Homeಫ್ಯಾಕ್ಟ್‌ಚೆಕ್FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು...

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

- Advertisement -
- Advertisement -

ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, “ಗುಜರಾತ್‌ ಅದಾನಿ ಪೋರ್ಟ್‌ನಲ್ಲಿ ಹಸುಗಳಿಂದ ತುಂಬಿದ ಸಾವಿರಾರು ಟ್ರಕ್‌ಗಳು ನಿಂತಿವೆ. ಈ ಎಲ್ಲಾ ಹಸುಗಳ್ನು ಅರಬ್ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಅರಬ್ ದೇಶಗಳಲ್ಲಿ ಈ ಹಸುಗಳನ್ನು ಏನು ಮಾಡುತ್ತಾರೆ ಎಂದು. ಹರಾಮಿ ಅಂಧ ಭಕ್ತರು ಎಲ್ಲಿ ಗೋಮಾತೆ ಎಂದು ಕೂಗಾಡುತ್ತಾರೆ ಇಲ್ಲಿ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಇದೇ ರೀತಿ ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ್ದು, ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದಾಗ english.factcrescendo.com ಎಂಬ ವೆಬ್‌ಸೈಟ್‌ನಲ್ಲಿ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿರುವುದು ಕಂಡು ಬಂದಿದೆ.

ವೆಬ್‌ಸೈಟ್‌ ಹೇಳುವಂತೆ ಅವರು ಈ ಕುರಿತು ಹುಡುಕಿದಾಗ ಅರಬಿಕ್ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ದೊರೆತಿದೆ. ಅದರಲ್ಲಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ Preparing for Eid al-Adha (ಈದ್‌ ಅಲ್ ಅದ್ಹಾ ಅಥವಾ ಬಕ್ರೀದ್‌ಗೆ ಸಿದ್ದತೆ) ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಕುರಿತು ಇನ್ನಷ್ಟು ಹುಡುಕಾಡಿದಾಗ ಈಜಿಪ್ಟ್‌ನ ಡಮಿಯೆಟ್ಟಾ ಮೂಲದ ಮಾಂಸದ ಸಗಟು ವ್ಯಾಪಾರಿ ಹಮೇದ್ ಎಲ್ಹಗರಿ ಎಂಬವರು ಏಪ್ರಿಲ್ 19, 2024ರಂದು ವಿಡಿಯೋ ಹಂಚಿಕೊಂಡಿರುವುದು ಕಂಡು ಬಂದಿದೆ. ಹಮೀದ್ ಅವರ ಫೇಸ್‌ಬುಕ್ ಖಾತೆ ಪರಿಶೀಲಿಸಿದಾಗ ಅವರು ಈ ರೀತಿಯ ಹಲವು ವಿಡಿಯೋಗಳನ್ನು ಹಂಚಿಕೊಂಡಿರುವುದು ಗೊತ್ತಾಗಿದೆ. ವೈರಲ್ ವಿಡಿಯೋಗೆ ಹಮೇದ್ ಎಲ್ಹಗರಿ ಕೊಟ್ಟಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ, “ಸರಕುಗಳ ಮೇಲೆ ಮಲಗಿ ಅವುಗಳನ್ನು ತೆರವುಗೊಳಿಸಲು ಕಾಯುವವ. ಮೊದಲ 25,000 ಹೆಡ್‌ಲೈನ್‌ಗಳು” ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮೇಲ್ಗಡೆ ಉಲ್ಲೇಖಿಸಿದ ಎರಡು ಫೇಸ್‌ಬುಕ್‌ ಖಾತೆಗಳ ವಿಡಿಯೋ ಕ್ಯಾಪ್ಶನ್ ಗಮನಿಸಿದಾಗ, ಈ ವಿಡಿಯೋ ಭಾರತದಲ್ಲ, ಯಾವುದೋ ಅರಬ್ ದೇಶದ್ದು ಎಂದು ನಮಗೆ ಅರ್ಥವಾಗುತ್ತದೆ.

english.factcrescendo.com ವೈರಲ್ ವಿಡಿಯೋದಲ್ಲಿರುವ ಬಂದರನ್ನು ಹುಡುಕಿದೆ. ಈ ವೇಳೆ ಅದು ‘ಇರಾಕ್‌ನ ಉಮ್ಮು ಕಸ್ರ್ ಬಂದರು’ ಎಂದು ತಿಳಿದು ಬಂದಿದೆ.

