Homeಮುಖಪುಟಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

- Advertisement -
- Advertisement -

ಕೋವಿಡ್ -19 ವಿರುದ್ಧದ ‘ಕೋವಿಶೀಲ್ಡ್‌’ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ ಥ್ರಂಬೋಸಿಸ್ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ರಕ್ತದಲ್ಲಿ ಪ್ಲೇಟ್ಲೆಟ್‌ ಅಂಶಗಳು ಕಡಿಮೆಯಾಗಲು ಕಾರಣವಾಗುತ್ತದೆ ಎನ್ನುವುದು ಇದೀಗ ಬಹಿರಂಗವಾಗಿದೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್‌ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿದೆ ಮತ್ತು ದೇಶದಲ್ಲಿ ವ್ಯಾಪಕವಾಗಿ ಈ ಲಸಿಕೆಯನ್ನು ನೀಡಲಾಗಿದೆ.

‘ಅಸ್ಟ್ರಾಜೆನೆಕಾ’ ಕಂಪನಿಯು ಈ ಕುರಿತ 51 ಮೊಕದ್ದಮೆಗಳನ್ನು ಎದುರಿಸುತ್ತಿದೆ, ಕೋವಿಶೀಲ್ಡ್‌ ಲಸಿಕೆಯು ಡಜನ್‌ಗಟ್ಟಲೆ ಪ್ರಕರಣಗಳಲ್ಲಿ ಸಾವು ಮತ್ತು ಗಂಭೀರವಾದ ಗಾಯವನ್ನು ಉಂಟುಮಾಡಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ಪರಿಹಾರವನ್ನು ಬಯಸುತ್ತಿದ್ದಾರೆ. ಈ ಸುದ್ದಿಯು ಭಾರತದ ಜನರನ್ನು ಒಳಗೊಂಡಂತೆ ವಿಶ್ವದಾದ್ಯಂತ ಕೋಟ್ಯಾಂತರ ಜನರ ಮೇಲೆ ಪರಿಣಾಮ ಬೀರಿದೆ.

ನೀವು ಚಿಂತೆ ಮಾಡಬೇಕೇ?

ಕೋವಿಶೀಲ್ಡ್‌ ಲಸಿಕೆ ಬಗ್ಗೆ ಉಂಟಾಗುವ ಅಪರೂಪದ ಈ ಅಡ್ಡ ಪರಿಣಾಮದ ಬಗ್ಗೆ ವೈದ್ಯರನ್ನು ಮಾತನಾಡಿಸಿದಾಗ ಅವರು ಈ ಕುರಿತ ದೀರ್ಘ ಕಾಲದ ಪರಿಣಾಮ ಬೀರುವುದನ್ನು ನಿರಾಕರಿಸಿದ್ದಾರೆ. ಲಸಿಕೆಗೆ ಸಂಬಂಧಿಸಿದ ಪ್ರತಿಕೂಲ ಪರಿಣಾಮಗಳು ಸಾಮಾನ್ಯವಾಗಿ ಲಸಿಕೆ ನೀಡಿದ ನಂತರ ಕೆಲವು ವಾರಗಳಲ್ಲಿ (1-6 ವಾರಗಳಲ್ಲಿ) ಸಂಭವಿಸುತ್ತವೆ. ಆದ್ದರಿಂದ 2 ವರ್ಷಗಳ ಹಿಂದೆ ಲಸಿಕೆ ತೆಗೆದುಕೊಂಡ ಭಾರತದ ಜನರು ಈ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ಡಾ. ಸುಧೀರ್ ಕುಮಾರ್ ಹೇಳಿದ್ದಾರೆ.

ಭಾರತದಲ್ಲಿ ಲಸಿಕೆ ಪಡೆದ ನಂತರ ಜನರಲ್ಲಿ ಟಿಟಿಎಸ್ ಸಂಭವಿಸುವಿಕೆ ಕಂಡು ಬಂದಿಲ್ಲ ಎಂದು ಡಾ.ಕುಮಾರ್ ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ಸಹ-ಅಧ್ಯಕ್ಷರಾದ ಡಾ.ರಾಜೀವ್ ಜಯದೇವನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ನಿರ್ದಿಷ್ಟ ಅಡ್ಡಪರಿಣಾಮವು ಮೊದಲ ಡೋಸ್ ಪಡೆದ ಮೊದಲ ತಿಂಗಳಲ್ಲಿ ಮಾತ್ರ ಕಂಡು ಬರುತ್ತದೆ, ನಂತರ ಕಂಡು ಬರುವುದಿಲ್ಲ ಎಂದು ಹೇಳಿದ್ದಾರೆ.

