Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪ್ಪ-ಮಗನ (ಎಚ್‌ಡಿ ರೇವಣ್ಣ-ಪ್ರಜ್ವಲ್ ರೇವಣ್ಣ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪತ್ನಿ ಭವಾನಿ ಅವರು ಮನೆಯಲ್ಲಿ ಇಲ್ಲದಿದ್ದಾಗ ಎಚ್‌.ಡಿ. ರೇವಣ್ಣ ಮತ್ತು ಅವರ ಪುತ್ರ ಅನುಚಿತವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆ. ನಾನು ಮನೆಯಲ್ಲಿ ಇದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಜೊತೆ ಹಾಗೂ ಮಗಳ ಜೊತೆಗೆ ಪ್ರಚೋದನಕಾರಿಯಾಗಿ ಮಾತನಾಡಿದ್ದು, ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿದ ನಂತರ ನನಗೆ ಜೀವಭಯವಿದೆ. ಆ ವಿಡಿಯೋ ಹೊರಗಡೆ ಬಂದರೆ ಎಂಬ ಆತಂಕವಿದ್ದು, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳೆ ದೂರು ನೀಡಿದ್ದಾರೆ.

ಮಾಜಿ ಸಚಿವ ಎಚ್‌.ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಾಗಿದ್ದು, ಅಪ್ಪ-ಮಗನಿಗೆ ಈಗ ಸಂಕಷ್ಟ ಎದುರಾಗಿದೆ.

ದೂರಿನಲ್ಲಿ ಏನಿದೆ?

‘ನನ್ನ ಪತಿ ಮಾಜಿ ಶಾಸಕರಾದ ಹೆಚ್‌ ಡಿ ರೇವಣ್ಣ ರವರ ಮಾಲೀಕತ್ವದ ನಾಗಾಶಾಪುರದ ಹಾಲಿನ ಡೈರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ರೇವಣ್ಣರವರು ನನಗೆ ಬಿಸಿಎಂ ಲೇಡಿಸ್‌ ಹಾಸ್ಟೇಲ್‌ ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. ಜತೆಗೆ, ನಾನು ಭಾವನಿ ರೇವಣ್ಣ ಅವರಿಗೆ ಹತ್ತಿರದ ಸಂಬಂಧಿಯೂ ಆಗಿದ್ದು, 2013ರಲ್ಲಿ ರೇವಣ್ಣ ಆಗಾಗ ಮನೆಗೆ ಬರುವಂತೆ ಹೇಳುತ್ತಿದ್ದರು; ಅವರ ಮಾತಿನಂತೆ ಹಾಸ್ಟೆಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದೆ’ ಎಂದು ಹೇಳಿದ್ದಾರೆ.

‘ರೇವಣ್ಣ ಪುತ್ರ ಸೂರಜ್‌ ಮದುವೆ ಸಮಯದಲ್ಲಿ ಮನೆ ಕೆಲಸ ಮಾಡಿಕೊಡುವಂತೆ ಕರೆಸಿಕೊಂಡಿದ್ದರು. ಅಲ್ಲಿ ಮೂರುವರೆ ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದೆ, ಕೆಲಸಕ್ಕೆ ಸೇರಿಕೊಂಡ 4 ತಿಂಗಳ ನಂತರ ಅವರು ತಮ್ಮ ಕೊಠಡಿಗೆ ಬರುವಂತೆ ಅಹ್ವಾನಿಸುತ್ತಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ 6 ಜನ ಹೆಣ್ಣು ಮಕ್ಕಳು ಪ್ರಜ್ವಲ್‌ ರೇವಣ್ಣ ಬಂದಾಗ ನಮಗೆ ಭಯವಾಗುತ್ತದೆ ಎಂದು ಹೇಳುತ್ತಿದ್ದರು. ಕೆಲಸ ಮಾಡುತ್ತಿದ್ದ ಹುಡುಗರೂ ಸಹ ಹೆಣ್ಣು ಮಕ್ಕಳಿಗೆ ಎಚ್ಚರವಾಗಿರುವಂತೆ ತಿಳಿಸುತ್ತಿದ್ದರು. ರೇವಣ್ಣ ತಮ್ಮ ಪತ್ನಿ ಭವಾನಿಯವರು ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ಸ್ಟೋರ್‌ ರೂಮ್‌ನಲ್ಲಿ ನನ್ನ ಕೈ ಹಿಡಿದು ಎಳೆಯುತ್ತಿದ್ದರು. ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು, ಸೀರೆಯ ಪಿನ್‌ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು’ ಎಂದು ಹೇಳಿದ್ದಾರೆ.

