Homeಮುಖಪುಟಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ‘ಕಾನೂನುಬಾಹಿರವಾಗಿ’ ನೇಮಕಗೊಂಡಿರುವ 25 ಸಾವಿರ ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಆದರೆ, ಪ್ರಕರಣದ ತನಿಖೆ ವೇಳೆ ಇಡೀ ಸಚಿವ ಸಂಪುಟ ಬಂಧನಕ್ಕೊಳಗಾಗಬಹುದು ಎಂಬ ರಾಜ್ಯ ಸರ್ಕಾರದ ಭಯವನ್ನು ಸುಪ್ರೀಂ ಕೋರ್ಟ್ ನಿವಾರಿಸಿದೆ. ಶಿಕ್ಷಕರ ನೇಮಕಾತಿಯಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳನ್ನು ಸಿಬಿಐ ತನಿಖೆಗೆ ಒಳಪಡಿಸುವ ಹೈಕೋರ್ಟ್‌ನ ಆದೇಶವನ್ನು ತಡೆ ಹಿಡಿದಿದೆ.

ನೇಮಕಾತಿ ಪರೀಕ್ಷೆಯನ್ನು ನಡೆಸಿದ ಏಜೆನ್ಸಿ, ಒಎಂಆರ್‌ ಉತ್ತರ ಪತ್ರಿಕೆಗಳ ನಾಶ, ಫಲಿತಾಂಶಗಳ ಸಾಫ್ಟ್‌ವೇರ್ ಡೇಟಾ ಅಳಿಸುವಿಕೆ ಮತ್ತು ಆಯ್ಕೆ ಸಮಿತಿಯ ಭಾಗವಾಗಿರದ ಜನರನ್ನು ಸೇರಿಸಿಕೊಳ್ಳುವುದರ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. “ಹೈಕೋರ್ಟ್ ಹೇಗೆ ತಪ್ಪು ಮಾಡಿದೆ ಎಂಬುದನ್ನು ನೀವು ನಮಗೆ ಸಮರ್ಥಿಸಬೇಕು” ಎಂದು ಸಿಜೆಐ ಹೇಳಿದ್ದಾರೆ. ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ.

ಕಳೆದ ವಾರ ಹೊರಡಿಸಿದ ಆದೇಶದಲ್ಲಿ, ಕಲ್ಕತ್ತಾ ಹೈಕೋರ್ಟ್ ರಾಜ್ಯದ ಮಾಧ್ಯಮಿಕ ಮತ್ತು ಹೈಯರ್ ಸೆಕೆಂಡರಿ ಶಾಲೆಗಳಲ್ಲಿ ವಿವಿಧ ವರ್ಗಗಳ ಉದ್ಯೋಗಗಳಿಗಾಗಿ 2016 ರಲ್ಲಿ ನೇಮಕಾತಿ ಮಾಡಲಾದ ಎಲ್ಲಾ 25,753 ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿತ್ತು.

ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಾಕ್ ಮತ್ತು ಶಬ್ಬರ್ ರಾಶೀದಿ ಅವರ ವಿಭಾಗೀಯ ಪೀಠವು ಆಯ್ಕೆಯಾದ ಅಭ್ಯರ್ಥಿಗಳು ಮುಂದಿನ ನಾಲ್ಕು ವಾರಗಳಲ್ಲಿ ಅವರು ಪಡೆದ ಸಂಪೂರ್ಣ ವೇತನವನ್ನು ಶೇ 12ರ ವಾರ್ಷಿಕ ಬಡ್ಡಿಯೊಂದಿಗೆ ಹಿಂದಿರುಗಿಸಬೇಕು ಎಂದು ಆದೇಶಿಸಿದೆ.

ಹೊಸದಾಗಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗಕ್ಕೆ (ಡಬ್ಲ್ಯುಬಿಎಸ್‌ಎಸ್‌ಸಿ) ನಿರ್ದೇಶನ ನೀಡುವುದರ ಜೊತೆಗೆ, ಈ ವಿಷಯದ ಬಗ್ಗೆ ತನಿಖೆ ಮುಂದುವರಿಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶಿಸಿತ್ತು.

ಸೂಪರ್ ನ್ಯೂಮರಿಕ್ ಹುದ್ದೆಗಳ ಸೃಷ್ಟಿಗೆ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ಗಮನದಲ್ಲಿಟ್ಟುಕೊಂಡು, ಅಗತ್ಯಬಿದ್ದರೆ ಖಾಲಿ ಹುದ್ದೆಗಳಿಗಿಂತ ಹೆಚ್ಚಿನ ಸ್ಥಾನಗಳನ್ನು ಸೃಷ್ಟಿಸಿದ ಮಾಸ್ಟರ್‌ಮೈಂಡ್‌ಗಳನ್ನು ಸಿಬಿಐ ಪ್ರಶ್ನಿಸಬಹುದು ಎಂದು ಹೈಕೋರ್ಟ್ ಹೇಳಿದೆ. ಮೊದಲಿನಿಂದಲೂ ಹಾಗೆಯೇ ಉಳಿದಿದ್ದ ಈ ಸೂಪರ್ ನ್ಯೂಮರಿಕ್ ಪೋಸ್ಟ್‌ಗಳು ಅಕ್ರಮವಾಗಿ ನೇಮಕಗೊಂಡಿರುವ ಅನರ್ಹ ಅಭ್ಯರ್ಥಿಗಳಿಗೆ ಜಾಗವನ್ನು ಒದಗಿಸುತ್ತವೆ ಎಂದು ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ : ಅಮಿತ್ ಶಾ ಕುರಿತ ಎಡಿಟೆಡ್ ವಿಡಿಯೋ ಹಂಚಿಕೆ; ಆಂಧ್ರ ಸಿಎಂ ರೇವಂತ್ ರೆಡ್ಡಿಗೆ ದೆಹಲಿ ಪೊಲೀಸರಿಂದ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....