Homeಮುಖಪುಟಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

ಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

- Advertisement -
- Advertisement -

ಬ್ರಿಟನ್‌ನ ಭಾರತೀಯರು ಅಥವಾ ಆ ದೇಶದಲ್ಲಿ ನೆಲೆಸಿರುವ ಭಾರತೀಯರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ.52ರಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಭಾರತೀಯತೆಯನ್ನು ರಕ್ಷಿಸಲು ಪ್ರಯತ್ನಿಸುವ ಸಮುದಾಯ ನೇತೃತ್ವದ ಸಂಸ್ಥೆ ಎಂದು ಗುರುತಿಸಿಕೊಂಡಿರುವ ‘ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ’ ಬ್ರಿಟಿಷ್ ಭಾರತೀಯರಾದ 500 ಜನರ ಮೇಲೆ ಬ್ರಿಟನ್‌ನಲ್ಲಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಗೆ ಒಳಗಾದವರಲ್ಲಿ ಶೇಕಡಾ 50ರಷ್ಟು ಹಿಂದೂಗಳು ಹಿಂದುತ್ವ ತತ್ವಗಳನ್ನು ತಿರಸ್ಕರಿಸಿದ್ದಾರೆ.

ಶೇ.50ರಷ್ಟು ಮಹಿಳೆಯರು ಮತ್ತು ಶೇ.50ರಷ್ಟು ಪುರುಷರ ಮೇಲೆ ಸಮೀಕ್ಷೇ ನಡೆಸಲಾಗಿದೆ. ಈ ಸಮೀಕ್ಷೆಗೆ ಒಳಗಾದವರಲ್ಲಿ 18 ರಿಂದ 44 ವರ್ಷ ವಯಸ್ಸಿನವರು 57%, ಹಿಂದೂಗಳು 43%, ಪದವೀದರರು 62% ಮತ್ತು ಬ್ರಿಟನ್‌ನಿಂದ ಹೊರಗೆ ಜನಿಸಿದವರು 56% ಇದ್ದಾರೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಜನರು ನಾಲ್ಕು ವರ್ಷಗಳವರೆಗೆ ಬ್ರಿಟನ್‌ನಲ್ಲಿ ವಾಸಿಸುತ್ತಿದ್ದರೆ, ಉಳಿದ ಅರ್ಧದಷ್ಟು ಜನರು ಕನಿಷ್ಠ ಐದು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದಾರೆ.

ಒಟ್ಟು ಪ್ರತಿಕ್ರಿಯಿಸಿದವರಲ್ಲಿ 35 ಶೇ. ಜನರು ಮೋದಿಯವರ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಶೇ.52ರಷ್ಟು ಜನರು ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಹಿಂದೂಗಳಲ್ಲಿ, ಶೇ.57ರಷ್ಟು ಜನರು ಭಾರತದ ಪ್ರಧಾನಿಯ ಪರ ಒಲವು ತೋರಿದ್ದಾರೆ, ಆದರೆ ಶೇ. 71ರಷ್ಟು ಹಿಂದೂಯೇತರರು ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಭಾರತದಲ್ಲಿ ಜನಿಸಿದವರು, ವಯಸ್ಸಾದವರು ಮತ್ತು ಇಂಗ್ಲಿಷ್ ಮಾತನಾಡಲು ಬಾರದ ಮನೆಯಲ್ಲಿರುವವರು ಮೋದಿಯವರ ಬಗ್ಗೆ ಹೆಚ್ಚು ಒಲವು ತೋರಿದ್ದಾರೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಪ್ರಕಟಣೆಯಲ್ಲಿ ಹೇಳಿದೆ.

ಪುರುಷರಿಗಿಂತ ಹೆಚ್ಚು ಶೇ.34ರಷ್ಟು ಮಹಿಳೆಯರು ಮೋದಿಯವರ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.28ರಷ್ಟು ಪುರುಷರು ಮೋದಿ ಪರ ಮಾತನಾಡಿದ್ದಾರೆ.

ಭಾರತದ ಪಥ (ಭಾರತ ಮುನ್ನಡೆಯುತ್ತಿರುವ ಹಾದಿ)ದ ಬಗ್ಗೆ ಕೇಳಿದಾಗ, ಶೇ. 68ರಷ್ಟು ಹಿಂದೂಗಳು ಭಾರತವು ಸರಿಯಾದ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಆದರೆ, ಶೇ. 73ರಷ್ಟು ಹಿಂದೂಯೇತರರು ಮತ್ತು ಶೇ. 81ರಷ್ಟು ಮುಸ್ಲಿಮರು ಇದನ್ನು ಒಪ್ಪಿಲ್ಲ.

