Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪ್ಪ-ಮಗನ (ಎಚ್‌ಡಿ ರೇವಣ್ಣ-ಪ್ರಜ್ವಲ್ ರೇವಣ್ಣ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪತ್ನಿ ಭವಾನಿ ಅವರು ಮನೆಯಲ್ಲಿ ಇಲ್ಲದಿದ್ದಾಗ ಎಚ್‌.ಡಿ. ರೇವಣ್ಣ ಮತ್ತು ಅವರ ಪುತ್ರ ಅನುಚಿತವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆ. ನಾನು ಮನೆಯಲ್ಲಿ ಇದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಜೊತೆ ಹಾಗೂ ಮಗಳ ಜೊತೆಗೆ ಪ್ರಚೋದನಕಾರಿಯಾಗಿ ಮಾತನಾಡಿದ್ದು, ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿದ ನಂತರ ನನಗೆ ಜೀವಭಯವಿದೆ. ಆ ವಿಡಿಯೋ ಹೊರಗಡೆ ಬಂದರೆ ಎಂಬ ಆತಂಕವಿದ್ದು, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳೆ ದೂರು ನೀಡಿದ್ದಾರೆ.

ಮಾಜಿ ಸಚಿವ ಎಚ್‌.ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಾಗಿದ್ದು, ಅಪ್ಪ-ಮಗನಿಗೆ ಈಗ ಸಂಕಷ್ಟ ಎದುರಾಗಿದೆ.

ದೂರಿನಲ್ಲಿ ಏನಿದೆ?

‘ನನ್ನ ಪತಿ ಮಾಜಿ ಶಾಸಕರಾದ ಹೆಚ್‌ ಡಿ ರೇವಣ್ಣ ರವರ ಮಾಲೀಕತ್ವದ ನಾಗಾಶಾಪುರದ ಹಾಲಿನ ಡೈರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ರೇವಣ್ಣರವರು ನನಗೆ ಬಿಸಿಎಂ ಲೇಡಿಸ್‌ ಹಾಸ್ಟೇಲ್‌ ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. ಜತೆಗೆ, ನಾನು ಭಾವನಿ ರೇವಣ್ಣ ಅವರಿಗೆ ಹತ್ತಿರದ ಸಂಬಂಧಿಯೂ ಆಗಿದ್ದು, 2013ರಲ್ಲಿ ರೇವಣ್ಣ ಆಗಾಗ ಮನೆಗೆ ಬರುವಂತೆ ಹೇಳುತ್ತಿದ್ದರು; ಅವರ ಮಾತಿನಂತೆ ಹಾಸ್ಟೆಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದೆ’ ಎಂದು ಹೇಳಿದ್ದಾರೆ.

‘ರೇವಣ್ಣ ಪುತ್ರ ಸೂರಜ್‌ ಮದುವೆ ಸಮಯದಲ್ಲಿ ಮನೆ ಕೆಲಸ ಮಾಡಿಕೊಡುವಂತೆ ಕರೆಸಿಕೊಂಡಿದ್ದರು. ಅಲ್ಲಿ ಮೂರುವರೆ ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದೆ, ಕೆಲಸಕ್ಕೆ ಸೇರಿಕೊಂಡ 4 ತಿಂಗಳ ನಂತರ ಅವರು ತಮ್ಮ ಕೊಠಡಿಗೆ ಬರುವಂತೆ ಅಹ್ವಾನಿಸುತ್ತಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ 6 ಜನ ಹೆಣ್ಣು ಮಕ್ಕಳು ಪ್ರಜ್ವಲ್‌ ರೇವಣ್ಣ ಬಂದಾಗ ನಮಗೆ ಭಯವಾಗುತ್ತದೆ ಎಂದು ಹೇಳುತ್ತಿದ್ದರು. ಕೆಲಸ ಮಾಡುತ್ತಿದ್ದ ಹುಡುಗರೂ ಸಹ ಹೆಣ್ಣು ಮಕ್ಕಳಿಗೆ ಎಚ್ಚರವಾಗಿರುವಂತೆ ತಿಳಿಸುತ್ತಿದ್ದರು. ರೇವಣ್ಣ ತಮ್ಮ ಪತ್ನಿ ಭವಾನಿಯವರು ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ಸ್ಟೋರ್‌ ರೂಮ್‌ನಲ್ಲಿ ನನ್ನ ಕೈ ಹಿಡಿದು ಎಳೆಯುತ್ತಿದ್ದರು. ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು, ಸೀರೆಯ ಪಿನ್‌ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು’ ಎಂದು ಹೇಳಿದ್ದಾರೆ.

