Homeನಿಜವೋ ಸುಳ್ಳೋಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ...

ಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ ಸುಳ್ಳು..

- Advertisement -
- Advertisement -

ಸುಳ್ಳು ಸುದ್ದಿಗಳನ್ನು ವೈರಲ್ ಮಾಡುವುದರಲ್ಲಿ ಚಡ್ಡಿ ಪೈಲ್ವಾನರು ನಿಸ್ಸೀಮರು. ಇಂತಹ ಫೇಕ್ ನ್ಯೂಸ್‌ಗಳನ್ನು ಹಬ್ಬಿಸಿಯೇ 2014ರಲ್ಲಿ ಅಧಿಕಾರದ ಗದ್ದುಗೆಯನ್ನು ಚೋರ್ ಚೌಕಿದಾರರು ಆಕ್ರಮಿಸಿಕೊಂಡರು. ಇವರ ಹುಸಿ ಆಶ್ವಾಸನೆಗಳಲ್ಲಿ ಪ್ರಮುಖವಾದುದು “ಸ್ವಿಸ್ ಬ್ಯಾಂಕ್ ನಲ್ಲಿ ಭಾರತದ ಲೂಟಿಕೋರರು ಇಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಜಮೆ ಮಾಡುತ್ತೇವೆಂಬ” ದಾಳ ಜನರ ಮೇಲೆ ಹೆಚ್ಚು ಪರಿಣಾಮ ಬೀರಿತ್ತು.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಬುರುಡೆ ಆಶ್ವಾಸನೆ ಮತ್ತು ಖಾತೆಗೆ ಹಣ ಹಾಕಲು ಎಲ್ಲರೂ ಬ್ಯಾಂಕ್ ಖಾತೆ ಹೊಂದಿರಬೇಕು, ಅದಕ್ಕಾಗಿ ಜನಧನ್ ಅಕೌಂಟ್ ಮಾಡಿಸಬೇಕೆಂಬುದನ್ನು ನಂಬಿದ ಜನರು ಅಕೌಂಟ್ ಕೂಡ ಮಾಡಿಸಿದ್ದೂ ಆಯಿತು. ಆದರೆ ಖಾತೆಗೆ 15 ಲಕ್ಷ ಜಮೆಮಾಡುವುದಿರಲಿ, ಮಿನಿಮಮ್ ಬ್ಯಾಲೆನ್ಸ್ ರೂಲ್ಸ್ ತಂದು ಜನ ಅಷ್ಟೋ ಇಷ್ಟೊ ಕೂಡಿಟ್ಟಿದ್ದ  ಹಣವನ್ನೂ ಅಕೌಂಟ್ ಗೆ ಹಾಕುವಂತೆ ಮಾಡಿದರು. ಮತಹಾಕಿದ ತಪ್ಪಿಗೆ ಉಚಿತವಾಗಿ ಬಂದ ಅಕೌಂಟ್ ಗೆ ತಾವೇ ದಂಡ ಕಟ್ಟುವಂತಹ ದುಸ್ಥಿತಿಗೆ ಜನರನ್ನು ತಂದು ಫೇಕ್ ಸರದಾರರು ಜನರನ್ನು ಯಾಮಾರಿಸಿದರು.