ಸಮೀಕ್ಷೆಯ ಸಾರಾಂಶವು, ಉತ್ತರಿಸಿದ ಬಹುಪಾಲು ಜನರು “ಮೋದಿಯಿಂದ ಪ್ರಚಾರಗೊಂಡ ಧಾರ್ಮಿಕ ಹಿಂಸಾಚಾರವು ಬ್ರಿಟನ್‌ಗೆ ವ್ಯಾಪಿಸುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ. ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಹಿಂದೂಗಳು, ಅಂದರೆ ಶೇ. 65ರಷ್ಟು ಜನರು ಸಂಬಂಧಿತ ಘಟನೆಗಳಿಗೆ ಮೋದಿಯನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಇನ್ನು ಈ ಕುರಿತು ಶೇ.65ರಷ್ಟು ಜನರು 1ರಿಂದ 10ರೊಳಗಿನ ರೇಟಿಂಗ್ಸ್‌ನಲ್ಲಿ 8 ರೇಟಿಂಗ್ ನೀಡಿದ್ದಾರೆ. ಇದು ಗಂಭೀರ ಕಳವಳವನ್ನು ಸೂಚಿಸುತ್ತದೆ. 2022ರಲ್ಲಿ ಲೀಸೆಸ್ಟರ್‌ನಲ್ಲಿ ಹಿಂದೂ-ಮುಸ್ಲಿಮರ ನಡುವೆ ನಡೆದ ಹಿಂಸಾಚಾರವನ್ನು ಹೆಚ್ಚಿನ ಜನರು ಉಲ್ಲೇಖಿಸಿದ್ದಾರೆ.

ಈ ಸಮೀಕ್ಷೆಯು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಕಾರ್ಯಸೂಚಿಯನ್ನು ಇಡೀ ಬ್ರಿಟಿಷ್ ಭಾರತೀಯ ಸಮುದಾಯ ಬೆಂಬಲಿಸುತ್ತಿದೆ ಎಂಬ ಚಾಲ್ತಿಯಲ್ಲಿರುವ ನಂಬಿಕೆಯನ್ನು ಸುಳ್ಳಾಗಿಸಿದೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಹೇಳಿದೆ.

ಹಿಂದುತ್ವದ ಬಗೆಗಿನ ಧೋರಣೆಗಳು ಮತ್ತು ಭಾರತದ ಬಗ್ಗೆ ಕಾಳಜಿ

ಶೇ. 50ರಷ್ಟು ಹಿಂದೂ ಪ್ರತಿಕ್ರಿಯಿಸಿದವರು ಸೇರಿದಂತೆ ಬಹುಪಾಲು ಪ್ರತಿಕ್ರಿಯಿಸಿದವರು ತಾವು ಹಿಂದುತ್ವದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ತಿಳಿಸಿರುವುದಾಗಿ ಸಮೀಕ್ಷೆ ಹೇಳಿದೆ. ಹಿಂದುತ್ವದ ಕಡೆ ಒಲವು ಹೊಂದಿರುವವರಲ್ಲಿ ಹೆಚ್ಚಿನವರು ಪುರುಷರು, ಅವರು ಜಾತಿ, ಅರೇಂಜ್ ಮ್ಯಾರೇಜ್, ಗೋಮಾಂಸ ನಿಷೇಧ ಇತ್ಯಾದಿ ವಿಚಾರಗಳಲ್ಲಿ ಹಿಂದುತ್ವದ ಕಡೆ ಒಲವು ತೋರಿಸಿದ್ದಾರೆ.

ಪ್ರತಿಕ್ರಿಯಿಸಿದವರಲ್ಲಿ ಮೋದಿ ಪರವಾಗಿ ಒಲವು ತೋರಿಸದವರು ‘ಧಾರ್ಮಿಕ ಉದ್ವಿಗ್ನತೆ ಮತ್ತು ಪ್ರಜಾಪ್ರಭುತ್ವದ ನಿರ್ಬಂಧಗಳು ಭಾರತ ಎದುರಿಸುತ್ತಿದೆ’ ಎಂದು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ : ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...