಾದ ಎಚ್. ಸಿ. ಬಾಲಕೃಷ್ಣ, ರಿಜ್ವಾನ್ ಅರ್ಷದ್ ಮತ್ತಿತರರು ಭಾಗವಹಿಸಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...