“ಪ್ರಜ್ವಲ್‌ ರೇವಣ್ಣ ಅಡುಗೆ ಮನೆಯಲ್ಲಿ ಇದ್ದಾಗ ಹಿಂದಿನಿಂದ ಬಂದು ಮೈ ಮುಟ್ಟತ್ತಾ ಹೊಟ್ಟೆ ಭಾಗದಲ್ಲಿ ಜಿಗುಟುತ್ತಿದ್ದರು. ಎಣ್ಣೆ ಹಚ್ಚಲು ಶೋಭಾ ರವರನ್ನು ಕಳಿಸು ಎಂದು ಕೆಲಸ ಮಾಡುವ ಹುಡುಗನ ಬಳಿ ಹೇಳಿ ಕಳುಹಿಸುತ್ತಿದ್ದರು. ಹೀಗೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮನೆಯಲ್ಲಿದ್ದಾಗ ಪೋನ್‌ ಮಾಡಿ, ಸುಮಾರು ಸಲ ವಿಡಿಯೋ ಕಾಲ್ ಮಾಡುತ್ತಿದ್ದರು. ನನ್ನ ಮಗಳ ಜೊತೆ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸುತ್ತಿದ್ದು, ಮಗಳು ಹೆದರಿಕೊಂಡು ನಂಬರ್‌ ಬ್ಲಾಕ್‌ ಮಾಡಿದ್ದಳು. ಆ ನಂತರ, ಹೆದರಿಕೊಂಡು ಕೆಲಸ ಬಿಟ್ಟು ಹೊರ ಬಂದಿದ್ದೆವು” ಎಂದು ತಿಳಿಸಿದ್ದಾರೆ.

“ಇತ್ತೀಚೆಗೆ ಜಿಲ್ಲೆಯಾದಂತ್ಯ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾಗುವ ಲೈಂಗಿಕ ದೌರ್ಜನ್ಯದ ವಿಡಿಯೋ ವಾಟ್ಸಾಪ್‌ ನಲ್ಲಿ ಹರಿದಾಡುತ್ತಿರುವ ಕೆಲವು ವಿಡಿಯೋಗಳು ನನಗೂ ಬಂದಿದ್ದು, ಚನ್ನರಾಯಪಟ್ಟಣ ರಸ್ತೆಯಲ್ಲಿ ಇರುವ ಗನ್ನಿಕಡ ಗ್ರಾಮದ ತೋಟದಲ್ಲಿ ಇರುವ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಂದಿಗೆ ಪ್ರಜ್ವಲ್‌ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯ ವಿಡಿಯೋ ನೋಡಿ ನನಗೆ ಭಯವಾಗಿದೆ. ಪತಿ ಈಗ ನನ್ನ ಶೀಲವನ್ನು ಶಂಕಿಸುತ್ತಿದ್ದು, ನನ್ನ ವಿಡಿಯೋ ಬಂದರೆ ನಮ್ಮ ಗತಿ ಏನು ಎಂಬ ಬಗ್ಗೆ ಆತಂಕವಾಗಿದೆ. ಇದರಿಂದ ಮಾನಸಿಕವಾಗಿ ಹಿಂಸೆ ಅಗಿದ್ದು, ಮಹಿಳೆಯ ಮೇಲೆ ನಡೆದ ಲೈಂಗಿಕ ದೌಜನ್ಯಗಳ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ನಾನು ಮಾತನಾಡಿದ ನಂತರ ನನಗೆ ಜೀವ ಭಯ ಇದೆ. ಆದ್ದರಿಂದ, ನನಗೆ ಹಾಗೂ ಮಗಳ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌.ಡಿ. ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ರೀತಿ ಕ್ರಮ ತಗೆದುಕೊಳ್ಳಬೇಕು” ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...