Homeಅಂತರಾಷ್ಟ್ರೀಯಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

- Advertisement -
- Advertisement -

ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಭಾರತದ ಗುಪ್ತಚರ ಸೇವೆಯ ಅಧಿಕಾರಿಯೊಬ್ಬರು ಅಂತಿಮ ಸೂಚನೆಗಳನ್ನು ನೀಡಿದ್ದರು ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದ್ದು, ಪನ್ನೂನ್ ಹತ್ಯೆಯ ಬಗ್ಗೆ ಪ್ರಧಾನಿ ಮೋದಿ ಆಪ್ತರಿಗೆ ತಿಳಿದಿರುವ ಸಾಧ್ಯತೆ ಇದೆ ಎಂದು ಯುಎಸ್‌ ಏಜೆನ್ಸಿಗಳ ಮಾಹಿತಿ ಉಲ್ಲೇಖಿಸಿ ಹೇಳಿಕೊಂಡಿದೆ.

ಪನ್ನೂನ್‌ ಹತ್ಯೆಯು “ಈಗ ಆದ್ಯತೆಯಾಗಿದೆ” ಎಂದು ಭಾರತದ ಬೇಹುಗಾರಿಕಾ ಸಂಸ್ಥೆ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ಅಥವಾ RAWನಲ್ಲಿ ಅಧಿಕಾರಿಯಾಗಿರುವ ವಿಕ್ರಂ ಯಾದವ್ ಬರೆದಿದ್ದಾರೆ ಎಂದು ಆಪಾದಿಸಲಾಗಿದೆ.

ಯುಎಸ್ ಸಲ್ಲಿಸಿದ ದೋಷಾರೋಪಣೆ ಪಟ್ಟಿ ಪ್ರಕಾರ, ಯಾದವ್‌ ಹಂತಕರಿಗೆ ಸಿಖ್ ಕಾರ್ಯಕರ್ತ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ನ್ಯೂಯಾರ್ಕ್ ವಿಳಾಸ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ನೀಡಿದ್ದರು. ಹಂತಕರು  ಪನ್ನೂನ್ ಮನೆಯಲ್ಲಿದ್ದಾರೆ ಎಂದು ಖಚಿತಪಡಿಸಿದ ತಕ್ಷಣ ಮುಂದಕ್ಕೆ ತನ್ನ ಕೆಲಸ ಮಾಡಬಹುದು ಎಂದು ಸೂಚಿಸಿದ್ದರು ಎನ್ನಲಾಗಿದೆ.

ಯಾದವ್ ಅವರ ಗುರುತು ಮತ್ತು ಸಂಬಂಧವು ಈ ಹಿಂದೆ ವರದಿಯಾಗಿಲ್ಲ, ಪನ್ನೂನ್‌ ಹತ್ಯೆಯ ಯೋಜನೆಯನ್ನು ಅಂತಿಮವಾಗಿ ಯುಎಸ್ ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಭಾರತೀಯ ಅಧಿಕಾರಿಯಿಂದಲೇ ನಿರ್ದೇಶಿಸಲ್ಪಟ್ಟಿದೆ ಎಂಬುದಕ್ಕೆ ಇಲ್ಲಿಯವರೆಗಿನ ಅತ್ಯಂತ ಸ್ಪಷ್ಟವಾದ ಪುರಾವೆಗಳನ್ನು  ಯುಎಸ್‌ ಒದಗಿಸುತ್ತದೆ. ಅದು ಮೋದಿಯ ಆಂತರಿಕ ವಲಯಕ್ಕೆ ಸಂಭಾವ್ಯ ಸಂಪರ್ಕಗಳ ಬಗ್ಗೆ ಬೊಟ್ಟು ಮಾಡಿದೆ.

ಅಮೆರಿಕದಲ್ಲಿ ನೆಲೆ ನಿಂತಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ಅಧಿಕಾರಿ ವಿಕ್ರಮ್ ಯಾದವ್, ಬಾಡಿಗೆ ಹಂತಕರಿಗೆ ಸೂಚನೆ ನೀಡಿದ್ದರು ಮತ್ತು ಪನ್ನೂನ್ ಹತ್ಯೆ ಕಾರ್ಯಾಚರಣೆಯನ್ನು ಆ ಸಮಯದಲ್ಲಿ ರಾ ಮುಖ್ಯಸ್ಥರಾಗಿದ್ದ ಸಮಂತ್ ಗೋಯಲ್ ಅನುಮೋದಿಸಿದ್ದರು ಎಂದು ಅಮೆರಿಕದ ಗುಪ್ತಚರ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಮೋದಿಯವರ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಅವರು ಸಿಖ್ ಕಾರ್ಯಕರ್ತ ಪನ್ನೂನ್ ಹತ್ಯೆ ಸಂಚಿನ ಬಗ್ಗೆ ಬಹುಶಃ ತಿಳಿದಿದ್ದರು ಎಂದು ಯುಎಸ್ ಬೇಹುಗಾರಿಕಾ ಸಂಸ್ಥೆಗಳು ಹೇಳಿದೆ. ಆದರೆ ಇದಕ್ಕೆ ಯಾವುದೇ ಸ್ಪಷ್ಟ ಪುರಾವೆಯನ್ನು ನೀಡಿಲ್ಲ. ಈ ಬಗ್ಗೆ ಮಾಹಿತಿ ಕೋರಿ ಅಜಿತ್‌ ದೋವಲ್ ಅಥವಾ ಗೋಯಲ್‌ಗೆ ವಾಷಿಂಗ್‌ ಟನ್‌ ಪೋಸ್ಟ್‌ ಸಂಪರ್ಕಿಸಿದ್ದರೂ ಪ್ರತಿಕ್ರಿಯಿಸಿಲ್ಲ ಎನ್ನಲಾಗಿದೆ.

