Homeಮುಖಪುಟಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ...

ಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ…

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ 24ರಂದು ಬಿಡಿಸಿ ಚುನಾವಣೆ ನಡೆಯಲಿದ್ದು ಭಾರತೀಯ ಜನತಾ ಪಕ್ಷವೊಂದನ್ನು ಬಿಟ್ಟು ಉಳಿದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಿಂದ ದೂರ ಉಳಿದಿವೆ. 370 ವಿಧಿ ರದ್ದುಪಡಿಸಿರುವುದೇ ಚುನಾವಣೆ ಬಹಿಷ್ಕರಿಸಲು ಪ್ರಮುಖ ಕಾರಣವಾಗಿದೆ.

ಕಣಿವೆಯಲ್ಲಿ ಪ್ರಾಬಲ್ಯ ಹೊಂದಿರುವ ನ್ಯಾಷನಲ್ ಕಾನ್ಫೆರೆನ್ಸ್, ಪೀಪಲ್ ಡೆಮೊಕ್ರೆಟಿಕ್ ಪಕ್ಷ, ಜಮ್ಮು ಕಾಶ್ಮೀರ ಪೀಪಲ್ ಪಾರ್ಟಿ ಸೇರಿದಂತೆ ಇತರೆ ಸಣ್ಣಪಕ್ಷಗಳು ಬಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ  ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ಇತಿಹಾಸದಲ್ಲೇ ಈ ರೀತಿಯ ಸನ್ನಿವೇಶ ಸೃಷ್ಟಿಯಾಗಿರುವುದು ಇದೇ ಮೊದಲು ಎಂದು ವಿಶ್ಲೇಷಣೆಗಳು ನಡೆದಿವೆ.

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷವೂ ಕೂಡ ಬಿಡಿಸಿ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವುದು ಅಲ್ಲಿನ ಗಂಭೀರ ಪರಿಸ್ಥಿತಿಯನ್ನು ಹೇಳುತ್ತದೆ. ಪ್ರಮುಖ ರಾಜಕೀಯ ಮುಖಂಡರು, ವಿದ್ಯಾರ್ಥಿಗಳು, ವಕೀಲರು ಮತ್ತು ಹೋರಾಟಗಾರರನ್ನು ಬಂಧನ ಇಲ್ಲವೇ ಗೃಹಬಂಧನದಲ್ಲಿಡಲಾಗಿದೆ. ಇದರಿಂದ ಸ್ಥಳೀಯ ರಾಜಕೀಯ ಪಕ್ಷಗಳ ಕಚೇರಿಗಳು ಜನರಿಲ್ಲದೆ ಬಿಕೋ ಎನ್ನತ್ತಿವೆ.

ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಡಿಸಿ ಚುನಾವಣೆಗೆ ಸಿದ್ದತೆ ನಡೆದಿದೆ. ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರಿಂದ ಕಚೇರಿ ತುಂಬಿಹೋಗಿದ್ದು, ಚಟುವಟಿಕೆಗಳು ಭರದಿಂದ ಸಾಗಿವೆ. ಇಂತಹ ಯಾವುದೇ ಚಟುವಟಿಕೆಗಳು ಬೇರೆ ರಾಜಕೀಯ ಪಕ್ಷಗಳ ಕಚೇರಿಯಲ್ಲಿ ನಡೆಯುತ್ತಿಲ್ಲ. ನ್ಯಾಷನಲ್ ಕಾನ್ಪೆರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಮತ್ತು ಜಮ್ಮು ಕಾಶ್ಮೀರ್ ಪಾರ್ಟಿ ಸಜ್ಜದ್ ಲೋನ್ ಮೊದಲಾದವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹೀಗಾಗಿ, ಚುನಾವಣಾ ತಯಾರಿಗೆ ಅಡ್ಡಿಯಾಗಿದೆ.

ಇನ್ನೊಂದೆಡೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿ ಬಂಧಿಸಲಾಗಿದೆ. ಈ ಕಾಯ್ದೆಯಡಿ ಬಂಧನವಾದರೆ ಯಾವುದೇ ವಿಚಾರಣೆ ಇಲ್ಲದೆ ಎರಡು ವರ್ಷಗಳ ಕಾಲ ಜೈಲಿನಲ್ಲಿ ಇಡಲು ಅವಕಾಶವಿದೆ. ಇದೂ ಕೂಡ ಚುನಾವಣೆಯಿಂದ ದೂರ ಸರಿಯಲು ಕಾರಣವಾಗಿದೆ.