ಈಗ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಲ್ಲಿ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಚಡ್ಡಿ ಸರದಾರರು ತಮ್ಮ ಫೇಕ್ ನ್ಯೂಸ್ ಕಾರ್ಖಾನೆಯಿಂದ ಮತ್ತೊಂದು ಫೇಕ್ ನ್ಯೂಸನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹಬ್ಬಿಸುತ್ತಿದೆ. ಅದೇನೆಂದರೆ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪು ಹಣ ಹೊಂದಿರುವ ಭಾರತದ 24 ರಾಜಕಾರಣಿಗಳು ಮತ್ತು ಉದ್ಯಮಿಗಳ ಹೆಸರನ್ನು ವಿಕಿಲೀಕ್ಸ್ ಪ್ರಕಟಿಸಿದೆ ಎಂಬುದು. ಮೋದಿ ಮಹಾಶಯ ಹೇಳಿದಂತೆ ಕಪ್ಪುಹಣ ಕೂಳರ ಪಟ್ಟಿಯನ್ನು ತಂದರು. ಇದು ಟ್ರೇಲರ್ ಇನ್ನೂ ಪಿಕ್ಚರ್ ಬಾಕಿ ಇದೆ ಎಂದು ಚಡ್ಡಿ ಪೈಲ್ವಾನರು ಹರ್ಷೋದ್ಘಾರದಿಂದ ಹಬ್ಬಿಸುತ್ತಿದ್ದಾರೆ. ಸ್ವಿಸ್‌ ಬ್ಯಾಂಕ್‌ನ ಕಪ್ಪು ಕೂಳರ ಕೊರಳ ಪಟ್ಟಿ ಹಿಡಿದ ಮೋದಿ ಎಂದು ಮಾಧ್ಯಮಗಳು ಸುದ್ದಿ ಮಾಡಿ ಬಕೆಟ್ ಹಿಡಿಯುವಲ್ಲಿ ನಾ ಮುಂದು ತಾ ಮುಂದು ಪೈಪೋಟಿ ನಡೆಸಿದವು.

ಆದರೆ ಸತ್ಯ ಏನಂದ್ರೆ ವಿಕಿಲೀಕ್ಸ್ ಈ ಬಗ್ಗೆ ಯಾವುದೇ ವರದಿಯನ್ನು ಮಾಡಿಲ್ಲ. ಫೇಕ್ ಸರದಾರರು ಹರಿಬಿಟ್ಟಿದ್ದ ಈ ಸುದ್ದಿಯ ಬಗ್ಗೆ ಬೂಮ್ ಲೈವ್ ಸಂಸ್ಥೆಯು ಫ್ಯಾಕ್ಟ್ ಚೆಕ್ ಮಾಡಿ ವರದಿಯನ್ನು ಪ್ರಕಟಿಸಿದೆ. ವಿಕಿಲೀಕ್ಸ್ ಕಪ್ಪು ಹಣ ಹೊಂದಿರುವವರ ಪಟ್ಟಿಯ ಬಿಡುಗಡೆ ಮಾಡಿರುವ ಬಗ್ಗೆ ಎಲ್ಲಿಯೂ ವರದಿ ಮಾಡಿಲ್ಲ. ಅಲ್ಲದೆ ವಿಕಿಲೀಕ್ಸ್‌ ಅಧಿಕೃತ ಟ್ವಿಟರ್ ಖಾತೆಯಲ್ಲಾಗಲೀ, ವೆಬ್ ಸೈಟ್ ನಲ್ಲಾಗಲೀ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಬೂಮ್ ಲೈಮ್ ದೃಢಪಡಿಸಿದೆ.

