Homeಮುಖಪುಟನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

- Advertisement -
- Advertisement -

ಜಾರಿ ನಿರ್ದೇಶನಾಲಯವು (ಇಡಿ) ಕಾನೂನಿನ ಚೌಕಟ್ಟಿಗೆ ಒಳಪಟ್ಟಿದೆ ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಹೇಳಿದ್ದು, ನೀವು ಕಾನೂನಿಗಿಂತ ಮೇಲಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಮಧ್ಯಂತರ ಜಾಮೀನು ವಿಸ್ತರಣೆಯನ್ನು ವಿರೋಧಿಸಲು ಜಾರಿ ನಿರ್ದೇಶನಾಲಯ 2002ರ ಮನಿ ಲಾಂಡರಿಂಗ್ ತಡೆ ಕಾಯ್ದೆಯ ಸೆಕ್ಷನ್ 50ರ ಅಡಿಯಲ್ಲಿ ಆರೋಪಿತ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿರುವುದನ್ನು ಕೋರ್ಟ್‌ ಗಮನಿಸಿದೆ. ಹಣ ದುರುಪಯೋಗದ ಆರೋಪಿ ಮತ್ತು ವೈದ್ಯರ ನಡುವೆ ನಂಟಿನ ಆರೋಪದ ಬಗ್ಗೆ ಪುರಾವೆ ಇಲ್ಲದೇ ಪ್ರಕರಣ ಮರು ದಾಖಲಿಸಿಕೊಳ್ಳಲು ಮುಂದಾಗಿರುವುದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ರೌಸ್ ಅವೆನ್ಯೂ ನ್ಯಾಯಾಲಯಗಳ ವಿಶೇಷ ನ್ಯಾಯಾಧೀಶ (ಪಿಸಿ ಆಕ್ಟ್) ವಿಶಾಲ್ ಗೋಗ್ನೆ ಅವರು ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೈದ್ಯರು ನಂಟು ಹೊಂದಿರುವ ಆರೋಪದ ಬಗ್ಗೆ ಯಾವುದೇ ಪುರಾವೆಯಿಲ್ಲದೆ ಸಾಮಾನ್ಯ ನಾಗರಿಕರನ್ನು (ವೈದ್ಯರನ್ನು) ಸೆಕ್ಷನ್ 50 PMLAಯ ಕಠಿಣ ಪ್ರಕ್ರಿಯೆಗೆ ಒಳಪಡಿಸಲು ಇಡಿಗೆ ಯಾವುದೇ ಸಮರ್ಥನೆ ಇಲ್ಲ ಎಂದು ಹೇಳಿದ್ದಾರೆ.

ಭಾರತದಂತಹ ಪ್ರಜಾಪ್ರಭುತ್ವ ದೇಶದಲ್ಲಿ, ಪ್ರಜೆಗಳು ಹಕ್ಕುಗಳನ್ನು ಹೊಂದಿದ್ದಾರೆ. ಸರ್ಕಾರಕ್ಕೆ ಕೆಲ ಕರ್ತವ್ಯಗಳಿವೆ ಮತ್ತು ಸರ್ಕಾರಕ್ಕೆ ಕೆಲ ಹಕ್ಕುಗಳಿವೆ ಎಂಬ ವಾದ ಮಂಡಿಸಿ ಈ ಮೂಲಭೂತ ಸಂಬಂಧದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ, ಸರ್ವಾಧಿಕಾರಿ ವಾದವನ್ನು ಪ್ರಚೋದಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಂತಹ ವಾದವನ್ನು ಒಪ್ಪಿಕೊಳ್ಳುವುದು ಸಾಂವಿಧಾನಿಕ ಯೋಜನೆ ಮತ್ತು ಸಾಂವಿಧಾನದ ನೈತಿಕತೆಯ ಉಲ್ಲಂಘನೆಯಾಗಿದೆ. ಕಾನೂನು ಮತ್ತು ನ್ಯಾಯಾಲಯಗಳಿಗೆ ಜವಾಬ್ದಾರರಾಗಿರುವ ಏಜೆನ್ಸಿಯಾಗಿ ED ತನ್ನ ಅಧಿಕಾರವನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ಬಲವಾದ ನಾಯಕರು, ಕಾನೂನುಗಳು ಮತ್ತು ಏಜೆನ್ಸಿಗಳು ಸಾಮಾನ್ಯವಾಗಿ ಅವರು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡುವ ನಾಗರಿಕರನ್ನು ಗುರಿಯಾಗಿಸಲು ಪ್ರಯತ್ನಿಸುತ್ತಾರೆ. ಗುರಿಪಡಿಸಲ್ಪಟ್ಟವರ ಮೇಲೆ ಕಾನೂನಿನ ಅಸ್ತ್ರವನ್ನು ಬಳಸಲಾಗುತ್ತದೆ. ಸಾಮಾನ್ಯ ಪ್ರಜೆಗಳ ವಿರುದ್ಧ ಇಂಥ ಕಾನೂನುಗಳನ್ನು ಜಾರಿ ಮಾಡಲಾಗುತ್ತದೆ ಎಂದು ನ್ಯಾಯಾಲಯ ಗಮನಿಸಿದೆ.

ತನಗೆ ನೀಡಿರುವ ಮಧ್ಯಂತರ ಜಾಮೀನನ್ನು ವಿಸ್ತರಿಸುವಂತೆ ಕೋರಿ ಉದ್ಯಮಿ ಅಮಿತ್ ಕತ್ಯಾಲ್ ಸಲ್ಲಿಸಿದ್ದ ಮನವಿ ಬಗ್ಗೆ ವಿಚಾರಣೆ ವೇಳೆ ನ್ಯಾಯಾಲಯವು ಈ ಕಠಿಣ ಅವಲೋಕನಗಳನ್ನು ಮಾಡಿದೆ. ರೈಲ್ವೇ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರ ಕುಟುಂಬದ ಸದಸ್ಯರೊಂದಿಗೆ ಕತ್ಯಾಲ್ ವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಏಪ್ರಿಲ್ 9ರಂದು ಗುರ್ಗಾಂವ್‌ನ ಮೇದಾಂತ ಆಸ್ಪತ್ರೆಯಲ್ಲಿ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಫೆಬ್ರವರಿ 5, 2024ರಂದು ಮಧ್ಯಂತರ ಜಾಮೀನು ಪಡೆದ ನಂತರ ಅವರಿಗೆ ಚಿಕಿತ್ಸೆ ನೀಡುತ್ತಿರುವ ಅಪೊಲೊ ಮತ್ತು ಮೇದಾಂತ ಆಸ್ಪತ್ರೆಯ ವೈದ್ಯರ ಹೇಳಿಕೆಗಳನ್ನು ಇಡಿ ದಾಖಲಿಸಲು ಮುಂದಾಗಿದ್ದು, ಕತ್ಯಾಲ್ ಅವರ ವಕೀಲರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದು ಸೆಕ್ಷನ್ 50 PMLA ಅಡಿಯಲ್ಲಿನ ಕಾಯ್ದೆಯ ಉಲ್ಲಂಘನೆ ಮಾತ್ರವಲ್ಲದೆ ಆರೋಪಿಯ ಮೂಲಭೂತ ಹಕ್ಕಾಗಿರುವ ವೈದ್ಯಕೀಯ ಚಿಕಿತ್ಸೆಯ ಗೌಪ್ಯತೆಯ ಉಲ್ಲಂಘನೆಯಾಗಿದೆ ಎಂದು ವಾದಿಸಿತ್ತು.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...