ಕೆಲ ಪ್ರತ್ಯೇಕ ಪ್ರಕರಣಗಳಲ್ಲಿ ಈ ರೀತಿ ವರದಿಯಾಗಿದೆ. ಆದ್ದರಿಂದ, ಕೋವಿಡ್ ವ್ಯಾಕ್ಸಿನೇಷನ್ ನಂತರ ಟಿಟಿಪಿ ಅತ್ಯಂತ ಅಪರೂಪವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಕೋವಿಡ್-19 ವ್ಯಾಕ್ಸಿನೇಷನ್‌ ಪಡೆದ ನಂತರ ರಕ್ತ ಹೆಪ್ಪುಗಟ್ಟುವಿಕೆ ಕುರಿತ ಪ್ರಕರಣ ವಿಶ್ವದ ವಿವಿಧ ಭಾಗಗಳಿಂದ 2021ರಿಂದ ವರದಿಯಾಗಿದೆ ಎಂದು ಹೇಳಿದ್ದಾರೆ.

TTS ಕಳೆದ 100 ವರ್ಷಗಳಿಂದ ಗುರುತಿಸಲ್ಪಟ್ಟಿರುವ ರೋಗವಾಗಿದೆ, ಮೊದಲ ಪ್ರಕರಣವನ್ನು 1924ರಲ್ಲಿ 16 ವರ್ಷದ ಬಾಲಕಿಯಲ್ಲಿ ಪತ್ತೆ ಹಚ್ಚಲಾಗಿದೆ. ಇದು ಕಳೆದ ನಾಲ್ಕು ದಶಗಳಿಂದ ವೈದ್ಯರ ನಿಗಾದಲ್ಲಿ ಇದೆ ಎಂದು ಡಾ.ಕುಮಾರ್‌ ಹೇಳಿದ್ದಾರೆ.

ಕೋವಿಡ್ ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತವೆ, ಆದರೆ ಅಪಾಯವು ತುಂಬಾ ಚಿಕ್ಕದಾಗಿದೆ. ಭಾರತ ಮತ್ತು ಇತರ ದೇಶಗಳಿಂದ ಪ್ರಕಟವಾದ ಅನೇಕ ವೈಜ್ಞಾನಿಕ ಅಧ್ಯಯನಗಳಲ್ಲಿ ಇದು ಸಾಬೀತಾಗಿದೆ. ಕೋವಿಡ್-19 ರಕ್ತ ಹೆಪ್ಪುಗಟ್ಟುವಿಕೆ, ಹೃದಯಾಘಾತ ಮತ್ತು ಪಾರ್ಶ್ವವಾಯುಗಳಿಗೆ ಒಂದು ಸ್ಥಾಪಿತ ಕಾರಣವಾಗಿದೆ ಮತ್ತು ಲಸಿಕೆಯನ್ನು ಪಡೆದವರು ಈ ಬಗ್ಗೆ ಕಡಿಮೆ ಅಪಾಯವನ್ನು ಹೊಂದಿರುತ್ತಾರೆ ಎಂದು ಡಾ ಜಯದೇವನ್ ಹೇಳಿದ್ದಾರೆ.

COVISHIELDಗಿಂತ COVAXIN ಉತ್ತಮವಾಗಿದೆಯೇ?

ಪ್ರತಿಕೂಲ ಪರಿಣಾಮಗಳ ಅಪಾಯದ ಆಧಾರದ ಮೇಲೆ ಒಂದು ಕೋವಿಡ್ ಲಸಿಕೆಯನ್ನು ಇನ್ನೊಂದಕ್ಕಿಂತ ಉತ್ತಮ ಎಂದು ಆಯ್ಕೆ ಮಾಡಲು ಸಾಕಷ್ಟು ದಾಖಲೆಗಳು ಇಲ್ಲ. ಎಲ್ಲಾ ಲಸಿಕೆಗಳು ಮತ್ತು ವೈದ್ಯಕೀಯ ಚಿಕಿತ್ಸೆಗಳು ಅಡ್ಡ ಪರಿಣಾಮಗಳನ್ನು ಹೊಂದಿವೆ. ಭಾರತದಲ್ಲಿ ಈ ಲಸಿಕೆಗಳನ್ನು ತೆಗೆದುಕೊಂಡ ಕೋಟಿಗಟ್ಟಲೆ ಜನರು ಈಗ ಜೀವಂತವಾಗಿದ್ದಾರೆ ಮತ್ತು ಚೆನ್ನಾಗಿದ್ದಾರೆ ಎಂದು ಡಾ.ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...