Homeಕರ್ನಾಟಕ'ಸತ್ಯ ಆದಷ್ಟು ಬೇಗ ಹೊರಬರಲಿದೆ..'; ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

‘ಸತ್ಯ ಆದಷ್ಟು ಬೇಗ ಹೊರಬರಲಿದೆ..’; ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

- Advertisement -
- Advertisement -

ದೇಶದಾದ್ಯಂತ ಭಾರೀ ಸುದ್ದಿಯಾಗಿರುವ, ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಲೈಂಗಿಕ ಹಗರಣದ ಪ್ರಮುಖ ಆರೋಪಿ, ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ ನಂತರ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನನ್ನ ವಕೀಲರ ಮೂಲಕ ಎಸ್‌ಐಟಿ ಮುಖ್ಯಸ್ಥರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಹೇಳಿರುವ ಅವರು, ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೋರಿ ವಕೀಲರ ಮೂಲಕ ಮನವಿ ಸಲ್ಲಿಸಿದ್ದಾರೆ.

ಪ್ರಜ್ವಲ್ ಪರವಾಗಿ ವಕೀಲರು ಬರೆದ ಪತ್ರದಲ್ಲಿ ಏನಿದೆ?

“ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ನನ್ನ ಕಕ್ಷಿದಾರರಾದ ಪ್ರಜ್ವಲ್‌ ರವರ ಮನೆಯ ಮೇಲೆ ತಮ್ಮ ಕಛೇರಿಯಿಂದ ಕಳುಹಿಸಿರುವ ನೋಟಿಸನ್ನು ಅಂಟಿಸಿರುವ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಪ್ರಜ್ವಲ್‌ ರವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲ೦ 41 (ಎ) ಸಿ.ಆರ್‌.ಪಿ.ಸಿ ದಿನಾಂಕ:30-04-2024ರ ತಮ್ಮ ನೋಟಿಸ್‌ ನಲ್ಲಿ ತಾವು ದಿನಾಂಕ:01-05-2024 ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿರುತ್ತೀರಿ. ಆದರೆ, ನನ್ನ ಕಕ್ಷಿದಾರರಾದ ಪ್ರಜ್ವಲ್‌ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು, ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಿದ್ದು, ನನ್ನ ಕಕ್ಷಿದಾರರು ಬೆ೦ಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದು, ನನ್ನ ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ” ಎಂದು ವಕೀಲರಾದ ಅರುಣ್ ಜಿ ಎಂಬಿವವರು ಪತ್ರ ಬರೆದಿದ್ದಾರೆ.

ಎಸ್‌ಐಟಿ ಮುಂದೆ ಹಾಜರಾದ 10 ಜನ ಸಂತ್ರಸ್ತೆಯರು:

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಡಿಯೊಗಳು ಎಲ್ಲೆಡೆ ವೈರಲ್ ಆದ ನಂತರ ರಾಜ್ಯ ಸರ್ಕಾರ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದ್ದು, ತನಿಖಾ ತಂಡ ರಚಿಸುವ ಆದೇಶ ಹೊರಬಿದ್ದ ದಿನದಿಂದ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂದು ಸುದ್ದಿಯಾಗಿದೆ.

ಈ ನಡುವೆ ಎಸ್‌ಐಟಿ ಅಧಿಕಾರಿಗಳ ಮುಂದೆ ಈವರೆಗೆ 10ಕ್ಕೂ ಹೆಚ್ಚು ಸಂತ್ರಸ್ತೆಯರು ಹೇಳಿಕೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ಏ.30ರಂದು ಪ್ರಕರಣದ ಪ್ರಮುಖ ಆರೋಪಿಗಳಾದ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ಅವರಿಗೆ ಅಧಿಕಾರಿಗಳು ನೋಟಿಸ್ ಕೊಟ್ಟು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಹಿರಿಯ ಪೊಲೀಸ್ ಆಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದ್ದು, ಮೈಸೂರು ಎಸ್‌ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್‌ಪಿ ಸುಮನ್ ಪನ್ನೇಕರ್ ಅವರನ್ನ ನಿಯೋಜಿಸಲಾಗಿದೆ. ಇದೀಗ ರಾಜ್ಯ ಸರ್ಕಾರ 18 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನ ನಿಯೋಜಿಸಿದೆ‌. ಇದರಿಂದ ಎಸ್ಐಟಿ ತನಿಖೆ ಇನ್ನಷ್ಟು ಬಲಗೊಂಡಿದೆ.

ಬೆಂಗಳೂರು ನಗರದ ಮಾರತ್ ಹಳ್ಳಿ ಉಪ ವಿಭಾಗದ ಎಸಿಪಿ ಪ್ರಿಯದರ್ಶಿನಿ ಈಶ್ವರ್ ಸಾನಿಕೊಪ್ಪ, ಬೆಂಗಳೂರು ನಗರ ಸಿಸಿಬಿ ಎಸಿಪಿ ಸತ್ಯನಾರಾಯಣ ಸಿಂಗ್ ಎಸ್.ಬಿ., ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್, ಮಂಗಳೂರು ಉರ್ವಾ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಭಾರತಿ ಜಿ., ಕೆ.ಆರ್. ಪೇಟೆ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸುಮರಾಣಿ ಬಿ.ಎಸ್., ಆಲನಹಳ್ಳಿ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸ್ವರ್ಣಾ ಜಿ.ಎಸ್., ವೈಟ್ ಫೀಲ್ಡ್ ನ ಸೆನ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಹೇಮಂತ್ ಕುಮಾರ್ ಎಂ., ಬೆಂಗಳೂರು ನಗರ ಸಿಸಿಬಿ ಪೊಲೀಸ್ ಇನ್ ಸ್ಪೆಕ್ಟರ್ ರಾಜಾ ಜಿ.ಸಿ., ಉಡುಪಿ ಮಲ್ಪೆ ಸಿಎಸ್‌ಪಿ ಪಿಎಸ್‌ಐ ವೈಲೆಟ್ ಫ್ಲೆಮೀನಾ ಸೇರಿದಂತೆ 18 ಮಂದಿಯನ್ನು ಓಓಡಿ ಆಧಾರದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಸ್‌ಐಟಿಗೆ ಸರ್ಕಾರ ನಿಯೋಜಿಸಿದೆ.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ದೇಶ ತೊರೆಯುವುದನ್ನು ಪ್ರಧಾನಿ ಮೋದಿ ತಡೆದಿಲ್ಲ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...