Homeಫ್ಯಾಕ್ಟ್‌ಚೆಕ್FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು...

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

- Advertisement -
- Advertisement -

ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ ಈ ವಿಡಿಯೋ ಹಂಚಿಕೊಂಡಿದ್ದು, “ಗುಜರಾತ್‌ ಅದಾನಿ ಪೋರ್ಟ್‌ನಲ್ಲಿ ಹಸುಗಳಿಂದ ತುಂಬಿದ ಸಾವಿರಾರು ಟ್ರಕ್‌ಗಳು ನಿಂತಿವೆ. ಈ ಎಲ್ಲಾ ಹಸುಗಳ್ನು ಅರಬ್ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಅರಬ್ ದೇಶಗಳಲ್ಲಿ ಈ ಹಸುಗಳನ್ನು ಏನು ಮಾಡುತ್ತಾರೆ ಎಂದು. ಹರಾಮಿ ಅಂಧ ಭಕ್ತರು ಎಲ್ಲಿ ಗೋಮಾತೆ ಎಂದು ಕೂಗಾಡುತ್ತಾರೆ ಇಲ್ಲಿ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಇದೇ ರೀತಿ ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ್ದು, ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದಾಗ english.factcrescendo.com ಎಂಬ ವೆಬ್‌ಸೈಟ್‌ನಲ್ಲಿ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿರುವುದು ಕಂಡು ಬಂದಿದೆ.

ವೆಬ್‌ಸೈಟ್‌ ಹೇಳುವಂತೆ ಅವರು ಈ ಕುರಿತು ಹುಡುಕಿದಾಗ ಅರಬಿಕ್ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ದೊರೆತಿದೆ. ಅದರಲ್ಲಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ Preparing for Eid al-Adha (ಈದ್‌ ಅಲ್ ಅದ್ಹಾ ಅಥವಾ ಬಕ್ರೀದ್‌ಗೆ ಸಿದ್ದತೆ) ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಕುರಿತು ಇನ್ನಷ್ಟು ಹುಡುಕಾಡಿದಾಗ ಈಜಿಪ್ಟ್‌ನ ಡಮಿಯೆಟ್ಟಾ ಮೂಲದ ಮಾಂಸದ ಸಗಟು ವ್ಯಾಪಾರಿ ಹಮೇದ್ ಎಲ್ಹಗರಿ ಎಂಬವರು ಏಪ್ರಿಲ್ 19, 2024ರಂದು ವಿಡಿಯೋ ಹಂಚಿಕೊಂಡಿರುವುದು ಕಂಡು ಬಂದಿದೆ. ಹಮೀದ್ ಅವರ ಫೇಸ್‌ಬುಕ್ ಖಾತೆ ಪರಿಶೀಲಿಸಿದಾಗ ಅವರು ಈ ರೀತಿಯ ಹಲವು ವಿಡಿಯೋಗಳನ್ನು ಹಂಚಿಕೊಂಡಿರುವುದು ಗೊತ್ತಾಗಿದೆ. ವೈರಲ್ ವಿಡಿಯೋಗೆ ಹಮೇದ್ ಎಲ್ಹಗರಿ ಕೊಟ್ಟಿರುವ ಅರಬಿಕ್ ಕ್ಯಾಪ್ಶನ್ ಭಾಷಾಂತರ ಮಾಡಿದಾಗ, “ಸರಕುಗಳ ಮೇಲೆ ಮಲಗಿ ಅವುಗಳನ್ನು ತೆರವುಗೊಳಿಸಲು ಕಾಯುವವ. ಮೊದಲ 25,000 ಹೆಡ್‌ಲೈನ್‌ಗಳು” ಎಂದು ಬರೆದಿರುವುದು ಗೊತ್ತಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮೇಲ್ಗಡೆ ಉಲ್ಲೇಖಿಸಿದ ಎರಡು ಫೇಸ್‌ಬುಕ್‌ ಖಾತೆಗಳ ವಿಡಿಯೋ ಕ್ಯಾಪ್ಶನ್ ಗಮನಿಸಿದಾಗ, ಈ ವಿಡಿಯೋ ಭಾರತದಲ್ಲ, ಯಾವುದೋ ಅರಬ್ ದೇಶದ್ದು ಎಂದು ನಮಗೆ ಅರ್ಥವಾಗುತ್ತದೆ.

english.factcrescendo.com ವೈರಲ್ ವಿಡಿಯೋದಲ್ಲಿರುವ ಬಂದರನ್ನು ಹುಡುಕಿದೆ. ಈ ವೇಳೆ ಅದು ‘ಇರಾಕ್‌ನ ಉಮ್ಮು ಕಸ್ರ್ ಬಂದರು’ ಎಂದು ತಿಳಿದು ಬಂದಿದೆ.

