Homeಮುಖಪುಟನಾಮಪತ್ರ ವಾಪಸ್ ಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ : ಪಕ್ಷಕ್ಕೆ ಸ್ವಾಗತ ಎಂದ ಬಿಜೆಪಿ ನಾಯಕ

ನಾಮಪತ್ರ ವಾಪಸ್ ಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ : ಪಕ್ಷಕ್ಕೆ ಸ್ವಾಗತ ಎಂದ ಬಿಜೆಪಿ ನಾಯಕ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಮಧ್ಯ ಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದು, ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಹೇಳಲಾಗ್ತಿದೆ.

ಬಾಮ್ ಅವರು ಬಿಜೆಪಿ ಹಾಲಿ ಶಾಸಕ ರಮೇಶ್ ಮೆಂಡೋಲಾ ಅವರೊಂದಿಗೆ ನಾಮಪತ್ರ ಹಿಂಪಡೆಯಲು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದರು ಎಂದು ವರದಿಗಳು ಹೇಳಿವೆ.

ಅಕ್ಷಯ್ ಕಾಂತಿ ಬಾಮ್ ಅವರು ಕಾಂಗ್ರೆಸ್ ತೊರೆದಿರುವುದನ್ನು ದೃಢೀಕರಿಸಿರುವ ಮಧ್ಯಪ್ರದೇಶ ಸರ್ಕಾರದ ಸಂಪುಟ ಸಚಿವ ಕೈಲಾಶ್ ವಿಜಯವರ್ಗಿಯ, ಬಾಮ್ ಅವರನ್ನು ಬಿಜೆಪಿಗೆ ಸ್ವಾಗತಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಾಜ್ಯಾಧ್ಯಕ್ಷ ವಿಡಿ ಶರ್ಮಾ ನೇತೃತ್ವದ ಬಿಜೆಪಿಗೆ ಸೇರ್ಪಡೆಯಾಗಿರುವ ಇಂದೋರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರನ್ನು ನಾವು ಪಕ್ಷಕ್ಕೆ ಸ್ವಾಗತಿಸುತ್ತೇವೆ” ಎಂದು ವಿಜಯವರ್ಗಿಯಾ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಅಕ್ಷಯ್ ಕಾಂತಿ ಬಾಮ್ ಅವರು ನಾಮಪತ್ರ ಸಲ್ಲಿಸುವಾಗ ಅವರ ವಿರುದ್ದ 17 ವರ್ಷಗಳ ಹಿಂದೆ ಐಪಿಸಿ ಸೆಕ್ಷನ್ 307ರ ಅಡಿ ದಾಖಲಾಗಿರುವ ಪ್ರಕರಣದ ಕುರಿತು ಉಲ್ಲೇಖಿಸಿಲ್ಲ ಎಂದು ಬಿಜೆಪಿ ಕಾನೂನು ಘಟಕದವರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಜಿಲ್ಲಾಧಿಕಾರಿ ಆಕ್ಷೇಪಣೆಯನ್ನು ತಿರಸ್ಕರಿಸಿ ನಾಮಪತ್ರ ಸ್ವೀಕರಿಸಿದ್ದರು ಮತ್ತು ನಾಮಪತ್ರ ಸಲ್ಲಿಸುವಾಗ ಆ ಪ್ರಕರಣದ ಕುರಿತು ಸೇರಿಸಿದ್ದರು. ಆದರೆ, ಕಾಂಗ್ರೆಸ್‌ನ ಮೂವರು ಬದಲಿ ಅಭ್ಯರ್ಥಿಗಳ ನಾಮಪತ್ರಗಳನ್ನು ಜಿಲ್ಲಾಧಿಕಾರಿ ತಿರಸ್ಕರಿಸಿದ್ದಾರೆ.

ಇಂದೋರ್‌ನಲ್ಲಿ ಮತದಾನಕ್ಕೆ ಮೂರು ದಿನಗಳ ಮೊದಲು, ಅಂದರೆ, ಮೇ 10 ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ಇಂದೋರ್ ಲೋಕಸಭಾ ಕ್ಷೇತ್ರದ ಮತದಾನ ನಾಲ್ಕನೇ ಹಂತದಲ್ಲಿ ಮೇ 13 ರಂದು ನಡೆಯಲಿದೆ.

ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿ ಸೇರ್ಪಡೆಯಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ವಕ್ತಾರ ಅಮೀನ್ ಉಲ್ ಖಾನ್ ಸೂರಿ, ” ಕಾಂಗ್ರೆಸ್ ರಾಜ್ಯಾಧ್ಯಕ್ಷರನ್ನು ಇದಕ್ಕೆ ಹೊಣೆಗಾರರನ್ನಾಗಿ ಮಾಡಬೇಕು. ಬಾಮ್ ಇಂದೋರ್‌ನಲ್ಲಿ ಯಾವುದೇ ರಾಜಕೀಯ ಪ್ರಭಾವ ಹೊಂದಿರಲಿಲ್ಲ. ಆದರೂ, ಕಾಂಗ್ರೆಸ್ ಪಕ್ಷ ಅವರನ್ನು ಇಂದೋರ್ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದು. ಇದನ್ನು ಲಘುವಾಗಿ ಪರಿಗಣಿಸಬಾರದು. ಏಕೆಂದರೆ, ಇದು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ವಿಡಿಯೋ ಬಗ್ಗೆ ಮೊದಲೇ ಗೊತ್ತಿದ್ದೂ ಸುಮ್ಮನಿದ್ರಾ ಮೈತ್ರಿ ನಾಯಕರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...