ಬಳಿಕ english.factcrescendo.com ವೈರಲ್ ವಿಡಿಯೋದಲ್ಲಿ ಬಂದರಿನಲ್ಲಿ ನಿಂತಿರುವ ಟ್ರಕ್‌ಗಳನ್ನು ಪರಿಶೀಲಿಸಿದೆ. ಟ್ರಕ್‌ಗಳನ್ನು ಝೂಮ್ ಮಾಡಿ ನೋಡಿದಾಗ ಅದರ ಲೋಗೋ ಮರ್ಸಿಡೀಸ್ ಬೆಂಝ್‌ನದ್ದು ಎಂದು ಗೊತ್ತಾಗುತ್ತದೆ. ಭಾರತದಲ್ಲಿ ಮರ್ಸಿಡೀಸ್ ಬೆಂಝ್‌ನ ಟ್ರಕ್‌ಗಳನ್ನು ಮಾರಾಟ ಮಾಡುತ್ತಿಲ್ಲ. ಬದಲಾಗಿ ಭಾರತದಲ್ಲಿ ಮರ್ಸಿಡೀಸ್ ಬೆಂಝ್ ಗ್ರೂಪ್‌ನ ಡೈಮ್ಲೆರ್ ಕಂಪನಿಯು ‘ಭಾರತ್ ಬೆಂಝ್‘ ಬ್ರ್ಯಾಂಡ್ ಅಡಿ ಟ್ರಕ್‌ಗಳನ್ನು ಮಾರಾಟ ಮಾಡುತ್ತದೆ. ‘ಭಾರತ್ ಬೆಂಝ್‌’ ಮತ್ತು ಮರ್ಸಿಡಿಸ್ ಬೆಂಝ್‌ನ ಲೋಗೋಗಳು ವಿಭಿನ್ನವಾಗಿವೆ.

ಇನ್ನೂ ವೈರಲ್ ವಿಡಿಯೋದಲ್ಲಿ ಕಾಣಿಸುತ್ತಿರುವ ವ್ಯಕ್ತಿಗಳು ಧರಿಸಿರುವ ವಸ್ತ್ರ ಗಮನಿಸಿದರೆ, ಅವರು ಅರೇಬಿಯನ್ ಜನರ ವಸ್ತ್ರ ಕಮೀಸ್ ಧರಿಸಿದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಖಚಿತಪಡಿಸಿಬಹುದು.

ನಾವು ವೈರಲ್ ವಿಡಿಯೋವನ್ನು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದಾಗ, ವಿಡಿಯೋದಲ್ಲಿನ ಅನೇಕ ಅಂಶಗಳು ಆ ವಿಡಿಯೋ ಇರಾಕ್‌ನ ಉಮ್ಮ್‌ ಕಸ್ರ್‌ ಬಂದರಿನದ್ದು ಮತ್ತು ಅಲ್ಲಿ ಟ್ರಕ್‌ಗಳಲ್ಲಿ ತುಂಬಿರುವ ಸಾವಿರಾರು ಜಾನುವಾರುಗಳು ಮುಸ್ಲಿಮರ ಹಬ್ಬ ಬಕ್ರೀದ್‌ಗಾಗಿ ಅರಬ್ ರಾಷ್ಟ್ರಗಳಿಗೆ ಸಾಗಿಸುತ್ತಿರಬಹುದು ಎಂಬುವುದಕ್ಕೆ ಪುಷ್ಠಿ ನೀಡುತ್ತದೆ. ಹಾಗಾಗಿ, ಇದು ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...