Homeಮುಖಪುಟಲೋಕಸಭೆ ಚುನಾವಣೆ : 1 ಮತ್ತು 2ನೇ ಹಂತದ ಮತದಾನದ ಅಂತಿಮ ಅಂಕಿ ಅಂಶ ಇನ್ನೂ...

ಲೋಕಸಭೆ ಚುನಾವಣೆ : 1 ಮತ್ತು 2ನೇ ಹಂತದ ಮತದಾನದ ಅಂತಿಮ ಅಂಕಿ ಅಂಶ ಇನ್ನೂ ಪ್ರಕಟಿಸದ ಚು. ಆಯೋಗ

- Advertisement -
- Advertisement -

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ಮತ್ತು ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು ನಡೆದಿದೆ. ಆದರೆ, ಭಾರತೀಯ ಚುನಾವಣಾ ಆಯೋಗ (ಇಸಿಐ) ಎರಡೂ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ.

ಎರಡೂ ಬಾರಿಯೂ ಸಂಜೆ 7 ಗಂಟೆಯ ಹೊತ್ತಿಗೆ ಮತದಾನದ ಅಂದಾಜು ಟ್ರೆಂಡ್ ಬಗ್ಗೆ ಮಾತ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಏಪ್ರಿಲ್ 19 ರಂದು ಅಂದಾಜು 60 ಶೇ. ಮತ್ತು ಏಪ್ರಿಲ್ 26 ರಂದು 60.96 ಶೇ. ಮತದಾನವಾಗಿದೆ ಎಂದಿದೆ.

thehindubusinessline.com ಪ್ರಕಟಿಸಿದ ವರದಿಯಲ್ಲಿ ಚುನಾವಣಾ ಆಯೋಗದ ಉನ್ನತ ಅಧಿಕಾರಿಯೊಬ್ಬರು ಮೊದಲ ಹಂತದಲ್ಲಿ ಅಂದಾಜು ಶೇ. 66.14 ಮತ್ತು ಎರಡನೇ ಹಂತದಲ್ಲಿ ಶೇ. 66.7 ರಷ್ಟು ಅಂತಿಮ ಮತದಾನವಾಗಿದೆ ಎಂದು ತಿಳಿಸಿದ್ದಾರೆ. ಅಂತಿಮ ಅಂಕಿ ಅಂಶಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತೇವೆ ಎಂದಿದ್ದಾರೆ. ಆದರೆ, ಇದುವರೆಗೆ ಅಂತಿಮ ಅಂಕಿ ಅಂಶ ಬಿಡುಗಡೆ ಮಾಡಿಲ್ಲ ಎಂದಿದೆ.

ಮತದಾನದ ಅಂಕಿ ಅಂಶಗಳ ಕುರಿತಾಗಿ ಮಾತ್ರ ನಾವು ಹೇಳುತ್ತಿಲ್ಲ. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ನೋಂದಾಯಿತ ಮತದಾರರ ಸಂಖ್ಯೆಯೂ ಕಾಣೆಯಾಗಿದೆ ಎಂದು thehindubusinessline.com ವರದಿಯಲ್ಲಿ ತಿಳಿಸಿದೆ.

ವಿವಿಧ ಕ್ಷೇತ್ರಗಳ ಮತದಾರರ ಸಂಖ್ಯೆಯನ್ನು ತಿಳಿದುಕೊಳ್ಳಲು ಮುಂದಾದಾಗ, ಉತ್ತರ ಪ್ರದೇಶದಂತಹ ಕೆಲ ಆಯ್ದ ರಾಜ್ಯಗಳ ಬೂತ್‌ವಾರು ಮತದಾರರ ಪಟ್ಟಿಗಳು ಮಾತ್ರ ನಮಗೆ ದೊರೆತಿದೆ. ಒಡಿಶಾ, ಬಿಹಾರ, ದೆಹಲಿಯಂತಹ ರಾಜ್ಯಗಳ ದತ್ತಾಂಶಗಳು ವೆಬ್‌ಸೈಟ್‌ನಲ್ಲಿ ಲಭ್ಯವಿಲ್ಲ. ಬಿಹಾರ, ಒಡಿಶಾ ರಾಜ್ಯಗಳ ಮತದಾರರ ಸಂಖ್ಯೆ ತಿಳಿದುಕೊಳ್ಳಲು ಪ್ರಯತ್ನಿಸಿದಾಗ ಮಾಹಿತಿ ಒದಗಿಸಬೇಕಾದ ವೆಬ್‌ಸೈಟ್‌ನ ಪುಟದಲ್ಲಿ ದೋಷದ ಸಂದೇಶ ಕಾಣಿಸಿಕೊಂಡಿದೆ ಎಂದು ವರದಿ ಹೇಳಿದೆ.