ಭಾರತವು ಯುಎಸ್ ನೆಲದಲ್ಲಿ ಹತ್ಯೆಯನ್ನು ಮಾಡುವಂತಹ ಅಪಯಾಕಾರಿ ಪ್ರಯತ್ನವನ್ನು ಏಕೆ ಮಾಡುತ್ತದೆ ಎಂದು ಕೇಳಿದಾಗ, ಅವರು ಅದರಿಂದ ಪಾರಾಗಬಹುದು ಎಂದು ಭಾವಿಸಿದ್ದರು ಎಂದು ಭದ್ರತಾ ಅಧಿಕಾರಿಯೋರ್ವರು ಹೇಳಿದ್ದಾರೆ.

ಜೂನ್‌ನಲ್ಲಿ ವ್ಯಾಂಕೋವರ್ ಉಪನಗರದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ಬಳಿಕ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧ ಹಳಸಿತ್ತು. ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿವಾದದ ಮಧ್ಯೆಯೇ ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರ ಹತ್ಯೆಯನ್ನು ಮಾಡುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ಕೂಡ ಹೇಳಿಕೊಂಡಿತ್ತು.

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌, ಹರ್ದೀಪ್ ಸಿಂಗ್ ನಿಜ್ಜರ್‌ನಂತೆ ದಶಕಗಳ ಕಾಲದ ಸಿಖ್‌ ಪ್ರತ್ಯೇಕವಾದಿ ಪ್ರತಿಪಾದಕನಾಗಿದ್ದಾನೆ. ಪನ್ನೂನ್ ಗಾರ್ಡಿಯನ್‌ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ಕೆನಡಾದಲ್ಲಿರುವ ಭಾರತೀಯ ಅಧಿಕಾರಿಗಳು ನಿಜ್ಜರ್ ಹತ್ಯೆಯ ತನಿಖೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಜ್ಜರ್‌ ಗುಂಡೇಟಿಗೆ ಬಲಿಯಾಗಿ 5 ತಿಂಗಳಾದರೂ ಯಾರನ್ನೂ ಬಂಧಿಸಲಾಗಿಲ್ಲ. ಸರಣಿ ಹತ್ಯೆಗಳ ಈ ತನಿಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಟೊರೊಂಟೊ ಅಥವಾ ವ್ಯಾಂಕೋವರ್‌ನಲ್ಲಿ ನಡೆದ ಸರಳವಾದ ಕೊಲೆಯಲ್ಲ. ಇದು ಖಲಿಸ್ತಾನ್ ಪರ ಕಾರ್ಯಕರ್ತನ ಸುಸಂಘಟಿತ ಕೊಲೆಯಾಗಿದೆ ಎಂದು ಹೇಳಿದ್ದರು.

ಭಾರತದ ಪ್ರಜೆ ನಿಖಿಲ್ ಗುಪ್ತಾ ಈ ಪ್ರಕರಣದಲ್ಲಿ ಷಾಮೀಲಾಗಿದ್ದಾರೆ ಎಂಬ ಸುಳಿವನ್ನು ಅಮೆರಿಕದ ಅಧಿಕಾರಿಗಳು ಈ ಹಿಂದೆ ನೀಡಿದ್ದರು. ಭಾರತೀಯ ಅಧಿಕಾರಿಗಳ ಸೂಚನೆ ಮೇರೆಗೆ ಅವರು ಕಾರ್ಯ ನಿರ್ವಹಿಸಿದ್ದರು ಎಂದು ಆಪಾದಿಸಲಾಗಿತ್ತು. ಆ ಬಳಿಕ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವರು ಪರುಗ್ವೆಯ ಜೈಲಿನಲ್ಲಿದ್ದಾರೆ. ಈ ಕುರಿತು ತನಿಖೆ ನಡೆಸಲು ಭಾರತ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು. ಭಾರತೀಯ ಅಧಿಕಾರಿಗಳ ಪಾತ್ರ ಕುರಿತಂತೆ ಅಮೆರಿಕ ಹಂಚಿಕೊಂಡ ಮಾಹಿತಿಗಳ ಬಗ್ಗೆ ತನಿಖೆ ನಡೆಸಲು ಸಮಿತಿ ನೇಮಿಸಿದ್ದರೂ, ಇದು ಭಾರತದ ಭದ್ರತೆಗೆ ಸಂಬಂಧಪಟ್ಟ ವಿಚಾರ ಎಂದು ಹೇಳಿ ಈ ಸಂಬಂಧ ಯಾವುದೇ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

ಇದನ್ನು ಓದಿ: ಗಾಝಾ ಹತ್ಯಾಕಾಂಡ: ನೆತನ್ಯಾಹು ಸೇರಿ ಇಸ್ರೇಲ್‌ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...