Homeಕರ್ನಾಟಕ'ವಿರೋಧ ಪಕ್ಷದ ಧ್ವನಿ ಅಡಗಿಸಲು ಚಾನೆಲ್‍ಗಳಿಗೆ ನಿರ್ಬಂಧ ಹೇರಿದ್ದಾರೆಂಬುದು ಸ್ಪಷ್ಟ': ಸ್ಪೀಕರ್ ಕ್ರಮಕ್ಕೆ ಸಿದ್ದರಾಮಯ್ಯ ಆಕ್ರೋಶ

‘ವಿರೋಧ ಪಕ್ಷದ ಧ್ವನಿ ಅಡಗಿಸಲು ಚಾನೆಲ್‍ಗಳಿಗೆ ನಿರ್ಬಂಧ ಹೇರಿದ್ದಾರೆಂಬುದು ಸ್ಪಷ್ಟ’: ಸ್ಪೀಕರ್ ಕ್ರಮಕ್ಕೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳಿಗೆ ನಿರ್ಬಂಧ ಕ್ರಮವನ್ನು ವಿರೋಧಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿವೇಶನದ ಸುದ್ದಿ ಪ್ರಸಾರ ಮಾಡುತ್ತಿದ್ದ ಖಾಸಗಿ ವಾಹಿನಿಗಳಿಗೆ ನಿಷೇಧ ಹೇರಿರುವ ಕ್ರಮ ಖಂಡನೀಯ. ವಿರೋಧ ಪಕ್ಷಗಳ ದನಿಯನ್ನು ದಮನಿಸಿ, ಆಡಳಿತ ಪಕ್ಷಕ್ಕೆ ನೆರವಾಗುವ ಉದ್ದೇಶದಿಂದಲೇ ಸ್ಪೀಕರ್ ಅವರು ಟಿವಿ ಚಾನೆಲ‌್‌ಗಳ ಕ್ಯಾಮೆರಾಗಳಿಗೆ ನಿರ್ಬಂಧ ಹೇರಿರುವುದು ಕಳೆದೆರಡು ದಿನಗಳ ಕಲಾಪದಿಂದ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡ ಆಡಳಿತ ಪಕ್ಷದ ಸದಸ್ಯರು, ಸರ್ಕಾರದ ವೈಫಲ್ಯದ ಬಗ್ಗೆ ಆಡಿದ ಮಾತುಗಳು ಮತ್ತು ಅವರ ಮುಖಗಳನ್ನು ಸರ್ಕಾರಿ ಕೃಪಾಪೋಷಿತ ಡಿಡಿ ಚಂದನ ಸುದ್ದಿವಾಹಿನಿ ಸೆನ್ಸಾರ್ ಮಾಡಿ ಬಿತ್ತರಿಸುತ್ತಿರುವುದು ಖಂಡನೀಯ.
ಸ್ಪೀಕರ್ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ. ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ ಎಂದು ಚಾಟಿ ಬೀಸಿದರು.

ಸ್ಪೀಕರ್ ಕಾಗೇರಿಯವರ ಜತೆ ನನಗೆ ವೈಯಕ್ತಿಕ ಜಗಳವೇನಿಲ್ಲ. ವಿಧಾನಮಂಡಲದ ಶಿಷ್ಟಾಚಾರ-ನಡವಳಿಕೆಗಳ ಬಗ್ಗೆ ನನಗೂ ತಿಳಿದಿದೆ. ಆದರೆ ಅಧಿಕಾರ ವಹಿಸಿಕೊಂಡ ಕೂಡಲೇ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದ ಸ್ಪೀಕರ್, ಮೊದಲ ದಿನದಿಂದಲೇ ಬಿಜೆಪಿ ಸದಸ್ಯರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಖಂಡನೀಯ ಎಂದು ಗುಡುಗಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾಧ್ಯಮದ ಮೇಲೆ ನಿರ್ಬಂಧ ಹೇರುವುದು, ಈ ದೇಶದ ಪ್ರಜೆಗಳಿಗೆ ನಮ್ಮ ಸಂವಿಧಾನವು ನೀಡಿರುವ ಹಕ್ಕುಗಳ ಉಲ್ಲಂಘನೆ. ಇದರ ವಿರುದ್ಧ ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳು ಇನ್ನೂ ಉಗ್ರವಾದ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕು.ಮಾಧ್ಯಮದ ಕೆಲವರು ಬಿ.ಜೆ.ಪಿ.ಯ ವಕ್ತಾರರಂತೆ ಮಾತನಾಡುತ್ತಿದ್ದರು. ಅಂತಹ ಕೆಲವರಿಗೆ ಬಿಜೆಪಿಯ ನಿಜವಾದ ಬಣ್ಣ ಈಗ ಗೊತ್ತಾಗಿರಬೇಕು.

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...