Homeಅಂತರಾಷ್ಟ್ರೀಯಪನ್ನೂನ್‌ ಹತ್ಯೆ ಸಂಚು: ವಾಷಿಂಗ್ಟನ್ ಪೋಸ್ಟ್ ವರದಿಗೆ ಅಮೆರಿಕ ಪ್ರತಿಕ್ರಿಯೆ

ಪನ್ನೂನ್‌ ಹತ್ಯೆ ಸಂಚು: ವಾಷಿಂಗ್ಟನ್ ಪೋಸ್ಟ್ ವರದಿಗೆ ಅಮೆರಿಕ ಪ್ರತಿಕ್ರಿಯೆ

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂನ್‌ ಹತ್ಯೆಯ ಸಂಚಿಗೆ ಸಂಬಂಧಿಸಿದ ‘ದಿ ವಾಷಿಂಗ್ಟನ್ ಪೋಸ್ಟ್ ವರದಿ’ ಬೆನ್ನಲ್ಲಿ ಆರೋಪಗಳ ಬಗ್ಗೆ ತನಿಖೆಗೆ ಭಾರತ ಸರ್ಕಾರದೊಂದಿಗೆ ನಿಯಮಿತವಾಗಿ ಕೆಲಸ ಮಾಡುತ್ತಿದೆ ಎಂದು ಅಮೆರಿಕ ಹೇಳಿದೆ.

ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ ದಿ ವಾಷಿಂಗ್ಟನ್ ಪೋಸ್ಟ್ ಕಳೆದ ವರ್ಷ ಅಮೆರಿಕದ ನೆಲದಲ್ಲಿ ಪನ್ನೂನ್‌ ಹತ್ಯೆಗೆ ಸಂಚು ರೂಪಿಸಿದ್ದಕ್ಕೆ ಸಂಬಂಧಿಸಿದಂತೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) ಅಧಿಕಾರಿಯನ್ನು ಆರೋಪಿ ಎಂದು ಹೇಳಿದೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ವರದಿ ಕುರಿತು ಪ್ರತಿಕ್ರಿಯಿಸಿದ್ದು,  ಭಾರತೀಯ ವಿಚಾರಣಾ ಸಮಿತಿಯ ಫಲಿತಾಂಶಗಳ ಆಧಾರದ ಮೇಲೆ ನಾವು ಭಾರತ ಸರ್ಕಾರದಿಂದ ಉತ್ತರದಾಯಿತ್ವವನ್ನು ನಿರೀಕ್ಷಿಸುತ್ತೇವೆ ಮತ್ತು ನಾವು ಅವರೊಂದಿಗೆ ನಿಯಮಿತವಾಗಿ ಕೆಲಸ ಮಾಡುತ್ತಿದ್ದೇವೆ. ನಾವು ಹಿರಿಯ ಮಟ್ಟದಲ್ಲಿ ಭಾರತ ಸರ್ಕಾರದೊಂದಿಗೆ ನೇರವಾಗಿ ಈ ಬಗ್ಗೆ ನಮ್ಮ ಕಾಳಜಿಯನ್ನು ವ್ಯಕ್ತಪಡಿಸುವುದನ್ನು ಮುಂದುವರಿಸುತ್ತೇವೆ, ಆದರೆ ಅದನ್ನು ಮೀರಿ, ನಾನು ಇದನ್ನು ಮತ್ತಷ್ಟು ವಿಶ್ಲೇಷಿಸಲು ಹೋಗುವುದಿಲ್ಲ ಎಂದು ವೇದಾಂತ್ ಪಟೇಲ್ ಹೇಳಿದ್ದಾರೆ.

