Homeಮುಖಪುಟಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: 'ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..'; ಮಹಿಳಾ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ‘ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ; ಧೈರ್ಯವಾಗಿ ದೂರು ಕೊಡಿ..’; ಮಹಿಳಾ ಕಾಂಗ್ರೆಸ್

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತ ಮಹಿಳೆಯರ ಜೊತೆಗೆ ನಿಲ್ಲುವುದಾಗಿ ಮಹಿಳಾ ಕಾಂಗ್ರೆಸ್‌ ಹೇಳಿದ್ದು, ಧೈರ್ಯವಾಗಿ ಬಂದು ದೂರು ಕೊಡುವಂತೆ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ, “ಹಾಸನದ ಸಂಸದ, ಎನ್ ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆಗಳನ್ನು ಮುರಿದು ಹಾಕಿದ್ದಾರೆ. ದೇಶದ ಪ್ರಧಾನ ಮಂತ್ರಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ; ಅವರ ಮಾತಿಗೆ ಏನಾದರೂ ಅರ್ಥವಿದೆಯೇ” ಎಂದು ಪ್ರಶ್ನಿಸಿದರು.

ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ ದೀಪ್ ಸಿಂಗ್, ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್ ಸಿಂಗ್ ಇವರೆಲ್ಲಾ ಮಹಿಳೆಯರು, ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದವರು. ಇವರೇ ನಿಜವಾದ ಮೋದಿ ಪರಿವಾರದವರು. ಇದೇ ಮೋದಿ ಅವರ ಪರಿವಾರ ವಾದದ ಅರ್ಥ.

“ಪ್ರಜ್ವಲ್ ರೇವಣ್ಣ 2 ಸಾವಿರಕ್ಕೂ ಹೆಚ್ಚು ಬಾರಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ನಮ್ಮ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮೋದಿಯವರು ಮಾತೆತ್ತಿದರೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಜೊತೆ ನಿಂತು ಪ್ರಧಾನಿಗಳು ಫೋಟೋಗೆ ಪೋಜು ಕೊಡುತ್ತಾರೆ. ಆದರೆ, ಭಾಷಣದಲ್ಲಿ ಮಾತ್ರ ಕುಟುಂಬ ರಾಜಕಾರಣ ಮತ್ತು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಾರೆ. ನಮ್ಮ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸಬೇಕು. ಏಕೆಂದರೆ, ಈ ಘಟನೆ ಬೆಳಕಿಗೆ ಬಂದ ತಕ್ಷಣ ಗಂಭೀರತೆ ಅರಿತು ಎಸ್ ಐಟಿ ರಚನೆಗೆ ಆದೇಶ ನೀಡಿದ್ದಾರೆ” ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಅನೇಕ ಜನ ವಿದೇಶಕ್ಕೆ ಓಡಿ ಹೋಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ದೇಶಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅದೇ ರೀತಿ ಪ್ರಜ್ವಲ್ ರೇವಣ್ಣ ಸಹ ಅದೇ ಹಾದಿ ತುಳಿದಿದ್ದಾರೆ. ಇಷ್ಟೊಂದು ಘೋರ ಘಟನೆ ನಡೆದಿದ್ದರೂ ಸಹ ಬಿಜೆಪಿಯ ಒಬ್ಬನೇ ಒಬ್ಬ ನಾಯಕನೂ ಬಾಯಿ ಬಿಟ್ಟಿಲ್ಲ. ಸ್ಮೃತಿ ಇರಾನಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರೇ, ಅಮಿತ್ ಶಾ, ಪ್ರಧಾನಿ ಮೋದಿ ಅವರೇ ಎಲ್ಲಿದ್ದೀರಿ? 2 ಜೂನ್ 2023 ರಲ್ಲಿ ನ್ಯಾಯಲಯದಿಂದ ಆದೇಶ ತಂದಿದ್ದ ಪ್ರಜ್ಷಲ್ ರೇವಣ್ಣ ಅವರ ವಿರುದ್ದ ಯಾವುದೇ ಸುದ್ದಿ, ವಿಡಿಯೋಗಳನ್ನು ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ತಂದಿದ್ದರು. ಅಂದರೆ, ಈ ವಿಚಾರ ಎಲ್ಲರಿಗೂ ತಿಳಿದಿತ್ತು. ಆದರೂ ಇದರ ಬಗ್ಗೆ ಕ್ರಮ ತೆಗದುಕೊಂಡಿಲ್ಲ ಎಂದರ್ಥವಲ್ಲವೇ” ಎಂದು ಅವರು ಪ್ರಶ್ನಿಸಿದರು.