ಅಂದಹಾಗೆ ಚುನಾವಣೆಗಳನ್ನು ಗಿಮಿಕ್ ಮಾಡುತ್ತಲೇ ಎದುರಿಸುತ್ತಿರುವ ಚಡ್ಡಿ ಪೈಲ್ವಾನರ ಇಂತಹ ವರಸೆ ಇದೇ ಮೊದಲೇನೂ ಅಲ್ಲ. 2011ರಲ್ಲೇ ಇಂತದ್ದೇ 24 ಜನರ ಹೆಸರಿರುವ ಪಟ್ಟಿ ಎಲ್ಲಾ ಕಡೆ ಹರಿದಾಡಿತ್ತು. ನಂತರ 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರವೂ ಮೋದಿ ಮೊದಲ ಹೆಜ್ಜೆ ಎಂದೂ ಫೇಕ್ ಸರದಾರರು ಇಂತದ್ದೇ ಸುದ್ದಿಯನ್ನು ಹಬ್ಬಿಸಿದ್ದರು. ತಮಾಷೆಯೆಂದರೆ ಈ ಚಡ್ಡಿ ಸರದಾರರಿಗೆ ಕೌಂಟರ್ ಕೊಟ್ಟು 2017-18ರಲ್ಲಿಯೂ ಇಂಥ ಫೇಕ್ ನ್ಯೂಸ್ ಹರಿದಾಡಿತ್ತು. ಆ ಪಟ್ಟಿಯಲ್ಲಿ ನಾನೊಬ್ಬ ಚೌಕಿದಾರ, ನಾನೂ ತಿನ್ನಲ್ಲ – ತಿನ್ನೋರಿಗೂ ಬಿಡಲ್ಲ ಎಂದು ಬಿಲ್ಡಪ್ ತೆಗೆದುಕೊಳ್ಳುತ್ತಿದ್ದ ಮೋದಿಯವರ ಹೆಸರನ್ನೂ ಸೇರಿಸಿ ವೈರಲ್ ಮಾಡಲಾಗಿತ್ತು.

2011ರಲ್ಲಿ ಮೊದಲ ಬಾರಿಗೆ ಹರಿದು ಬಂದ ಸುದ್ದಿ ಫೇಕ್ ಎಂದು ವಿಕಿಲೀಕ್ಸ್ ಸ್ಪಷ್ಟಪಡಿಸಿತ್ತು. ಮುಂದೆಯೂ ಇಂಥದ್ದೇ ಫೇಕ್ ನ್ಯೂಸ್ ಹರಿದಾಡಲಾರಂಭಿಸಿದಾಗ ವಿಕಿಲೀಕ್ಸ್ ತಲೆ ಕೆಡಿಸಿಕೊಳ್ಳಲಿಲ್ಲ. ಒಟ್ಟಿನಲ್ಲಿ ಚುನಾವಣೆಗಳು ಎದುರಾದಾಗಲೆಲ್ಲಾ ಈ ದೇಶಕ್ಕೆ ಕಪ್ಪು ಹಣ ಕೂಳರ ಪಟ್ಟಿಗಳು ಬಿಡುಗಡೆಯಾಗುತ್ತವೆ. ದಸರಾ ಸಂದರ್ಭದಲ್ಲಿ ಭಯೋತ್ಪಾದರು ಮೈಸೂರು, ಬೆಂಗಳೂರಿನ ಮೇಲೆ ಅಟ್ಯಾಕ್ ಮಾಡುವ ಫೇಕ್ ಸಂದರ್ಭಗಳೂ, ಫೇಕ್ ಸುದ್ದಿಗಳು ಹೆಗ್ಗಿಲ್ಲದೆ ಹರಿಯುತ್ತವೆ. ಇಂತಹ ಫೇಕ್ ಸುದ್ದಿಗಳನ್ನು ನೋಡಿ ನಿಜವಾಗಿಯೂ ಅಟ್ಯಾಕ್ ಆದರೂ ಜನರು ತಲೆ ಕೆಡಿಸಿಕೊಳ್ಳದ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ.

ಇದೆಲ್ಲದರ ಮಧ್ಯೆ, ಸಾಮಾನ್ಯ ಜ್ಞಾನವೂ, ವಿಶ್ಲೇಷಣೆಯೂ ಇಲ್ಲದ ನ್ಯೂಸ್ ಚಾನಲ್ ಗಳು ಅದು ಫೇಕ್ ಅಥವಾ ಫ್ಯಾಕ್ಟ್ ಆಗಿದೆಯೇ ಎಂದೂ ನೋಡದೆ ನಾಮುಂದು ತಾಮುಂದು ಎಂಬಂತೆ ಫೇಕ್ ಸುದ್ದಿಯನ್ನೇ ಬಿತ್ತರಿಸುತ್ತಿರುವುದು ವಿಪರ್ಯಾಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...