“ಪ್ರಜ್ವಲ್‌ ರೇವಣ್ಣ ಅಡುಗೆ ಮನೆಯಲ್ಲಿ ಇದ್ದಾಗ ಹಿಂದಿನಿಂದ ಬಂದು ಮೈ ಮುಟ್ಟತ್ತಾ ಹೊಟ್ಟೆ ಭಾಗದಲ್ಲಿ ಜಿಗುಟುತ್ತಿದ್ದರು. ಎಣ್ಣೆ ಹಚ್ಚಲು ಶೋಭಾ ರವರನ್ನು ಕಳಿಸು ಎಂದು ಕೆಲಸ ಮಾಡುವ ಹುಡುಗನ ಬಳಿ ಹೇಳಿ ಕಳುಹಿಸುತ್ತಿದ್ದರು. ಹೀಗೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮನೆಯಲ್ಲಿದ್ದಾಗ ಪೋನ್‌ ಮಾಡಿ, ಸುಮಾರು ಸಲ ವಿಡಿಯೋ ಕಾಲ್ ಮಾಡುತ್ತಿದ್ದರು. ನನ್ನ ಮಗಳ ಜೊತೆ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸುತ್ತಿದ್ದು, ಮಗಳು ಹೆದರಿಕೊಂಡು ನಂಬರ್‌ ಬ್ಲಾಕ್‌ ಮಾಡಿದ್ದಳು. ಆ ನಂತರ, ಹೆದರಿಕೊಂಡು ಕೆಲಸ ಬಿಟ್ಟು ಹೊರ ಬಂದಿದ್ದೆವು” ಎಂದು ತಿಳಿಸಿದ್ದಾರೆ.

“ಇತ್ತೀಚೆಗೆ ಜಿಲ್ಲೆಯಾದಂತ್ಯ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾಗುವ ಲೈಂಗಿಕ ದೌರ್ಜನ್ಯದ ವಿಡಿಯೋ ವಾಟ್ಸಾಪ್‌ ನಲ್ಲಿ ಹರಿದಾಡುತ್ತಿರುವ ಕೆಲವು ವಿಡಿಯೋಗಳು ನನಗೂ ಬಂದಿದ್ದು, ಚನ್ನರಾಯಪಟ್ಟಣ ರಸ್ತೆಯಲ್ಲಿ ಇರುವ ಗನ್ನಿಕಡ ಗ್ರಾಮದ ತೋಟದಲ್ಲಿ ಇರುವ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಂದಿಗೆ ಪ್ರಜ್ವಲ್‌ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯ ವಿಡಿಯೋ ನೋಡಿ ನನಗೆ ಭಯವಾಗಿದೆ. ಪತಿ ಈಗ ನನ್ನ ಶೀಲವನ್ನು ಶಂಕಿಸುತ್ತಿದ್ದು, ನನ್ನ ವಿಡಿಯೋ ಬಂದರೆ ನಮ್ಮ ಗತಿ ಏನು ಎಂಬ ಬಗ್ಗೆ ಆತಂಕವಾಗಿದೆ. ಇದರಿಂದ ಮಾನಸಿಕವಾಗಿ ಹಿಂಸೆ ಅಗಿದ್ದು, ಮಹಿಳೆಯ ಮೇಲೆ ನಡೆದ ಲೈಂಗಿಕ ದೌಜನ್ಯಗಳ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ನಾನು ಮಾತನಾಡಿದ ನಂತರ ನನಗೆ ಜೀವ ಭಯ ಇದೆ. ಆದ್ದರಿಂದ, ನನಗೆ ಹಾಗೂ ಮಗಳ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌.ಡಿ. ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ರೀತಿ ಕ್ರಮ ತಗೆದುಕೊಳ್ಳಬೇಕು” ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...