Homeಫ್ಯಾಕ್ಟ್‌ಚೆಕ್FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು...

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

- Advertisement -
- Advertisement -

ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, “ಗುಜರಾತ್‌ ಅದಾನಿ ಪೋರ್ಟ್‌ನಲ್ಲಿ ಹಸುಗಳಿಂದ ತುಂಬಿದ ಸಾವಿರಾರು ಟ್ರಕ್‌ಗಳು ನಿಂತಿವೆ. ಈ ಎಲ್ಲಾ ಹಸುಗಳ್ನು ಅರಬ್ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಅರಬ್ ದೇಶಗಳಲ್ಲಿ ಈ ಹಸುಗಳನ್ನು ಏನು ಮಾಡುತ್ತಾರೆ ಎಂದು. ಹರಾಮಿ ಅಂಧ ಭಕ್ತರು ಎಲ್ಲಿ ಗೋಮಾತೆ ಎಂದು ಕೂಗಾಡುತ್ತಾರೆ ಇಲ್ಲಿ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಇದೇ ರೀತಿ ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ್ದು, ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದಾಗ english.factcrescendo.com ಎಂಬ ವೆಬ್‌ಸೈಟ್‌ನಲ್ಲಿ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿರುವುದು ಕಂಡು ಬಂದಿದೆ.

ವೆಬ್‌ಸೈಟ್‌ ಹೇಳುವಂತೆ ಅವರು ಈ ಕುರಿತು ಹುಡುಕಿದಾಗ ಅರಬಿಕ್ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ದೊರೆತಿದೆ. ಅದರಲ್ಲಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ Preparing for Eid al-Adha (ಈದ್‌ ಅಲ್ ಅದ್ಹಾ ಅಥವಾ ಬಕ್ರೀದ್‌ಗೆ ಸಿದ್ದತೆ) ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಕುರಿತು ಇನ್ನಷ್ಟು ಹುಡುಕಾಡಿದಾಗ ಈಜಿಪ್ಟ್‌ನ ಡಮಿಯೆಟ್ಟಾ ಮೂಲದ ಮಾಂಸದ ಸಗಟು ವ್ಯಾಪಾರಿ ಹಮೇದ್ ಎಲ್ಹಗರಿ ಎಂಬವರು ಏಪ್ರಿಲ್ 19, 2024ರಂದು ವಿಡಿಯೋ ಹಂಚಿಕೊಂಡಿರುವುದು ಕಂಡು ಬಂದಿದೆ. ಹಮೀದ್ ಅವರ ಫೇಸ್‌ಬುಕ್ ಖಾತೆ ಪರಿಶೀಲಿಸಿದಾಗ ಅವರು ಈ ರೀತಿಯ ಹಲವು ವಿಡಿಯೋಗಳನ್ನು ಹಂಚಿಕೊಂಡಿರುವುದು ಗೊತ್ತಾಗಿದೆ. ವೈರಲ್ ವಿಡಿಯೋಗೆ ಹಮೇದ್ ಎಲ್ಹಗರಿ ಕೊಟ್ಟಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ, “ಸರಕುಗಳ ಮೇಲೆ ಮಲಗಿ ಅವುಗಳನ್ನು ತೆರವುಗೊಳಿಸಲು ಕಾಯುವವ. ಮೊದಲ 25,000 ಹೆಡ್‌ಲೈನ್‌ಗಳು” ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮೇಲ್ಗಡೆ ಉಲ್ಲೇಖಿಸಿದ ಎರಡು ಫೇಸ್‌ಬುಕ್‌ ಖಾತೆಗಳ ವಿಡಿಯೋ ಕ್ಯಾಪ್ಶನ್ ಗಮನಿಸಿದಾಗ, ಈ ವಿಡಿಯೋ ಭಾರತದಲ್ಲ, ಯಾವುದೋ ಅರಬ್ ದೇಶದ್ದು ಎಂದು ನಮಗೆ ಅರ್ಥವಾಗುತ್ತದೆ.

english.factcrescendo.com ವೈರಲ್ ವಿಡಿಯೋದಲ್ಲಿರುವ ಬಂದರನ್ನು ಹುಡುಕಿದೆ. ಈ ವೇಳೆ ಅದು ‘ಇರಾಕ್‌ನ ಉಮ್ಮು ಕಸ್ರ್ ಬಂದರು’ ಎಂದು ತಿಳಿದು ಬಂದಿದೆ.

