Homeಮುಖಪುಟಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

- Advertisement -
- Advertisement -

ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ.

ಪೊಲೀಸರ ಜಿಪ್ಸಿಯಲ್ಲಿ ಆಶ್ರಯ ಪಡೆದಿದ್ದ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ಮಣಿಪುರ ಪೊಲೀಸ್ ಸಿಬ್ಬಂದಿ ಕಾಂಗ್‌ಪೋಪಿ ಜಿಲ್ಲೆಯಲ್ಲಿ ಸುಮಾರು 1,000 ಮೈತೈ ಗಲಭೆಕೋರರಿದ್ದ ಗುಂಪಿಗೆ ತಲುಪಿಸಿದ್ದಾರೆ ಎಂಬ ಅಚ್ಚರಿಯ ಅಂಶ ಸಿಬಿಐ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅದೇ ಕುಟುಂಬಕ್ಕೆ ಸೇರಿದ ಮೂರನೇ ಮಹಿಳೆಯ ಮೇಲೂ ಜನಸಮೂಹವು ಹಲ್ಲೆ ನಡೆಸಿದೆ ಮತ್ತು ಆಕೆಯನ್ನು  ವಿವಸ್ತ್ರಗೊಳಿಸಲು ಪ್ರಯತ್ನಿಸಿದೆ ಆದರೆ ಮಹಿಳೆ ಮೊಮ್ಮಗಳನ್ನು ಬಿಗಿಯಾಗಿ ಹಿಡಿದಿದ್ದರಿಂದ ಪ್ರಯತ್ನದಲ್ಲಿ ವಿಫಲರಾದರು ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಆಕೆಯ ಮೇಲೆ ದಾಳಿ ಮಾಡಿದ ಗುಂಪು ಭತ್ತದ ಗದ್ದೆಗಳಲ್ಲಿ ಪೀಡನೆಗೊಳಪಡುತ್ತಿದ್ದ ಇತರ ಇಬ್ಬರು ಸಂತ್ರಸ್ತರ ಕಡೆಗೆ ಓಡಿ ಹೋದ ನಂತರ ಆಕೆ ತಪ್ಪಿಸಿಕೊಂಡಿದ್ದಾರೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಮೂವರೂ ಸಂತ್ರಸ್ತರು ಕೂಡ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಸಹಾಯವನ್ನು ಕೋರಿದ್ದಾರೆ. ಆದರೆ ಅವರಿಗೆ ಯಾವುದೇ ಸಹಾಯವನ್ನು ನೀಡಲಾಗಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಕಾರ್ಗಿಲ್ ಯುದ್ಧದ ಯೋಧನ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆಯೊಬ್ಬರು ತಮ್ಮನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಪೊಲೀಸ್ ಸಿಬ್ಬಂದಿ ಬಳಿ ಬೇಡಿಕೊಂಡಿದ್ದಾರೆ, ಈ ವೇಳೆ ವಾಹನದ ಕೀ ಇಲ್ಲ ಎಂದ ಪೊಲೀಸರು ಯಾವುದೇ ಸಹಾಯ ಮಾಡಲು ಮುಂದಾಗಿಲ್ಲ ಎನ್ನುವ ಅಚ್ಚರಿ ಅಂಶ ತನಿಖೆಯ ವೇಳೆ ಬಯಲಾಗಿದೆ.

2023ರ ಮೇ 4ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಇದಾದ ಸುಮಾರು ಎರಡು ತಿಂಗಳ ನಂತರ ಜುಲೈನಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೋ ವೈರಲ್‌ ಆಗಿತ್ತು. ಕಳೆದ ವರ್ಷ ಅಕ್ಟೋಬರ್ 16ರಂದು ಗುವಾಹಟಿಯ ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶರ ಮುಂದೆ ಸಿಬಿಐ ಆರು ಆರೋಪಿಗಳ ವಿರುದ್ಧ ಮತ್ತು ಓರ್ವ ಅಪ್ರಾಪ್ತನ ವಿರುದ್ಧ (CCL) ವರದಿಯನ್ನು ಸಲ್ಲಿಸಿತು.

