Homeಮುಖಪುಟಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

- Advertisement -
- Advertisement -

ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ.

ಪೊಲೀಸರ ಜಿಪ್ಸಿಯಲ್ಲಿ ಆಶ್ರಯ ಪಡೆದಿದ್ದ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ಮಣಿಪುರ ಪೊಲೀಸ್ ಸಿಬ್ಬಂದಿ ಕಾಂಗ್‌ಪೋಪಿ ಜಿಲ್ಲೆಯಲ್ಲಿ ಸುಮಾರು 1,000 ಮೈತೈ ಗಲಭೆಕೋರರಿದ್ದ ಗುಂಪಿಗೆ ತಲುಪಿಸಿದ್ದಾರೆ ಎಂಬ ಅಚ್ಚರಿಯ ಅಂಶ ಸಿಬಿಐ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅದೇ ಕುಟುಂಬಕ್ಕೆ ಸೇರಿದ ಮೂರನೇ ಮಹಿಳೆಯ ಮೇಲೂ ಜನಸಮೂಹವು ಹಲ್ಲೆ ನಡೆಸಿದೆ ಮತ್ತು ಆಕೆಯನ್ನು  ವಿವಸ್ತ್ರಗೊಳಿಸಲು ಪ್ರಯತ್ನಿಸಿದೆ ಆದರೆ ಮಹಿಳೆ ಮೊಮ್ಮಗಳನ್ನು ಬಿಗಿಯಾಗಿ ಹಿಡಿದಿದ್ದರಿಂದ ಪ್ರಯತ್ನದಲ್ಲಿ ವಿಫಲರಾದರು ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಆಕೆಯ ಮೇಲೆ ದಾಳಿ ಮಾಡಿದ ಗುಂಪು ಭತ್ತದ ಗದ್ದೆಗಳಲ್ಲಿ ಪೀಡನೆಗೊಳಪಡುತ್ತಿದ್ದ ಇತರ ಇಬ್ಬರು ಸಂತ್ರಸ್ತರ ಕಡೆಗೆ ಓಡಿ ಹೋದ ನಂತರ ಆಕೆ ತಪ್ಪಿಸಿಕೊಂಡಿದ್ದಾರೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಮೂವರೂ ಸಂತ್ರಸ್ತರು ಕೂಡ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಸಹಾಯವನ್ನು ಕೋರಿದ್ದಾರೆ. ಆದರೆ ಅವರಿಗೆ ಯಾವುದೇ ಸಹಾಯವನ್ನು ನೀಡಲಾಗಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಕಾರ್ಗಿಲ್ ಯುದ್ಧದ ಯೋಧನ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆಯೊಬ್ಬರು ತಮ್ಮನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಪೊಲೀಸ್ ಸಿಬ್ಬಂದಿ ಬಳಿ ಬೇಡಿಕೊಂಡಿದ್ದಾರೆ, ಈ ವೇಳೆ ವಾಹನದ ಕೀ ಇಲ್ಲ ಎಂದ ಪೊಲೀಸರು ಯಾವುದೇ ಸಹಾಯ ಮಾಡಲು ಮುಂದಾಗಿಲ್ಲ ಎನ್ನುವ ಅಚ್ಚರಿ ಅಂಶ ತನಿಖೆಯ ವೇಳೆ ಬಯಲಾಗಿದೆ.

2023ರ ಮೇ 4ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಇದಾದ ಸುಮಾರು ಎರಡು ತಿಂಗಳ ನಂತರ ಜುಲೈನಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೋ ವೈರಲ್‌ ಆಗಿತ್ತು. ಕಳೆದ ವರ್ಷ ಅಕ್ಟೋಬರ್ 16ರಂದು ಗುವಾಹಟಿಯ ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶರ ಮುಂದೆ ಸಿಬಿಐ ಆರು ಆರೋಪಿಗಳ ವಿರುದ್ಧ ಮತ್ತು ಓರ್ವ ಅಪ್ರಾಪ್ತನ ವಿರುದ್ಧ (CCL) ವರದಿಯನ್ನು ಸಲ್ಲಿಸಿತು.