ಈ ಚುನಾವಣೆ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ ಎಂದು ಹೇಳಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನು ಒಳಗೊಂಡು ಚುನಾವಣೆ ನಡೆಸಬೇಕು. ಇದು ಪ್ರಜಾಪ್ರಭುತ್ವದ ಪ್ರಮುಖ ಲಕ್ಷಣವೂ ಹೌದು. ಆದರೆ ಈ ವರ್ಷದ ಆಗಸ್ಟ್ 5ರಂದು 370 ವಿಧಿಯನ್ನು ರದ್ದುಪಡಿಸಿ ಜಮ್ಮುಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ಮೇಲೆ ನಾಗರಿಕರನ್ನು ಪಂಜರದ ಪಕ್ಷಿಗಳಂತೆ ಇಡಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಚುನಾವಣೆಯನ್ನು ಚುನಾವಣೆ ಆಯೋಗ ಯಾಕೆ ಘೋಷಣೆ ಮಾಡಿತು ಎಂಬ ಬಗ್ಗೆ ಉತ್ತರವಿಲ್ಲ. ಜಮ್ಮು ಕಾಶ್ಮೀರದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ತಿಳಿಗೊಳಿಸುವತನಕ ಬಿಡಿಸಿ ಚುನಾವಣೆಯನ್ನು ಮುಂದೂಡಲೂ ಕೂಡ ಅವಕಾಶವಿತ್ತು. ಆದರೆ ಕೆಲಸ ಮಾಡಿಲ್ಲ.

ಯಾವುದೇ ಪಕ್ಷ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು. ಪ್ರಮುಖ ನಾಯಕರನ್ನು ಬಂಧನದಲ್ಲಿಟ್ಟು, ಪ್ರಚಾರಕ್ಕೆ ಹೋಗದಂತೆ ನೋಡಿಕೊಂಡು ಚುನಾವಣೆ ನಡೆಸಿದರೆ ಯಾವ ರಾಜಕೀಯ ಪಕ್ಷ ಪಾಲ್ಗೊಳ್ಳಲು ಸಾಧ್ಯ? ಇದು ಅಕ್ಷರಶಃ ಕಣಿವೆಯ ಜನರನ್ನು ಕತ್ತಲಲ್ಲಿ ಇಟ್ಟಿರುವುದರ ಸೂಚಕವಾಗಿದೆ.

ಚುನಾವಣೆಯೆಂದರೆ ಪ್ರಜಾಪ್ರಭುತ್ವದ ಹಬ್ಬ. ಆ ಹಬ್ಬದಲ್ಲಿ ಎಲ್ಲರೂ ಭಾಗವಹಿಸಬೇಕು ಎಂಬುದು ನಿಯಮ. ಕಣಿವೆ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧ ದಿಕ್ಕಿನಲ್ಲಿ ಆಟಳಿತ ನಡೆಸಲಾಗುತ್ತಿದೆ ಎಂದು ಟೀಕೆಗಳು ವ್ಯಕ್ತವಾಗಿದೆ. ಇಂದಿಗೂ ಕೂಡ ಸ್ಥಿರ ದೂರವಾಣಿಯನ್ನು ಬಿಟ್ಟರೆ, ನೆಟ್ ವರ್ಕ್, ಮೊಬೈಲ್ ಸಂಪರ್ಕ ಕಡಿತಗೊಳಿಸಿದೆ. ಈ ಉಪಕರಣಗಳು ಕೂಡ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಹಿಂದೆ ಬಿಜೆಪಿ ಅಧಿಕಾರಕ್ಕೆ ಏರಲು ಸಾಮಾಜಿಕ ಮಾಧ್ಯಮವೂ ಕಾರಣವಾಗಿತ್ತು. ಆದ್ದರಿಂದ ಚುನಾವಣೆಯನ್ನು ಪ್ರಜಾಪ್ರಭುತ್ವದ ಪ್ರಮುಖ ಕಿಟಕಿ ಬಾಗಿಲುಗಳನ್ನು ಮುಚ್ಚಿ ನಡೆಸಲಾಗುತ್ತಿದೆ. ಇಂತಹ ಚುನಾವಣೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.

ಚುನಾವಣೆ ಒಂದೆರಡು ದಿನ ಬಾಕಿ ಇರುವಂತೆ ಮುಖಂಡನ್ನು ಬಿಡುಗಡೆಗೊಳಿಸಿದರೆ ಸಾಲದು. ಎಲ್ಲಾ ಪಕ್ಷಗಳು (ಬಿಜೆಪಿ ಹೊರತುಪಡಿಸಿ) ಚುನಾವಣೆ ಬಹಿಷ್ಕರಿಸಿರುವುದರಿಂದ ಬಿಡಿಸಿ ಚುನಾವಣೆ ಮುಂದೂಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...