Homeಅಂತರಾಷ್ಟ್ರೀಯಪನ್ನೂನ್‌ ಹತ್ಯೆ ಸಂಚು: ವಾಷಿಂಗ್ಟನ್ ಪೋಸ್ಟ್ ವರದಿಗೆ ಅಮೆರಿಕ ಪ್ರತಿಕ್ರಿಯೆ

ಪನ್ನೂನ್‌ ಹತ್ಯೆ ಸಂಚು: ವಾಷಿಂಗ್ಟನ್ ಪೋಸ್ಟ್ ವರದಿಗೆ ಅಮೆರಿಕ ಪ್ರತಿಕ್ರಿಯೆ

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂನ್‌ ಹತ್ಯೆಯ ಸಂಚಿಗೆ ಸಂಬಂಧಿಸಿದ ‘ದಿ ವಾಷಿಂಗ್ಟನ್ ಪೋಸ್ಟ್ ವರದಿ’ ಬೆನ್ನಲ್ಲಿ ಆರೋಪಗಳ ಬಗ್ಗೆ ತನಿಖೆಗೆ ಭಾರತ ಸರ್ಕಾರದೊಂದಿಗೆ ನಿಯಮಿತವಾಗಿ ಕೆಲಸ ಮಾಡುತ್ತಿದೆ ಎಂದು ಅಮೆರಿಕ ಹೇಳಿದೆ.

ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ ದಿ ವಾಷಿಂಗ್ಟನ್ ಪೋಸ್ಟ್ ಕಳೆದ ವರ್ಷ ಅಮೆರಿಕದ ನೆಲದಲ್ಲಿ ಪನ್ನೂನ್‌ ಹತ್ಯೆಗೆ ಸಂಚು ರೂಪಿಸಿದ್ದಕ್ಕೆ ಸಂಬಂಧಿಸಿದಂತೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) ಅಧಿಕಾರಿಯನ್ನು ಆರೋಪಿ ಎಂದು ಹೇಳಿದೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ವರದಿ ಕುರಿತು ಪ್ರತಿಕ್ರಿಯಿಸಿದ್ದು,  ಭಾರತೀಯ ವಿಚಾರಣಾ ಸಮಿತಿಯ ಫಲಿತಾಂಶಗಳ ಆಧಾರದ ಮೇಲೆ ನಾವು ಭಾರತ ಸರ್ಕಾರದಿಂದ ಉತ್ತರದಾಯಿತ್ವವನ್ನು ನಿರೀಕ್ಷಿಸುತ್ತೇವೆ ಮತ್ತು ನಾವು ಅವರೊಂದಿಗೆ ನಿಯಮಿತವಾಗಿ ಕೆಲಸ ಮಾಡುತ್ತಿದ್ದೇವೆ. ನಾವು ಹಿರಿಯ ಮಟ್ಟದಲ್ಲಿ ಭಾರತ ಸರ್ಕಾರದೊಂದಿಗೆ ನೇರವಾಗಿ ಈ ಬಗ್ಗೆ ನಮ್ಮ ಕಾಳಜಿಯನ್ನು ವ್ಯಕ್ತಪಡಿಸುವುದನ್ನು ಮುಂದುವರಿಸುತ್ತೇವೆ, ಆದರೆ ಅದನ್ನು ಮೀರಿ, ನಾನು ಇದನ್ನು ಮತ್ತಷ್ಟು ವಿಶ್ಲೇಷಿಸಲು ಹೋಗುವುದಿಲ್ಲ ಎಂದು ವೇದಾಂತ್ ಪಟೇಲ್ ಹೇಳಿದ್ದಾರೆ.