ಎಕೆ ರೈಫಲ್‌ಗಳು, ಎಸ್‌ಎಲ್‌ಆರ್, ಐಎನ್‌ಎಸ್‌ಎಎಸ್ ಮತ್ತು 303 ರೈಫಲ್‌ಗಳಂತಹ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಸುಮಾರು 900-1,000 ಜನರ ಗುಂಪಿನಿಂದ ಇಬ್ಬರು ಮಹಿಳೆಯರು ತಪ್ಪಿಸಿಕೊಂಡು ಪೊಲೀಸರ ಬಳಿ ಹೋಗಿದ್ದರು. ಕಾಂಗ್‌ಪೋಕ್ಪಿ ಜಿಲ್ಲೆಯ ಬಿ ಫೈನೋಮ್ ಗ್ರಾಮದ ಎಲ್ಲಾ ಮನೆಗಳನ್ನು ಉದ್ರಿಕ್ತರು ಧ್ವಂಸ ಮಾಡಿದ್ದಾರೆ. ಈ ವೇಳೆ ಜನಸಮೂಹದಿಂದ ತಪ್ಪಿಸಿಕೊಳ್ಳಲು 10ಜನರು ಅರಣ್ಯಕ್ಕೆ ಓಡಿ ಹೋಗಿದ್ದರು. ಅವರನ್ನು ಉದ್ರಿಕ್ತರ ಬೇರೆ ಬೇರೆ ಗುಂಪು ವಶಕ್ಕೆ ತೆಗೆದುಕೊಂಡಿತ್ತು.

ಇನ್ನೊಂದು ಹಳ್ಳಿಯ ಗಲಭೆಕೋರರು ಗುಂಪಿನೊಂದಿಗೆ ಸೇರಿಕೊಂಡರು ಮತ್ತು ಎಲ್ಲರೂ ಬಲಿಪಶುಗಳನ್ನು ಹೊಡೆಯಲು ಪ್ರಾರಂಭಿಸಿದ್ದಾರೆ. ಅವರಿಂದ ತಪ್ಪಿಸಿಕೊಂಡು ಬಂದು ಪೊಲೀಸ್‌ ವಾಹನದಲ್ಲಿ ಬಂದು ಕುಳಿತಾಗ ಅಲ್ಲೂ ಗುಂಪು ಹಲ್ಲೆ ನಡೆಸಿದೆ ಆದರೆ ಪೊಲೀಸರು ಸಂತ್ರಸ್ತರಿಗೆ ಸಹಾಯ ಮಾಡಲಿಲ್ಲ ಎಂದು ಸಿಬಿಐ ಆರೋಪಿಸಿದೆ.

ಪೊಲೀಸ್ ಜಿಪ್ಸಿಯ ಚಾಲಕ ವಾಹನವನ್ನು ಚಲಾಯಿಸಿ ಸುಮಾರು 1,000 ಜನರಿರುವ ಗುಂಪಿನ ಕಡೆ ವಾಹನವನ್ನು ತಂದು ನಿಲ್ಲಿಸಿದ್ದಾನೆ. ಸಂತ್ರಸ್ತರು ತಮ್ಮನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಪೊಲೀಸ್ ಸಿಬ್ಬಂದಿಯನ್ನು ಹಲವು ಬಾರಿ ಬೇಡಿಕೊಂಡಿದ್ದಾರೆ, ಆದರೆ ಅವರಿಗೆ ಯಾವುದೇ ಸಹಾಯವನ್ನು ಒದಗಿಸಲಿಲ್ಲ. ಇದರಿಂದ ಪೊಲೀಸರೇ ಮಹಿಳೆಯರನ್ನು ಗುಂಪಿಗೆ ಹಸ್ತಾಂತರಿಸಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.

ಇಬ್ಬರು ಮಹಿಳೆಯರೊಂದಿಗೆ ಪೊಲೀಸ್‌ ಜಿಪ್ಸಿಯಲ್ಲಿ ಕುಳಿತಿದ್ದ ಓರ್ವನಿಗೆ ಜನಸಮೂಹವು  ಹತ್ಯೆ ಮಾಡಿದೆ. ಆತನ ತಂದೆಯನ್ನು ಗುಂಪು ಮೊದಲೇ ಹತ್ಯೆ ಮಾಡಿತ್ತು. ಅವರ ಶವಗಳನ್ನು ಗ್ರಾಮದ ಬಳಿಯ ಒಣ ನದಿ ತಟದಲ್ಲಿ ಎಸೆಯಲಾಯಿತು. ಗಲಭೆಕೋರರ ಗುಂಪು ಪೊಲೀಸ್‌ ವಾಹನದ ಕಡೆಗೆ ಬಂದಾಗ ಸಂತ್ರಸ್ತರನ್ನು ಬಿಟ್ಟು ಘಟನಾ ಸ್ಥಳದಿಂದ ಪೊಲೀಸ್ ಸಿಬ್ಬಂದಿ ಓಡಿ ಹೋಗಿದ್ದಾರೆ. ಗಲಭೆಕೋರರು ಮಹಿಳೆಯರನ್ನು ಹೊರಗೆ ಎಳೆದೊಯ್ದು, ಅವರ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಮೊದಲು ಬೆತ್ತಲೆ ಮೆರವಣಿಗೆ ಮಾಡಿದರು ಎಂದು ಚಾರ್ಜ್ ಶೀಟ್ ಹೇಳಿದೆ.

ಇದನ್ನು ಓದಿ: ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...