ವಾಷಿಂಗ್ಟನ್ ಪೋಸ್ಟ್ ವರದಿ ಏನು ಹೇಳಿದೆ?
ವಾಷಿಂಗ್ಟನ್ ಪೋಸ್ಟ್, ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ, ಕಳೆದ ವರ್ಷ ಅಮೆರಿಕದ ನೆಲದಲ್ಲಿ ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ್ದಕ್ಕೆ ಸಂಬಂಧಿಸಿದಂತೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಅಧಿಕಾರಿ  ವಿಕ್ರಮ್ ಯಾದವ್ ಆರೋಪಿ ಎಂದು ಹೆಸರಿಸಿದೆ. ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಭಾರತದ ಗುಪ್ತಚರ ಸೇವೆಯ ಅಧಿಕಾರಿಯೊಬ್ಬರು ಅಂತಿಮ ಸೂಚನೆಗಳನ್ನು ನೀಡಿದ್ದರು. ಪನ್ನೂನ್‌ ಹತ್ಯೆಯು “ಈಗ ಆದ್ಯತೆಯಾಗಿದೆ” ಎಂದು ಭಾರತದ ಬೇಹುಗಾರಿಕಾ ಸಂಸ್ಥೆ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ಅಥವಾ RAWನಲ್ಲಿ ಅಧಿಕಾರಿಯಾಗಿರುವ ವಿಕ್ರಂ ಯಾದವ್ ಬರೆದಿದ್ದಾರೆ ಎಂದು ಆಪಾದಿಸಲಾಗಿದೆ. ಯುಎಸ್ ಸಲ್ಲಿಸಿದ ದೋಷಾರೋಪಣೆ ಪಟ್ಟಿ ಪ್ರಕಾರ, ಯಾದವ್‌ ಹಂತಕರಿಗೆ ಸಿಖ್ ಕಾರ್ಯಕರ್ತ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ನ್ಯೂಯಾರ್ಕ್ ವಿಳಾಸ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ನೀಡಿದ್ದರು.

ಅಮೆರಿಕದಲ್ಲಿ ನೆಲೆ ನಿಂತಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ಅಧಿಕಾರಿ ವಿಕ್ರಮ್ ಯಾದವ್, ಬಾಡಿಗೆ ಹಂತಕರಿಗೆ ಸೂಚನೆ ನೀಡಿದ್ದರು ಮತ್ತು ಪನ್ನೂನ್ ಹತ್ಯೆ ಕಾರ್ಯಾಚರಣೆಯನ್ನು ಆ ಸಮಯದಲ್ಲಿ ರಾ ಮುಖ್ಯಸ್ಥರಾಗಿದ್ದ ಸಮಂತ್ ಗೋಯಲ್ ಅನುಮೋದಿಸಿದ್ದರು ಎಂದು ಅಮೆರಿಕದ ಗುಪ್ತಚರ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಕಳೆದ ವರ್ಷ, ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ಭಾರತೀಯ ಪ್ರಜೆ ನಿಖಿಲ್ ಗುಪ್ತಾ, ಪನ್ನುನ್‌ನನ್ನು ಕೊಲ್ಲುವ ಸಂಚಿನಲ್ಲಿ ಭಾರತೀಯ ಸರ್ಕಾರಿ ಉದ್ಯೋಗಿಯೊಂದಿಗೆ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದರು.  2023ರಲ್ಲಿ ಝೆಕ್ ರಿಪಬ್ಲಿಕ್‌ನಲ್ಲಿ ಗುಪ್ತಾ ಬಂಧನ ನಡೆದಿತ್ತು.

ವಾಷಿಂಗ್ಟನ್ ಪೋಸ್ಟ್ ವರದಿಗೆ ಭಾರತದ ಪ್ರತಿಕ್ರಿಯೆ
ಪನ್ನೂನ್ ಹತ್ಯೆಯ ಸಂಚಿನ ಕುರಿತು ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ‘ಆಧಾರ ರಹಿತ’ ಎಂದು ಹೇಳಿದೆ. ಕ್ರಿಮಿನಲ್ ಮತ್ತು ಭಯೋತ್ಪಾದಕ ಜಾಲಗಳ ಬಗ್ಗೆ ಯುಎಸ್ ಎತ್ತಿರುವ ಭದ್ರತಾ ಕಳವಳಗಳನ್ನು ಪರಿಹರಿಸಲು ಭಾರತ ಸರ್ಕಾರವು ಸ್ಥಾಪಿಸಿದ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಊಹಾತ್ಮಕ ಮತ್ತು ಬೇಜವಾಬ್ದಾರಿ ಕಾಮೆಂಟ್‌ಗಳು ಸಹಾಯಕವಾಗುವುದಿಲ್ಲ ಎಂದು ಜೈಸ್ವಾಲ್ ಹೇಳಿದ್ದರು.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...