‘ಅಧಿಕಾರದ ಮದದಿಂದ ಈ ಕೃತ್ಯಗಳು ನಡೆದಿದೆ. ತನ್ನ ಹುದ್ದೆ ಬಳಸಿಕೊಂಡು ಬಡ, ಅಮಾಯಕ ಹೆಣ್ಣು ಮಕ್ಕಳ ಮಾನಹಾನಿಯಾಗಿದೆ. ಪ್ರಧಾನ ಮಂತ್ರಿಗಳೇ ಜೊತೆಗಿರುವಾಗ ಆತ ಏಕೆ ಭಯಪಡಬೇಕು. ಅದಕ್ಕೆ ಸಾವಿರಾರು ವಿಡಿಯೋಗಳನ್ನು ಮಾಡಿದ್ದಾನೆ. ಕಾನೂನಿನ ಭಯವಿಲ್ಲದೆ ಕೃತ್ಯ ಎಸಗಿದ್ದಾನೆ. ಎಸ್ ಐಟಿಯಲ್ಲಿ ಮನವಿ ಮಾಡುತ್ತೇನೆ, ಶೋಷಣೆಗೆ ಒಳಗಾದ ಹೆಣ್ಣುಮಕ್ಕಳ ಗುರುತನ್ನು ಅದಷ್ಟು ಗುಪ್ತವಾಗಿ ಇರಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಮಹಿಳೆಯರ ಪರವಾಗಿ ನಾವು ಇರುತ್ತೇವೆ. ನೀವು ಮುಂದೆ ಬಂದು ಆರೋಪಿ ತಪ್ಪಿಸಿಕೊಳ್ಳದಂತೆ ದೂರು ನೀಡಬೇಕು. ಪೊಲೀಸ್ ಠಾಣೆಗೆ ಬರಲು ಹೆದರಿಕೆಯಾದರೆ ಆನ್ ಲೈನ್ ಮೂಲಕ ದೂರು ದಾಖಲಿಸಿ” ಎಂದು ಕರೆ ನೀಡಿದರು.

ಮಾಹಿತಿ ಗೊತ್ತಿದ್ದರೂ ಬಿಜೆಪಿ ಟಿಕೆಟ್ ನೀಡಿದೆ: ಸೌಮ್ಯಾ ರೆಡ್ಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕಿ ಸೌಮ್ಯಾರೆಡ್ಡಿ, “ಕರ್ನಾಟಕದ ಇತಿಹಾಸದಲ್ಲಿ ಇಂತಹ ಹೀನ ಘಟನೆ ನಡೆಯುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ. ದೇಶದ ಶೇ.50 ರಷ್ಟು ಜನಸಂಖ್ಯೆ ನಾವಿದ್ದೇವೆ. ನಮ್ಮನ್ನು ದೇವರ ಹೆಸರಿನಲ್ಲಿ ಪೂಜೆ ಮಾಡುತ್ತಾರೆ. ಹೆಣ್ಣು ದೇವರುಗಳಿಗೆ ಪೂಜೆ ಮಾಡುವುದು ಬೇಡ. ಗೌರವ ರಕ್ಷಣೆ ಕೊಟ್ಟರೇ ಸಾಕು. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಈ ಹೀನ ಕೃತ್ಯಗಳ ಬಗ್ಗೆ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ, ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಈ ವಿಚಾರಗಳು ಗೊತಿದ್ದರೂ ಟಿಕೆಟ್ ನೀಡಿದ್ದು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

“ನಾರಿಶಕ್ತಿ, ಮಹಿಳಾ ಸಮಾನತೆ ಎಂದು ಹೇಳುವ ಬಿಜೆಪಿಯವರೇ ನಿಮಗೆ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಮೋದಿ ಕೀ ಪರಿವಾರ್ ಎಂದು ಹೇಳುತ್ತಾರೆ, ಇದೆನಾ ನಿಮ್ಮ ಪರಿವಾರ. ಕತುವಾ, ಮಣಿಪುರ ಸೇರಿದಂತೆ ಅನೇಕ ಘಟನೆಗಳು ನಡೆದವು ಆದರೆ ದೇಶದ ಪ್ರಧಾನಿಗಳು ಇವುಗಳ ಬಗ್ಗೆ ಮಾತೇ ಆಡುತ್ತಿಲ್ಲ. ನಾಲ್ಕುಕ್ಕೂ ಹೆಚ್ಚು ಸಂತ್ರಸ್ತೆಯರು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಾರೆ. ಇವರೆಲ್ಲಾ ಕಾರ್ಯಕರ್ತರು, ಕೆಲಸ ಕೇಳಿಕೊಂಡು ಹೋದವರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ರೀತಿಯ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಶೋಷಣೆ ಮಾಡಿದ್ದಾನೆ. ಇಷ್ಟೆಲ್ಲಾ ಮಾಹಿತಿ ಗೊತ್ತಿದ್ದರೂ ಸಹ ಬಿಜೆಪಿ ಏಕೆ ಟಿಕೆಟ್ ನೀಡಿದೆ” ಎಂದು ತೀವ್ರ ವಾಗ್ದಾಳಿ ನಡೆಸಿದರು.

“ವಿಜಯೇಂದ್ರ ಅವರೇ ನಿಮ್ಮ ಮನೆಯಲ್ಲಿ ಹೆಣ್ಣುಮಕ್ಕಳಿಲ್ಲವೇ?, ಶೋಭಕ್ಕ ಎಲ್ಲಿದ್ದೀರಿ? ಬಿಜೆಪಿ, ಜೆಡಿಎಸ್ ನಾಯಕರೇ ನಿಮಗೆ ಬಾಯಿ ಇಲ್ಲವೇ? ಸುಮಲತಾ ಅವರೇ ಏಕೆ ಮೌನವಾಗಿದ್ದೀರಿ. ದೇಶದ ಪ್ರತಿಯೊಬ್ಬ ನಾಗರೀಕನು ಈ ಕೃತ್ಯ ವಿರೋಧಿಸಿ ಛೀಮಾರಿ ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ; ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...