ಎಕೆ ರೈಫಲ್‌ಗಳು, ಎಸ್‌ಎಲ್‌ಆರ್, ಐಎನ್‌ಎಸ್‌ಎಎಸ್ ಮತ್ತು 303 ರೈಫಲ್‌ಗಳಂತಹ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಸುಮಾರು 900-1,000 ಜನರ ಗುಂಪಿನಿಂದ ಇಬ್ಬರು ಮಹಿಳೆಯರು ತಪ್ಪಿಸಿಕೊಂಡು ಪೊಲೀಸರ ಬಳಿ ಹೋಗಿದ್ದರು. ಕಾಂಗ್‌ಪೋಕ್ಪಿ ಜಿಲ್ಲೆಯ ಬಿ ಫೈನೋಮ್ ಗ್ರಾಮದ ಎಲ್ಲಾ ಮನೆಗಳನ್ನು ಉದ್ರಿಕ್ತರು ಧ್ವಂಸ ಮಾಡಿದ್ದಾರೆ. ಈ ವೇಳೆ ಜನಸಮೂಹದಿಂದ ತಪ್ಪಿಸಿಕೊಳ್ಳಲು 10ಜನರು ಅರಣ್ಯಕ್ಕೆ ಓಡಿ ಹೋಗಿದ್ದರು. ಅವರನ್ನು ಉದ್ರಿಕ್ತರ ಬೇರೆ ಬೇರೆ ಗುಂಪು ವಶಕ್ಕೆ ತೆಗೆದುಕೊಂಡಿತ್ತು.

ಇನ್ನೊಂದು ಹಳ್ಳಿಯ ಗಲಭೆಕೋರರು ಗುಂಪಿನೊಂದಿಗೆ ಸೇರಿಕೊಂಡರು ಮತ್ತು ಎಲ್ಲರೂ ಬಲಿಪಶುಗಳನ್ನು ಹೊಡೆಯಲು ಪ್ರಾರಂಭಿಸಿದ್ದಾರೆ. ಅವರಿಂದ ತಪ್ಪಿಸಿಕೊಂಡು ಬಂದು ಪೊಲೀಸ್‌ ವಾಹನದಲ್ಲಿ ಬಂದು ಕುಳಿತಾಗ ಅಲ್ಲೂ ಗುಂಪು ಹಲ್ಲೆ ನಡೆಸಿದೆ ಆದರೆ ಪೊಲೀಸರು ಸಂತ್ರಸ್ತರಿಗೆ ಸಹಾಯ ಮಾಡಲಿಲ್ಲ ಎಂದು ಸಿಬಿಐ ಆರೋಪಿಸಿದೆ.

ಪೊಲೀಸ್ ಜಿಪ್ಸಿಯ ಚಾಲಕ ವಾಹನವನ್ನು ಚಲಾಯಿಸಿ ಸುಮಾರು 1,000 ಜನರಿರುವ ಗುಂಪಿನ ಕಡೆ ವಾಹನವನ್ನು ತಂದು ನಿಲ್ಲಿಸಿದ್ದಾನೆ. ಸಂತ್ರಸ್ತರು ತಮ್ಮನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಪೊಲೀಸ್ ಸಿಬ್ಬಂದಿಯನ್ನು ಹಲವು ಬಾರಿ ಬೇಡಿಕೊಂಡಿದ್ದಾರೆ, ಆದರೆ ಅವರಿಗೆ ಯಾವುದೇ ಸಹಾಯವನ್ನು ಒದಗಿಸಲಿಲ್ಲ. ಇದರಿಂದ ಪೊಲೀಸರೇ ಮಹಿಳೆಯರನ್ನು ಗುಂಪಿಗೆ ಹಸ್ತಾಂತರಿಸಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.

ಇಬ್ಬರು ಮಹಿಳೆಯರೊಂದಿಗೆ ಪೊಲೀಸ್‌ ಜಿಪ್ಸಿಯಲ್ಲಿ ಕುಳಿತಿದ್ದ ಓರ್ವನಿಗೆ ಜನಸಮೂಹವು  ಹತ್ಯೆ ಮಾಡಿದೆ. ಆತನ ತಂದೆಯನ್ನು ಗುಂಪು ಮೊದಲೇ ಹತ್ಯೆ ಮಾಡಿತ್ತು. ಅವರ ಶವಗಳನ್ನು ಗ್ರಾಮದ ಬಳಿಯ ಒಣ ನದಿ ತಟದಲ್ಲಿ ಎಸೆಯಲಾಯಿತು. ಗಲಭೆಕೋರರ ಗುಂಪು ಪೊಲೀಸ್‌ ವಾಹನದ ಕಡೆಗೆ ಬಂದಾಗ ಸಂತ್ರಸ್ತರನ್ನು ಬಿಟ್ಟು ಘಟನಾ ಸ್ಥಳದಿಂದ ಪೊಲೀಸ್ ಸಿಬ್ಬಂದಿ ಓಡಿ ಹೋಗಿದ್ದಾರೆ. ಗಲಭೆಕೋರರು ಮಹಿಳೆಯರನ್ನು ಹೊರಗೆ ಎಳೆದೊಯ್ದು, ಅವರ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಮೊದಲು ಬೆತ್ತಲೆ ಮೆರವಣಿಗೆ ಮಾಡಿದರು ಎಂದು ಚಾರ್ಜ್ ಶೀಟ್ ಹೇಳಿದೆ.

ಇದನ್ನು ಓದಿ: ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...