ವಾಷಿಂಗ್ಟನ್ ಪೋಸ್ಟ್ ವರದಿ ಏನು ಹೇಳಿದೆ?
ವಾಷಿಂಗ್ಟನ್ ಪೋಸ್ಟ್, ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ, ಕಳೆದ ವರ್ಷ ಅಮೆರಿಕದ ನೆಲದಲ್ಲಿ ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ್ದಕ್ಕೆ ಸಂಬಂಧಿಸಿದಂತೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಅಧಿಕಾರಿ  ವಿಕ್ರಮ್ ಯಾದವ್ ಆರೋಪಿ ಎಂದು ಹೆಸರಿಸಿದೆ. ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಭಾರತದ ಗುಪ್ತಚರ ಸೇವೆಯ ಅಧಿಕಾರಿಯೊಬ್ಬರು ಅಂತಿಮ ಸೂಚನೆಗಳನ್ನು ನೀಡಿದ್ದರು. ಪನ್ನೂನ್‌ ಹತ್ಯೆಯು “ಈಗ ಆದ್ಯತೆಯಾಗಿದೆ” ಎಂದು ಭಾರತದ ಬೇಹುಗಾರಿಕಾ ಸಂಸ್ಥೆ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ಅಥವಾ RAWನಲ್ಲಿ ಅಧಿಕಾರಿಯಾಗಿರುವ ವಿಕ್ರಂ ಯಾದವ್ ಬರೆದಿದ್ದಾರೆ ಎಂದು ಆಪಾದಿಸಲಾಗಿದೆ. ಯುಎಸ್ ಸಲ್ಲಿಸಿದ ದೋಷಾರೋಪಣೆ ಪಟ್ಟಿ ಪ್ರಕಾರ, ಯಾದವ್‌ ಹಂತಕರಿಗೆ ಸಿಖ್ ಕಾರ್ಯಕರ್ತ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ನ್ಯೂಯಾರ್ಕ್ ವಿಳಾಸ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ನೀಡಿದ್ದರು.

ಅಮೆರಿಕದಲ್ಲಿ ನೆಲೆ ನಿಂತಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ಅಧಿಕಾರಿ ವಿಕ್ರಮ್ ಯಾದವ್, ಬಾಡಿಗೆ ಹಂತಕರಿಗೆ ಸೂಚನೆ ನೀಡಿದ್ದರು ಮತ್ತು ಪನ್ನೂನ್ ಹತ್ಯೆ ಕಾರ್ಯಾಚರಣೆಯನ್ನು ಆ ಸಮಯದಲ್ಲಿ ರಾ ಮುಖ್ಯಸ್ಥರಾಗಿದ್ದ ಸಮಂತ್ ಗೋಯಲ್ ಅನುಮೋದಿಸಿದ್ದರು ಎಂದು ಅಮೆರಿಕದ ಗುಪ್ತಚರ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಕಳೆದ ವರ್ಷ, ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ಭಾರತೀಯ ಪ್ರಜೆ ನಿಖಿಲ್ ಗುಪ್ತಾ, ಪನ್ನುನ್‌ನನ್ನು ಕೊಲ್ಲುವ ಸಂಚಿನಲ್ಲಿ ಭಾರತೀಯ ಸರ್ಕಾರಿ ಉದ್ಯೋಗಿಯೊಂದಿಗೆ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದರು.  2023ರಲ್ಲಿ ಝೆಕ್ ರಿಪಬ್ಲಿಕ್‌ನಲ್ಲಿ ಗುಪ್ತಾ ಬಂಧನ ನಡೆದಿತ್ತು.

ವಾಷಿಂಗ್ಟನ್ ಪೋಸ್ಟ್ ವರದಿಗೆ ಭಾರತದ ಪ್ರತಿಕ್ರಿಯೆ
ಪನ್ನೂನ್ ಹತ್ಯೆಯ ಸಂಚಿನ ಕುರಿತು ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ‘ಆಧಾರ ರಹಿತ’ ಎಂದು ಹೇಳಿದೆ. ಕ್ರಿಮಿನಲ್ ಮತ್ತು ಭಯೋತ್ಪಾದಕ ಜಾಲಗಳ ಬಗ್ಗೆ ಯುಎಸ್ ಎತ್ತಿರುವ ಭದ್ರತಾ ಕಳವಳಗಳನ್ನು ಪರಿಹರಿಸಲು ಭಾರತ ಸರ್ಕಾರವು ಸ್ಥಾಪಿಸಿದ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಊಹಾತ್ಮಕ ಮತ್ತು ಬೇಜವಾಬ್ದಾರಿ ಕಾಮೆಂಟ್‌ಗಳು ಸಹಾಯಕವಾಗುವುದಿಲ್ಲ ಎಂದು ಜೈಸ್ವಾಲ್ ಹೇಳಿದ್ದರು.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...