Homeಕರ್ನಾಟಕಪೆನ್‌ಡ್ರೈವ್‌ ಬಿಡುಗಡೆಯಲ್ಲಿ ಕುಮಾರಸ್ವಾಮಿ, ಬಿಜೆಪಿ ನಾಯಕರ ಕೈವಾಡ: ಡಿ.ಕೆ.ಸುರೇಶ್

ಪೆನ್‌ಡ್ರೈವ್‌ ಬಿಡುಗಡೆಯಲ್ಲಿ ಕುಮಾರಸ್ವಾಮಿ, ಬಿಜೆಪಿ ನಾಯಕರ ಕೈವಾಡ: ಡಿ.ಕೆ.ಸುರೇಶ್

- Advertisement -
- Advertisement -

ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮೊದಲೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ತಿಳಿದಿತ್ತು. ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ. ಪೆನ್‌ ಡ್ರೈವ್‌ ಬಿಡುಗಡೆಯಲ್ಲಿ ಮೈತ್ರಿ ಬಿಜೆಪಿ ನಾಯಕರು ಮತ್ತು ಕುಮಾರಸ್ವಾಮಿಯವರ ಕೈವಾಡ ಇದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಬಹಿರಂಗಗೊಳಿಸಿರುವುದು ಮಹಾನ್ ನಾಯಕ ಡಿ.ಕೆ. ಶಿವಕುಮಾರ್ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಪ್ರತಿಕ್ರಿಯಿಸಿದ್ದ ಡಿಕೆ ಸುರೇಶ್‌, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶಿವಕುಮಾರ್ ಅವರನ್ನು ಸ್ಮರಿಸದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲ, ನಿದ್ದೆ ಬರುವುದಿಲ್ಲ. ನಾವು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಚುನಾವಣೆಗೆ ವಾರ ಅಥವಾ ಹತ್ತು ದಿನ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಾಗಿತ್ತಲ್ಲವೇ? ಈ ವಿಚಾರದಲ್ಲಿ ಎಲ್ಲರಿಗಿಂತ ಮುಂಚಿತವಾಗಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ಗೊತ್ತಿತ್ತು. ಅವರು ಈಗ ಕಾಂಗ್ರೆಸ್ ಮೇಲೆ ಆರೋಪ ಮಾಡಿ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅವರು ತಮ್ಮ ಹುಳುಕು ಮುಚ್ಚಿಕೊಳ್ಳಲು ದಿನಾ ಒಂದೊಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಅನ್ಯಾಯಕ್ಕೆ ಒಳಗಾಗಿರುವವರ ಬಗ್ಗೆ ನಾವು ಚಿಂತನೆ ಮಾಡಬೇಕು. ಕುಮಾರಸ್ವಾಮಿ ಅವರು ಯಾವ ವಿಚಾರದಲ್ಲಿ ಶಿವಕುಮಾರ್ ಅವರ ವಿರುದ್ಧ ಟೀಕೆ ಮಾಡದೆ ಇದ್ದಾರೆ ಹೇಳಿ? ಎಲ್ಲಿ ಏನೇ ಆದರೂ ಅದಕ್ಕೆ ಶಿವಕುಮಾರ್ ಅವರೇ ಕಾರಣ ಎನ್ನುತ್ತಾರೆ. ಶಿವಕುಮಾರ್ ಅವರ ವಿರುದ್ಧ ಆರೋಪ ಮಾಡದೆ ಇರಲು ಅವರಿಗೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ದೇವರಾಜೇಗೌಡ ತಮ್ಮ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರು ಬಳಸಿಕೊಳ್ಳುತ್ತಿದ್ದಾರೆ. ಶಿವಕುಮಾರ್ ಅವರ ಬಳಿ ಪೆನ್ ಡ್ರೈವ್ ಇದ್ದಿದ್ದರೆ ಇದಕ್ಕೆ ಮುಂಚಿತವಾಗಿ ರಿಲೀಸ್ ಮಾಡಬಹುದಿತ್ತಲ್ಲವೇ? ಇದು ಬಿಡುಗಡೆ ಆಗಿರುವುದು ಹಾಸನ ಜಿಲ್ಲೆಯಲ್ಲಿ, ಹಾಸನ ಜಿಲ್ಲೆಯ ನಾಯಕರ ಕೈವಾಡ ಇದರಲ್ಲಿದೆ. ಅವರ ಮೈತ್ರಿ ನಾಯಕರು ಹಾಗೂ ಕುಮಾರಸ್ವಾಮಿ ಅವರ ಕೈವಾಡವಿದೆ. ಕುಮಾರಸ್ವಾಮಿ ಅವರಿಗೆ ಈ ಬಗ್ಗೆ ಮುಂಚಿತವಾಗಿಯೇ ಗೊತ್ತಿತ್ತು, ಇನ್ನು ಈ ವಿಡಿಯೋಗಳು ನಾಲ್ಕು ವರ್ಷಗಳ ಹಳೆಯದು ಎಂದು ರೇವಣ್ಣನವರೇ ಒಪ್ಪಿಕೊಂಡಿದ್ದಾರೆ. ಅವರ ಕುಟುಂಬದವರೇ ಈ ವಿಚಾರವಾಗಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದ್ದು, ಬೇರೆಯವರ ಮೇಲೆ ಯಾಕೆ ಆರೋಪ ಮಾಡಬೇಕು ಎಂದು ಕೇಳಿದ್ದಾರೆ.

ನನ್ನ ಬಳಿ ಪೆನ್ ಡ್ರೈವ್ ಬರುವ ಮುನ್ನ ಡಿ.ಕೆ.ಶಿವಕುಮಾರ್ ಅವರ ಬಳಿ ಈ ಪೆನ್ ಡ್ರೈವ್ ಹೋಗಿತ್ತು ಎಂಬ ದೇವರಾಜೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಸನ ಜಿಲ್ಲೆಯಲ್ಲಿ ಕೇವಲ ಗುಸು ಗುಸು ಇತ್ತು. ಅವರು ಕೋರ್ಟ್‌ನಲ್ಲಿ ತಡೆಯಾಜ್ಞೆ ಕೂಡ ತಂದಿದ್ದರು. ಪೆನ್ ಡ್ರೈವ್ ಹರಿದಾಡಿದ ನಂತರ ಈಗ  ಈ ವಿಚಾರ ಚರ್ಚೆಯಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಕರಣದ ಪಾರದರ್ಶಕ ತನಿಖೆ ಸರ್ಕಾರದ ಕೆಲಸ, ಈಗಾಗಲೇ ಎಸ್ಐಟಿ ತನಿಖೆಗೆ ಆದೇಶಿಸಲಾಗಿದೆ. ಇದರಲ್ಲಿ ನಮ್ಮ ಮಾತೇನಿದೆ. ಅಲ್ಲಿರುವ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎನ್ನುವುದಷ್ಟೇ ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.

ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡುವಂತೆ ಹಾಸನದ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕೋರಿದ್ದಾರೆ. ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ‌ ಇಲ್ಲದ ಕಾರಣ, ಕಾಲಾವಕಾಶ ಕೋರಿ ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ ಎಂದು ಪ್ರಜ್ವಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಈ ಮೊದಲು ನೊಟೀಸ್‌ ನೀಡಿದ್ದರು. ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಎಸ್‌ಐಟಿ ಸೂಚಿಸಿತ್ತು.

ಇದನ್ನು ಓದಿ: ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...