Homeಮುಖಪುಟಆರೋಪಿ ಲೊಕೇಶನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಗೌಪ್ಯತೆ ಹಕ್ಕಿಗೆ ಧಕ್ಕೆ ತರುತ್ತದೆ: ಸುಪ್ರೀಂ ಕೋರ್ಟ್

ಆರೋಪಿ ಲೊಕೇಶನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಗೌಪ್ಯತೆ ಹಕ್ಕಿಗೆ ಧಕ್ಕೆ ತರುತ್ತದೆ: ಸುಪ್ರೀಂ ಕೋರ್ಟ್

- Advertisement -
- Advertisement -

ಆರೋಪಿ ಗೂಗಲ್ ಲೊಕೇಷನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಸಂವಿಧಾನದ 21ನೇ ವಿಧಿಯಡಿ ಒದಗಿಸಲಾದ ಗೌಪ್ಯತೆಯ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಮೌಖಿಕವಾಗಿ  ಹೇಳಿದೆ.

ಗೂಗಲ್ ಲೊಕೇಷನ್‌ ಪಿನ್ ಹಂಚಿಕೊಳ್ಳಲು ಈ ಹಿಂದೆ ಎರಡು ಬಾರಿ ಸುಪ್ರೀಂ ಕೋರ್ಟ್ ನಿರ್ದೇಶಿಸಿದ್ದನ್ನು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಒಪ್ಪಿಕೊಂಡಿತಾದರೂ, ಅದು ಜಾಮೀನು ಷರತ್ತಾಗಿರಲು ಸಾಧ್ಯವಿಲ್ಲ ಎಂದಿದೆ.

ಗೂಗಲ್‌ ಮ್ಯಾಪ್‌ ಅಪ್ಲಿಕೇಷನ್‌ನಲ್ಲಿರುವ ಲೊಕೇಷನ್‌ ಪಿನ್ ಹಂಚಿಕೊಂಡರೆ ಮಾತ್ರ ಜಾಮೀನು ನೀಡುವುದಾಗಿ ದೆಹಲಿ ಹೈಕೋರ್ಟ್ ವಿಧಿಸಿರುವ ಷರತ್ತು ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತದೆಯೇ ಎಂಬುದನ್ನು ಪರಿಶೀಲಿಸುವುದಕ್ಕಾಗಿ, ತನ್ನ ಲೊಕೇಷನ್‌ ಪಿನ್ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುವುದನ್ನು ವಿವರಿಸುವಂತೆ ಸುಪ್ರೀಂ ಕೋರ್ಟ್ ಗೂಗಲ್ ಇಂಡಿಯಾಕ್ಕೆ ಈ ಹಿಂದೆ ನಿರ್ದೇಶನ ನೀಡಿತ್ತು.

ಪ್ರಕರಣದಲ್ಲಿ ಗೂಗಲ್ ಇಂಡಿಯಾವನ್ನು ಪಕ್ಷಕಾರನನ್ನಾಗಿ ಸೇರಿಸಿಕೊಳ್ಳುತ್ತಿಲ್ಲ ಬದಲಿಗೆ ಲೊಕೇಶನ್ ಪಿನ್‌ ಕಾರ್ಯನಿರ್ವಹಣೆಯ ಬಗ್ಗೆ ಕಂಪನಿಯಿಂದ ಮಾಹಿತಿಯನ್ನಷ್ಟೇ ಕೋರಲಾಗುತ್ತಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು.

ನಿನ್ನೆ (ಏ.29) ಗೂಗಲ್ ವಿವರಣೆ ಆಲಿಸಿದ ನ್ಯಾಯಾಲಯ, ಜಾಮೀನು ಷರತ್ತಿನಂತೆ ಗೂಗಲ್ ಲೊಕೇಶನ್ ಪಿನ್ ಹಂಚಿಕೊಳ್ಳುವ ಕುರಿತ ಆದೇಶ ಕಾಯ್ದಿರಿಸಿದೆ. ಉಳಿದ ವಿಷಯಗಳಿಗೆ ಸಂಬಂಧಿಸಿದಂತೆ ಜುಲೈ 26 ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿದ್ದ ನೈಜೀರಿಯಾ ಪ್ರಜೆ ಫ್ರಾಂಕ್ ವಿಟಾಸ್‌ ಮತ್ತು ಸಹ ಆರೋಪಿಗೆ ಮಧ್ಯಂತರ ಜಾಮೀನು ನೀಡುವಾಗ ದೆಹಲಿ ಹೈಕೋರ್ಟ್ ವಿಧಿಸಿದ್ದ ಕೆಲವು ಷರತ್ತುಗಳಲ್ಲಿ ತಾನಿರುವ ಸ್ಥಳದ ಮಾಹಿತಿಯನ್ನು (ಗೂಗಲ್‌ ಲೊಕೇಷನ್‌ ಪಿನ್) ಅಧಿಕಾರಿಗಳೊಂದಿಗೆ ಹಂಚಿಕೊಳ್ಳಬೇಕೆಂಬುದೂ ಸೇರಿತ್ತು. ಇದನ್ನು ಫ್ರಾಂಕ್ ವಿಟಾಸ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ವಾದ ಆಲಿಸಿದ ಸುಪ್ರೀಂ ಕೋರ್ಟ್‌ ಇಂತಹ ಕಠಿಣ ಜಾಮೀನು ಷರತ್ತು ವಿಧಿಸುವ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿದೆ.

ಇಂತಹದ್ದೇ ಮತ್ತೊಂದು ಪ್ರಕರಣದಲ್ಲಿ, ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ಗೂಗಲ್ ಲೊಕೇಶನ್ ಪಿನ್‌ಗಳನ್ನು ಹಂಚಿಕೊಳ್ಳುವ ಮೂಲಕ ತನ್ನ ಸ್ಥಳದ ವಿವರಗಳನ್ನು ನಿರಂತರವಾಗಿ ಪೊಲೀಸರಿಗೆ ಕಳುಹಿಸಬೇಕು ಎಂಬ ಜಾಮೀನು ಷರತ್ತಿಗೆ ನ್ಯಾಯಮೂರ್ತಿ ಓಕಾ ನೇತೃತ್ವದ ಮತ್ತೊಂದು ಪೀಠ ಕಳೆದ ವರ್ಷದ ಜುಲೈನಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದು ಕಣ್ಗಾವಲಿಗೆ ಸಮನಾಗಬಹುದು ಎಂದು ನ್ಯಾಯಪೀಠ ಮೌಖಿಕವಾಗಿ ಟೀಕಿಸಿತ್ತು.

ಮಾಹಿತಿ ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...