ಬಳಿಕ english.factcrescendo.com ವೈರಲ್ ವಿಡಿಯೋದಲ್ಲಿ ಬಂದರಿನಲ್ಲಿ ನಿಂತಿರುವ ಟ್ರಕ್‌ಗಳನ್ನು ಪರಿಶೀಲಿಸಿದೆ. ಟ್ರಕ್‌ಗಳನ್ನು ಝೂಮ್ ಮಾಡಿ ನೋಡಿದಾಗ ಅದರ ಲೋಗೋ ಮರ್ಸಿಡೀಸ್ ಬೆಂಝ್‌ನದ್ದು ಎಂದು ಗೊತ್ತಾಗುತ್ತದೆ. ಭಾರತದಲ್ಲಿ ಮರ್ಸಿಡೀಸ್ ಬೆಂಝ್‌ನ ಟ್ರಕ್‌ಗಳನ್ನು ಮಾರಾಟ ಮಾಡುತ್ತಿಲ್ಲ. ಬದಲಾಗಿ ಭಾರತದಲ್ಲಿ ಮರ್ಸಿಡೀಸ್ ಬೆಂಝ್ ಗ್ರೂಪ್‌ನ ಡೈಮ್ಲೆರ್ ಕಂಪನಿಯು ‘ಭಾರತ್ ಬೆಂಝ್‘ ಬ್ರ್ಯಾಂಡ್ ಅಡಿ ಟ್ರಕ್‌ಗಳನ್ನು ಮಾರಾಟ ಮಾಡುತ್ತದೆ. ‘ಭಾರತ್ ಬೆಂಝ್‌’ ಮತ್ತು ಮರ್ಸಿಡಿಸ್ ಬೆಂಝ್‌ನ ಲೋಗೋಗಳು ವಿಭಿನ್ನವಾಗಿವೆ.

ಇನ್ನೂ ವೈರಲ್ ವಿಡಿಯೋದಲ್ಲಿ ಕಾಣಿಸುತ್ತಿರುವ ವ್ಯಕ್ತಿಗಳು ಧರಿಸಿರುವ ವಸ್ತ್ರ ಗಮನಿಸಿದರೆ, ಅವರು ಅರೇಬಿಯನ್ ಜನರ ವಸ್ತ್ರ ಕಮೀಸ್ ಧರಿಸಿದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಖಚಿತಪಡಿಸಿಬಹುದು.

ನಾವು ವೈರಲ್ ವಿಡಿಯೋವನ್ನು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದಾಗ, ವಿಡಿಯೋದಲ್ಲಿನ ಅನೇಕ ಅಂಶಗಳು ಆ ವಿಡಿಯೋ ಇರಾಕ್‌ನ ಉಮ್ಮ್‌ ಕಸ್ರ್‌ ಬಂದರಿನದ್ದು ಮತ್ತು ಅಲ್ಲಿ ಟ್ರಕ್‌ಗಳಲ್ಲಿ ತುಂಬಿರುವ ಸಾವಿರಾರು ಜಾನುವಾರುಗಳು ಮುಸ್ಲಿಮರ ಹಬ್ಬ ಬಕ್ರೀದ್‌ಗಾಗಿ ಅರಬ್ ರಾಷ್ಟ್ರಗಳಿಗೆ ಸಾಗಿಸುತ್ತಿರಬಹುದು ಎಂಬುವುದಕ್ಕೆ ಪುಷ್ಠಿ ನೀಡುತ್ತದೆ. ಹಾಗಾಗಿ, ಇದು ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...