Homeಕರ್ನಾಟಕಪೆನ್‌ಡ್ರೈವ್‌ ಬಿಡುಗಡೆಯಲ್ಲಿ ಕುಮಾರಸ್ವಾಮಿ, ಬಿಜೆಪಿ ನಾಯಕರ ಕೈವಾಡ: ಡಿ.ಕೆ.ಸುರೇಶ್

ಪೆನ್‌ಡ್ರೈವ್‌ ಬಿಡುಗಡೆಯಲ್ಲಿ ಕುಮಾರಸ್ವಾಮಿ, ಬಿಜೆಪಿ ನಾಯಕರ ಕೈವಾಡ: ಡಿ.ಕೆ.ಸುರೇಶ್

- Advertisement -
- Advertisement -

ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮೊದಲೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ತಿಳಿದಿತ್ತು. ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ. ಪೆನ್‌ ಡ್ರೈವ್‌ ಬಿಡುಗಡೆಯಲ್ಲಿ ಮೈತ್ರಿ ಬಿಜೆಪಿ ನಾಯಕರು ಮತ್ತು ಕುಮಾರಸ್ವಾಮಿಯವರ ಕೈವಾಡ ಇದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಬಹಿರಂಗಗೊಳಿಸಿರುವುದು ಮಹಾನ್ ನಾಯಕ ಡಿ.ಕೆ. ಶಿವಕುಮಾರ್ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಪ್ರತಿಕ್ರಿಯಿಸಿದ್ದ ಡಿಕೆ ಸುರೇಶ್‌, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶಿವಕುಮಾರ್ ಅವರನ್ನು ಸ್ಮರಿಸದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲ, ನಿದ್ದೆ ಬರುವುದಿಲ್ಲ. ನಾವು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಚುನಾವಣೆಗೆ ವಾರ ಅಥವಾ ಹತ್ತು ದಿನ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಾಗಿತ್ತಲ್ಲವೇ? ಈ ವಿಚಾರದಲ್ಲಿ ಎಲ್ಲರಿಗಿಂತ ಮುಂಚಿತವಾಗಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ಗೊತ್ತಿತ್ತು. ಅವರು ಈಗ ಕಾಂಗ್ರೆಸ್ ಮೇಲೆ ಆರೋಪ ಮಾಡಿ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅವರು ತಮ್ಮ ಹುಳುಕು ಮುಚ್ಚಿಕೊಳ್ಳಲು ದಿನಾ ಒಂದೊಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಅನ್ಯಾಯಕ್ಕೆ ಒಳಗಾಗಿರುವವರ ಬಗ್ಗೆ ನಾವು ಚಿಂತನೆ ಮಾಡಬೇಕು. ಕುಮಾರಸ್ವಾಮಿ ಅವರು ಯಾವ ವಿಚಾರದಲ್ಲಿ ಶಿವಕುಮಾರ್ ಅವರ ವಿರುದ್ಧ ಟೀಕೆ ಮಾಡದೆ ಇದ್ದಾರೆ ಹೇಳಿ? ಎಲ್ಲಿ ಏನೇ ಆದರೂ ಅದಕ್ಕೆ ಶಿವಕುಮಾರ್ ಅವರೇ ಕಾರಣ ಎನ್ನುತ್ತಾರೆ. ಶಿವಕುಮಾರ್ ಅವರ ವಿರುದ್ಧ ಆರೋಪ ಮಾಡದೆ ಇರಲು ಅವರಿಗೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ದೇವರಾಜೇಗೌಡ ತಮ್ಮ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರು ಬಳಸಿಕೊಳ್ಳುತ್ತಿದ್ದಾರೆ. ಶಿವಕುಮಾರ್ ಅವರ ಬಳಿ ಪೆನ್ ಡ್ರೈವ್ ಇದ್ದಿದ್ದರೆ ಇದಕ್ಕೆ ಮುಂಚಿತವಾಗಿ ರಿಲೀಸ್ ಮಾಡಬಹುದಿತ್ತಲ್ಲವೇ? ಇದು ಬಿಡುಗಡೆ ಆಗಿರುವುದು ಹಾಸನ ಜಿಲ್ಲೆಯಲ್ಲಿ, ಹಾಸನ ಜಿಲ್ಲೆಯ ನಾಯಕರ ಕೈವಾಡ ಇದರಲ್ಲಿದೆ. ಅವರ ಮೈತ್ರಿ ನಾಯಕರು ಹಾಗೂ ಕುಮಾರಸ್ವಾಮಿ ಅವರ ಕೈವಾಡವಿದೆ. ಕುಮಾರಸ್ವಾಮಿ ಅವರಿಗೆ ಈ ಬಗ್ಗೆ ಮುಂಚಿತವಾಗಿಯೇ ಗೊತ್ತಿತ್ತು, ಇನ್ನು ಈ ವಿಡಿಯೋಗಳು ನಾಲ್ಕು ವರ್ಷಗಳ ಹಳೆಯದು ಎಂದು ರೇವಣ್ಣನವರೇ ಒಪ್ಪಿಕೊಂಡಿದ್ದಾರೆ. ಅವರ ಕುಟುಂಬದವರೇ ಈ ವಿಚಾರವಾಗಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದ್ದು, ಬೇರೆಯವರ ಮೇಲೆ ಯಾಕೆ ಆರೋಪ ಮಾಡಬೇಕು ಎಂದು ಕೇಳಿದ್ದಾರೆ.

ನನ್ನ ಬಳಿ ಪೆನ್ ಡ್ರೈವ್ ಬರುವ ಮುನ್ನ ಡಿ.ಕೆ.ಶಿವಕುಮಾರ್ ಅವರ ಬಳಿ ಈ ಪೆನ್ ಡ್ರೈವ್ ಹೋಗಿತ್ತು ಎಂಬ ದೇವರಾಜೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಸನ ಜಿಲ್ಲೆಯಲ್ಲಿ ಕೇವಲ ಗುಸು ಗುಸು ಇತ್ತು. ಅವರು ಕೋರ್ಟ್‌ನಲ್ಲಿ ತಡೆಯಾಜ್ಞೆ ಕೂಡ ತಂದಿದ್ದರು. ಪೆನ್ ಡ್ರೈವ್ ಹರಿದಾಡಿದ ನಂತರ ಈಗ  ಈ ವಿಚಾರ ಚರ್ಚೆಯಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಕರಣದ ಪಾರದರ್ಶಕ ತನಿಖೆ ಸರ್ಕಾರದ ಕೆಲಸ, ಈಗಾಗಲೇ ಎಸ್ಐಟಿ ತನಿಖೆಗೆ ಆದೇಶಿಸಲಾಗಿದೆ. ಇದರಲ್ಲಿ ನಮ್ಮ ಮಾತೇನಿದೆ. ಅಲ್ಲಿರುವ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎನ್ನುವುದಷ್ಟೇ ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.

ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡುವಂತೆ ಹಾಸನದ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕೋರಿದ್ದಾರೆ. ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ‌ ಇಲ್ಲದ ಕಾರಣ, ಕಾಲಾವಕಾಶ ಕೋರಿ ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ ಎಂದು ಪ್ರಜ್ವಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಈ ಮೊದಲು ನೊಟೀಸ್‌ ನೀಡಿದ್ದರು. ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಎಸ್‌ಐಟಿ ಸೂಚಿಸಿತ್ತು.

ಇದನ್ನು ಓದಿ: ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...