ಬಳಿಕ english.factcrescendo.com ವೈರಲ್ ವಿಡಿಯೋದಲ್ಲಿ ಬಂದರಿನಲ್ಲಿ ನಿಂತಿರುವ ಟ್ರಕ್‌ಗಳನ್ನು ಪರಿಶೀಲಿಸಿದೆ. ಟ್ರಕ್‌ಗಳನ್ನು ಝೂಮ್ ಮಾಡಿ ನೋಡಿದಾಗ ಅದರ ಲೋಗೋ ಮರ್ಸಿಡೀಸ್ ಬೆಂಝ್‌ನದ್ದು ಎಂದು ಗೊತ್ತಾಗುತ್ತದೆ. ಭಾರತದಲ್ಲಿ ಮರ್ಸಿಡೀಸ್ ಬೆಂಝ್‌ನ ಟ್ರಕ್‌ಗಳನ್ನು ಮಾರಾಟ ಮಾಡುತ್ತಿಲ್ಲ. ಬದಲಾಗಿ ಭಾರತದಲ್ಲಿ ಮರ್ಸಿಡೀಸ್ ಬೆಂಝ್ ಗ್ರೂಪ್‌ನ ಡೈಮ್ಲೆರ್ ಕಂಪನಿಯು ‘ಭಾರತ್ ಬೆಂಝ್‘ ಬ್ರ್ಯಾಂಡ್ ಅಡಿ ಟ್ರಕ್‌ಗಳನ್ನು ಮಾರಾಟ ಮಾಡುತ್ತದೆ. ‘ಭಾರತ್ ಬೆಂಝ್‌’ ಮತ್ತು ಮರ್ಸಿಡಿಸ್ ಬೆಂಝ್‌ನ ಲೋಗೋಗಳು ವಿಭಿನ್ನವಾಗಿವೆ.

ಇನ್ನೂ ವೈರಲ್ ವಿಡಿಯೋದಲ್ಲಿ ಕಾಣಿಸುತ್ತಿರುವ ವ್ಯಕ್ತಿಗಳು ಧರಿಸಿರುವ ವಸ್ತ್ರ ಗಮನಿಸಿದರೆ, ಅವರು ಅರೇಬಿಯನ್ ಜನರ ವಸ್ತ್ರ ಕಮೀಸ್ ಧರಿಸಿದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಖಚಿತಪಡಿಸಿಬಹುದು.

ನಾವು ವೈರಲ್ ವಿಡಿಯೋವನ್ನು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದಾಗ, ವಿಡಿಯೋದಲ್ಲಿನ ಅನೇಕ ಅಂಶಗಳು ಆ ವಿಡಿಯೋ ಇರಾಕ್‌ನ ಉಮ್ಮ್‌ ಕಸ್ರ್‌ ಬಂದರಿನದ್ದು ಮತ್ತು ಅಲ್ಲಿ ಟ್ರಕ್‌ಗಳಲ್ಲಿ ತುಂಬಿರುವ ಸಾವಿರಾರು ಜಾನುವಾರುಗಳು ಮುಸ್ಲಿಮರ ಹಬ್ಬ ಬಕ್ರೀದ್‌ಗಾಗಿ ಅರಬ್ ರಾಷ್ಟ್ರಗಳಿಗೆ ಸಾಗಿಸುತ್ತಿರಬಹುದು ಎಂಬುವುದಕ್ಕೆ ಪುಷ್ಠಿ ನೀಡುತ್ತದೆ. ಹಾಗಾಗಿ, ಇದು ಗುಜರಾತ್‌ನ ಅದಾನಿ ಬಂದರಿನದ್ದಲ್ಲ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...