ಇದುವರೆಗಿನ ಅಂದಾಜು ಮತದಾನದ ಪ್ರಮಾಣವು 2019ರ ಲೋಕಸಭೆ ಚುನಾವಣೆಯಲ್ಲಿ ಕಂಡುಬಂದಕ್ಕಿಂತ ಕಡಿಮೆಯಾಗಿದೆ ಎಂದು ದಿ ವೈರ್ ವರದಿ ತಿಳಿಸಿದೆ.

ಈ ಕುಸಿತವನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು? ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ ಅವರಂತಹ ಮೋದಿ ಸರ್ಕಾರದ ಟೀಕಾಕಾರರು ಎನ್‌ಡಿಎಯೇತರ ಪಕ್ಷಗಳಿಗಿಂತ ಬಿಜೆಪಿ ನೇತೃತ್ವದ ಎನ್‌ಡಿಎ ತೆಕ್ಕೆಯಲ್ಲಿರುವ ಕ್ಷೇತ್ರಗಳಲ್ಲಿ ಮತದಾನದ ಕುಸಿತವು ಹೆಚ್ಚಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಆದರೆ, ಸುಡುಬಿಸಿಲು ಮತದಾನದ ಪ್ರಮಾಣ ಕುಸಿಯಲು ಕಾರಣವಾಗಿದೆ ಎಂದು ನಂಬಿಕೊಂಡಿರುವ ಬಿಜೆಪಿ ಬೆಂಬಲಿಗರು, ಮೋದಿಯವರ ಪುನರಾಯ್ಕೆ ಪೂರ್ವ ನಿಗದಿತವಾಗಿರುವುದರಿಂದ ಹತಾಶರಾಗಿರುವ ಮೋದಿ ಸರ್ಕಾರದ ವಿರೋಧಿಗಳು ಮತದಾನ ಮಾಡಿರಲಿಕ್ಕಿಲ್ಲ ಎಂದು ಭಾವಿಸಿದ್ದಾರೆ ಎಂದು ವರದಿಯು ಹೇಳಿದೆ.

ಲೋಕಸಭಾ ಚುನಾವಣೆಯನ್ನು ಸಾಮಾನ್ಯ ವಹಿವಾಟು, ಮಾಮೂಲು ವ್ಯವಹಾರದಂತೆ ನಡೆಸಲಾಗುತ್ತಿದೆ. ಖುದ್ದು ಪ್ರಧಾನಿಯವರ ನೇತೃತ್ವದಲ್ಲಿ ಬಿಜೆಪಿ ನಾಯಕರು ನಿರ್ಭೀತಿಯಿಂದ ಅಲ್ಪಸಂಖ್ಯಾತರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ ಮತ್ತು ಈ ಬಗ್ಗೆ ಚುನಾವಣಾ ಆಯೋಗವು ನಿರ್ಲಿಪ್ತವಾಗಿದೆ. ಕೆಲವು ಪ್ರಾದೇಶಿಕ ನಾಯಕರನ್ನು ಹೊರತುಪಡಿಸಿ ಪ್ರತಿಪಕ್ಷಗಳು ತಮ್ಮ ಕಾರ್ಯಕರ್ತರನ್ನು ಕ್ರೋಡೀಕರಿಸಲು ಮತ್ತು ಸಂಪನ್ಮೂಲಗಳನ್ನು ಸಂಗ್ರಹಿಸಲು ಹೆಣಗಾಡುತ್ತಿವೆ. ಇದು ಮೋದಿ ಆಡಳಿತವು ಎಸಗಿರುವ ಅತಿರೇಕಗಳಿಗೆ ವಿಶ್ವಾಸಾರ್ಹವಾದ ಸವಾಲು ಇಲ್ಲ ಎಂಬ ಭಾವನೆಯನ್ನು ಹುಟ್ಟು ಹಾಕಿದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

ಸಮಾನ ಸ್ಪರ್ಧಾಕಣದ ಕೊರತೆ ಎದ್ದು ಕಾಣುತ್ತಿದೆ. ಅದು ರಹಸ್ಯವಾಗಿ ಉಳಿದಿಲ್ಲ. 18ನೇ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ವಿಷಯಗಳು ಪ್ರಾಬಲ್ಯ ಪಡೆದಿವೆ ಮತ್ತು ಪುನರಾವರ್ತಿತ ಪ್ರಚಾರದೊಂದಿಗೆ ಹತಾಶೆ ಕಂಡು ಬರುತ್ತಿದೆ. ಇದು ಮೋದಿ ಸರ್ಕಾರದ ಬೆಂಬಲಿಗರು ಮತ್ತು ವಿರೋಧಿಗಳಲ್ಲಿ ಮತದಾನದ ಪ್ರಮಾಣ ಕುಸಿಯಲು ನಿಜವಾದ ಕಾರಣವಾಗಿರಬಹುದು ಎಂದು ದಿ ವೈರ್ ಅಂದಾಜಿಸಿದೆ.

ಇದನ್ನೂ ಓದಿ : ಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...