Homeಮುಖಪುಟಮಣಿಪುರ: 11 ಶಸ್ತ್ರಸಜ್ಜಿತರನ್ನು ಬಂಧಿಸಿದ ಸೇನಾ ಸಿಬ್ಬಂದಿ; ಮಹಿಳೆಯರಿಂದ ಪ್ರತಿಭಟನೆ

ಮಣಿಪುರ: 11 ಶಸ್ತ್ರಸಜ್ಜಿತರನ್ನು ಬಂಧಿಸಿದ ಸೇನಾ ಸಿಬ್ಬಂದಿ; ಮಹಿಳೆಯರಿಂದ ಪ್ರತಿಭಟನೆ

- Advertisement -
- Advertisement -

ಸೇನಾ ಗಸ್ತು ಸಿಬ್ಬಂದಿಯು ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿ 11 ಶಸ್ತ್ರಸಜ್ಜಿತ ಪುರುಷರನ್ನು ಪತ್ತೆ ಮಾಡಿ ಬಂಧಿಸಿದ್ದು, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಸ್ಥಳೀಯ ಮಹಿಳಾ ಪ್ರತಿಭಟನಾಕಾರರು ಸೈನಿಕರನ್ನು ಸುತ್ತುವರೆದು, ಪುರುಷರನ್ನು ಬಿಟ್ಟುಬಿಡುವಂತೆ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.

ಮಹಿಳಾ ಪ್ರತಿಭಟನಾಕಾರರು, ಮೀರಾ ಪೈಬಿಸ್ (ಉರಿಯುವ ಟಾರ್ಚ್ ಹಿಡಿದವರು) ಎಂದು ಕರೆಯಲ್ಪಡುವ ಸಾಂಸ್ಕೃತಿಕ ಚಳವಳಿಯ ಭಾಗವಾಗಿದ್ದು, ತಮ್ಮ ಸಮುದಾಯದ (ಮೈತೇಯಿ) ಪುರುಷರನ್ನು ಬಿಡುಗಡೆ ಮಾಡುವಂತೆ ಮತ್ತು ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸಲು ಸೈನ್ಯವನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನಾಕಾರರು, ಬಂಧಿತ 11 ಪುರುಷರು “ಗ್ರಾಮ ರಕ್ಷಣಾ ಸ್ವಯಂಸೇವಕರು” ಎಂದು ಹೇಳಿದ್ದು, ಅವರನ್ನು ನಿಶ್ಯಸ್ತ್ರಗೊಳಿಸುವುದರಿಂದ ಜನಾಂಗೀಯ ಉದ್ವಿಗ್ನತೆಯ ನಡುವೆ ಹತ್ತಿರದ ಬೆಟ್ಟಗಳಿಂದ ಶಸ್ತ್ರಸಜ್ಜಿತ ವ್ಯಕ್ತಿಗಳು ತಮ್ಮ ಗ್ರಾಮವನ್ನು ಆಕ್ರಮಣ ಮಾಡುವ ಅಪಾಯವನ್ನು ಎದುರಿಸುತ್ತಾರೆ ಎಂದು ಹೇಳಿದ್ದಾರೆ.

ಮಂಗಳವಾರ ನಡೆದ ಘಟನೆಯ ದೃಶ್ಯಗಳು ಸೈನಿಕರನ್ನು ಮಹಿಳೆಯರು ಸುತ್ತಲೂ ತಳ್ಳುತ್ತಿರುವುದನ್ನು ತೋರಿಸುತ್ತವೆ. ಮಹಿಳೆಯರು ಶಸ್ತ್ರಸಜ್ಜಿತ ಸೈನಿಕರ ವಾಹನದ ಮುಂದೆ ನಿಂತು, ಅವರು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳೊಂದಿಗೆ ಪ್ರದೇಶದಿಂದ ಹೊರಹೋಗದಂತೆ ತಡೆದಿದ್ದಾರೆ.

ಪ್ರತಿಭಟನಾಕಾರರು ಕೂಗಾಟ ನಡೆಸಿ,  ವಾಹನವನ್ನು ಸುತ್ತುವರಿದಿದ್ದು, ಗುಂಪನ್ನು ಚದುರಿಸಲು ರಕ್ಷಣಾ ಸಿಬ್ಬಂದಿ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ. ಆದರೆ. ಅದು ಗುಂಲಿನ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ.

‘ಎಲ್ಲೂ ಹೋಗಬೇಡ, ಇಲ್ಲೇ ನಿಲ್ಲು, ಇಲ್ಲೇ ನಿಲ್ಲು’ ಎಂದು ಹಿರಿಯ ಮಹಿಳೆಯೊಬ್ಬರು ಇತರರಿಗೆ ಹೇಳುತ್ತಿರುವುದು ಕೇಳಿಸುತ್ತದೆ.

“ನೀವು ಯಾಕೆ ಎಲ್ಲರಿಂದಲೂ ಬಂದೂಕು ತೆಗೆದುಕೊಳ್ಳುವುದಿಲ್ಲ, ನಮ್ಮಿಂದ ಮಾತ್ರ ಏಕೆ?” ಇನ್ನೊಬ್ಬ ಮಹಿಳೆ ಸಸೈನಿಕರನ್ನು ಪ್ರಶ್ನಿಸಿದ್ದಾರೆ.

ಮಣಿಪುರ ಪೊಲೀಸ್ ತಂಡವು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿತು. ನಂತರ ಸೇನೆ ಮತ್ತು ಪೊಲೀಸ್ ತಂಡವು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದ ಅಲ್ಲಿಂದ ತೆರಳಿದೆ. ಆಗಲೂ, ಪ್ರತಿಭಟನಾಕಾರರು ಕಾರು ಹಾಗೂ ರಸ್ತೆಯನ್ನು ತಡೆದರು.

ಗುಡ್ಡಗಾಡು ಪ್ರಾಬಲ್ಯದ ಕುಕಿ ಬುಡಕಟ್ಟುಗಳು ಮತ್ತು ಕಣಿವೆಯ ಪ್ರಾಬಲ್ಯ ಹೊಂದಿರುವ ಮೈತೇಯಿ ಮೇ 2023 ರಿಂದ ಭೂಮಿ, ಸಂಪನ್ಮೂಲಗಳು, ದೃಢವಾದ ಕ್ರಮ ನೀತಿಗಳು ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ಹಂಚಿಕೊಳ್ಳುವಲ್ಲಿ ಭಿನ್ನಾಭಿಪ್ರಾಯಗಳ ಕುರಿತು ಹೋರಾಡುತ್ತಿದ್ದಾರೆ. ಮುಖ್ಯವಾಗಿ ‘ಸಾಮಾನ್ಯ’ ವರ್ಗದ ಮೈತೇಯಿಗಳು ಪರಿಶಿಷ್ಟ ಅಡಿಯಲ್ಲಿ ಸೇರಿಸಲು ಬಯಸುತ್ತಿರುವುದು ಘರ್ಷಣೆಗೆ ಕಾರಣವಾಗಿದೆ.

ಇದನ್ನೂ ಓದಿ; ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...