Homeಮುಖಪುಟಕೋವಿಶೀಲ್ಡ್ ಅಡ್ಡ ಪರಿಣಾಮ: 'ಬಿಜೆಪಿ' ದೇಣಿಗೆಗಾಗಿ 'ಜನರ ಜೀವ'ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

- Advertisement -
- Advertisement -

ಕೋವಿಶೀಲ್ಡ್ ಲಸಿಕೆಯ “ಅಡ್ಡಪರಿಣಾಮಗಳ” ವಿವಾದದ ಮಧ್ಯೆ ಲಸಿಕೆ ತಯಾರಕರಿಂದ “ರಾಜಕೀಯ ದೇಣಿಗೆಗಳನ್ನು” ಪಡೆಯಲು ‘ಬಿಜೆಪಿ’ ಜನರ ಜೀವನವನ್ನು ಪಣಕ್ಕಿಟ್ಟಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಈ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಅಖಿಲೇಶ್‌ ಯಾದವ್, ಇಂತಹ ಮಾರಕ ಔಷಧಗಳನ್ನು ಅನುಮತಿಸುವುದು “ಯಾರನ್ನಾದರೂ ಕೊಲೆ ಮಾಡುವ ಪಿತೂರಿ” ಗೆ ಸಮಾನವಾಗಿದೆ ಮತ್ತು ಹೊಣೆಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.

ಸುಮಾರು 80 ಕೋಟಿ ಭಾರತೀಯರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ, ಪ್ರತಿ ವ್ಯಕ್ತಿಗೆ ಎರಡು ಡೋಸ್‌ನಂತೆ ನೀಡಲಾಗಿದೆ. ಲಸಿಕೆಯನ್ನು ತಯಾರಿಸಿದ ಕಂಪನಿಯು ಹೃದಯಾಘಾತದ ಅಪಾಯವನ್ನುಂಟುಮಾಡುತ್ತದೆ ಎಂದು ಹೇಳಿದೆ ಎಂದು ಯಾದವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲಸಿಕೆಯ ದುಷ್ಪರಿಣಾಮಗಳಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರು ಅಥವಾ ಲಸಿಕೆಯ ದುಷ್ಪರಿಣಾಮಗಳ ಬಗ್ಗೆ ಭಯಪಡುವವರು, ಅವರ ಅನುಮಾನಗಳು ಮತ್ತು ಭಯಗಳು ಈಗ ಕಂಪೆನಿ ಸ್ವಯಂ ಒಪ್ಪಿಕೊಂಡಿದ್ದರಿಂದ ಸಾಬೀತಾಗಿದೆ. ಜನರ ಬದುಕಿನೊಂದಿಗೆ ಚೆಲ್ಲಾಟವಾಡುವವರನ್ನು ಕ್ಷಮಿಸಬಾರದು ಎಂದು ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ಆಡಳಿತ ಪಕ್ಷವು ಲಸಿಕೆ ತಯಾರಿಕಾ ಕಂಪನಿಯಿಂದ ರಾಜಕೀಯ ದೇಣಿಗೆ ಸಂಗ್ರಹಿಸುವ ಮೂಲಕ ಜನರ ಪ್ರಾಣವನ್ನು ಪಣಕ್ಕಿಟ್ಟಿದೆ. ಕಾನೂನು ಅಥವಾ ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಈ ವಿಷಯದಲ್ಲಿ ಉನ್ನತ ಮಟ್ಟದಲ್ಲಿ ನ್ಯಾಯಾಂಗ ತನಿಖೆಯಾಗಬೇಕು, ಬಿಜೆಪಿಯು ಕೋವಿಡ್ ಲಸಿಕೆ ತಯಾರಕರಿಂದ ಕಮಿಷನ್ ತೆಗೆದುಕೊಂಡಿದೆ. ಅದನ್ನು ಭೀತಿಗೊಳಿಸಿ ಜನರಿಗೆ ಬಲವಂತವಾಗಿ ನೀಡಲಾಗಿದೆ ಎಂದು ಯಾದವ್ ಹೇಳಿದ್ದಾರೆ.

ಕೋವಿಡ್-19 ವಿರುದ್ಧದ ‘ಕೋವಿಶೀಲ್ಡ್‌’ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿತ್ತು. TTS ಅಥವಾ ಥ್ರಂಬೋಸಿಸ್ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ರಕ್ತದಲ್ಲಿ ಪ್ಲೇಟ್ಲೆಟ್‌ ಅಂಶಗಳು ಕಡಿಮೆಯಾಗಲು ಕಾರಣವಾಗುತ್ತದೆ ಎನ್ನುವುದು ಆ ಬಳಿಕ ಬಹಿರಂಗವಾಗಿತ್ತು.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್‌ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿದೆ ಮತ್ತು ದೇಶದಲ್ಲಿ ವ್ಯಾಪಕವಾಗಿ ಈ ಲಸಿಕೆಯನ್ನು ನೀಡಲಾಗಿದೆ.

ಕೋವಿಡ್‌ ಲಸಿಕೆ ಅಡ್ಡಪರಿಣಾಮದ ಬಗ್ಗೆ ಮಾಹಿತಿ ಬಯಲಾಗುತ್ತಿದ್ದಂತೆ ಈ ಹೃದಯಾಘಾತದ ಸಾವಿಗೆ ಯಾರು ಹೊಣೆ ಎಂದು ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದೆ.

ಉತ್ತರಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಕೂಡ ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಮೋದಿಯ ಗ್ಯಾರಂಟಿಯೇ? ಎಂದು ಪ್ರಶ್ನಿಸಿದ್ದಾರೆ.

ಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪಾಲ್ ಯಾದವ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಲಸಿಕೆಗಳಲ್ಲಿ ಅವರು ಕಮಿಷನ್ ತೆಗೆದುಕೊಂಡಿರುವುದು ಈಗ ಬಹಿರಂಗವಾಗಿದೆ, ಜನರಿಗೆ ಕಡಿಮೆ ಗುಣಮಟ್ಟದ ಲಸಿಕೆಗಳು ಮತ್ತು ಔಷಧಿಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದೇಶದಲ್ಲಿ ಜನರಿಗೆ ಬಲವಂತವಾಗಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. 200-300ಕೋಟಿ ರೂ. ದೇಣಿಗೆಯನ್ನು ಬಿಜೆಪಿ ತೆಗೆದುಕೊಂಡು ಕಂಪೆನಿಗೆ ಲಸಿಕೆಯನ್ನು ಮಾರುಕಟ್ಟೆ ಮಾಡಲು ಅನುಮತಿ ನೀಡಿದೆ. ಜನರಿಗೆ ಬಲವಂತವಾಗಿ ಲಸಿಕೆಗಳನ್ನು ನೀಡಲಾಯಿತು. ವಿಶ್ವದಲ್ಲಿ ಎಲ್ಲಿಯೂ ಲಸಿಕೆಗಳನ್ನು ಬಲವಂತವಾಗಿ ನೀಡಲಾಗಿಲ್ಲ, ಲಸಿಕೆ ತಯಾರಿಕೆಯಲ್ಲಿನ ಭ್ರಷ್ಟಾಚಾರವು ಈಗ ಮುಂಚೂಣಿಗೆ ಬಂದಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...