Homeಮುಖಪುಟಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 'ವಾಕ್ ಸ್ವಾತಂತ್ರ್ಯ ಉಲ್ಲಂಘನೆ' ಪ್ರಕರಣಗಳು ದಾಖಲು: ವರದಿ

ಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 ‘ವಾಕ್ ಸ್ವಾತಂತ್ರ್ಯ ಉಲ್ಲಂಘನೆ’ ಪ್ರಕರಣಗಳು ದಾಖಲು: ವರದಿ

- Advertisement -
- Advertisement -

ಬುಧವಾರ (ಮೇ 1) ಪ್ರಕಟವಾದ ಫ್ರೀ ಸ್ಪೀಚ್ ಕಲೆಕ್ಟಿವ್‌ನ ಅಧ್ಯಯನದ ಪ್ರಕಾರ, ಈ ವರ್ಷದ ಜನವರಿ ಮತ್ತು ಏಪ್ರಿಲ್ ನಡುವೆ ದೇಶದಲ್ಲಿ ಕನಿಷ್ಠ 134 ವಾಕ್ ಸ್ವಾತಂತ್ರ್ಯ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘನೆಯ ಪ್ರಕರಣಗಳು ವರದಿಯಾಗಿವೆ.

ಫ್ರೀ ಸ್ಪೀಚ್ ಕಲೆಕ್ಟಿವ್‌ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಗಾವಲಿಡುತ್ತದೆ. ಈ ಕುರಿತ ದಾಖಲೆಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡುತ್ತದೆ. ಅಲ್ಲದೆ, ಇದು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಎದುರಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ.

ವರದಿಯಲ್ಲಿ ಉಲ್ಲೇಖಿಸಲಾದ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಪತ್ರಕರ್ತರು, ಶಿಕ್ಷಣ ತಜ್ಞರು, ಯೂಟ್ಯೂಬರ್‌ಗಳು, ವಿದ್ಯಾರ್ಥಿಗಳು ಮತ್ತು ಇತರ ನಾಗರಿಕರ ಮೇಲಿನ ಕಿರುಕುಳ, ದಾಳಿಗಳು, ಬಂಧನಗಳು ಮತ್ತು ಸೆನ್ಸಾರ್‌ಶಿಪ್ ಸೇರಿವೆ. ವ್ಯಕ್ತಿಗಳ ವಿರುದ್ಧದ ಕಾನೂನು ಕ್ರಮ ಮತ್ತು ಬೆದರಿಕೆಗಳ ಉದಾಹರಣೆಗಳು ಮತ್ತು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯ ಪ್ರಕರಣಗಳು ಕೂಡ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಒಳಗೊಂಡಿವೆ.

ವರದಿ ಪ್ರಕಾರ, ವರ್ಷಾರಂಭದಿಂದ ದೇಶದಲ್ಲಿ 34 ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ದಾಳಿಗೊಳಗಾದವರಲ್ಲಿ ಪತ್ರಕರ್ತ ನಿಖಿಲ್ ವಾಗ್ಲೆ ಕೂಡ ಒಬ್ಬರು. ಫೆಬ್ರವರಿ 9, 2024 ರಂದು ಪುಣೆಯ ಸಾರ್ವಜನಿಕ ಸಭೆಯೊಂದಕ್ಕೆ ಕಾರ್ಯಕರ್ತ ವಿಶ್ವಂಭರ್ ಚೌಧರಿ ಮತ್ತು ಮಾನವ ಹಕ್ಕುಗಳ ವಕೀಲ ಅಸಿಮ್ ಸರೋದೆ ಅವರೊಂದಿಗೆ ತೆರಳುತ್ತಿದ್ದಾಗ ಜನರ ಗುಂಪು ಅವರನ್ನು ಬೆನ್ನಟ್ಟಿತ್ತು. ಪುಣೆಯ ಖಂಡೋಜಿ ಬಾಬಾ ಚೌಕ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಕಾರ್ಯಕರ್ತರು ಪತ್ರಕರ್ತರ ಕಾರಿಗೆ ಮಸಿ ಎರಚಿ, ಹಾನಿಗೊಳಿಸಿದ್ದರು.

ವಾಗ್ಲೆ ಮೇಲಿನ ದಾಳಿಯ ಒಂದು ದಿನದ ಮೊದಲು, ಉತ್ತರಾಖಂಡದ ಹಲ್ದ್ವಾನಿಯಲ್ಲಿ 10 ಪತ್ರಕರ್ತರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು ಎಂದು ವರದಿ ಹೇಳಿದೆ. ಅಲ್ಲಿ 2002 ರಲ್ಲಿ ನಿರ್ಮಿಸಲಾದ ಮರಿಯಂ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯ ಮದರಸವನ್ನು ಧ್ವಂಸಗೊಳಿಸಿದ ನಂತರ ಉದ್ವಿಗ್ನತೆ ಉಂಟಾಗಿತ್ತು.

ಅಮೃತ್ ವಿಚಾರ್ ಪತ್ರಿಕೆಯಲ್ಲಿ ಫೋಟೊ ಜರ್ನಲಿಸ್ಟ್ ಆಗಿರುವ 48 ವರ್ಷದ ಸಂಜಯ್ ಕನೇರಾ ಅವರು ಹಲ್ದ್ವಾನಿಯಲ್ಲಿ “ತಲೆಯ ಮೇಲೆ ಚೂಪಾದ ವಸ್ತುವಿನಿಂದ” ದಾಳಿಗೊಳಗಾದ ನಂತರ ತೀವ್ರವಾಗಿ ಗಾಯಗೊಂಡಿದ್ದರು.

ಫ್ರೀ ಸ್ಪೀಚ್ ಕಲೆಕ್ಟಿವ್‌ನ ವರದಿಯು, ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಸೌತ್ ಏಷ್ಯಾ ಬ್ಯೂರೋ ಮುಖ್ಯಸ್ಥೆ ಅವನಿ ಡಯಾಸ್ ಪ್ರಕರಣವನ್ನು ಒಳಗೊಂಡಂತೆ ಸುದ್ದಿ ಮಾಧ್ಯಮದ ಮೇಲಿನ ಸೆನ್ಸಾರ್‌ಶಿಪ್‌ನ 12 ಉದಾಹರಣೆಗಳನ್ನು ಪಟ್ಟಿ ಮಾಡಿದೆ.

ಎಪ್ರಿಲ್ 23 ರಂದು ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಡಯಾಸ್ ಅವರು, “ಎರಡು ವರ್ಷಗಳ ಕಾಲ ದೇಶದಲ್ಲಿ ನೆಲೆಸಿದ ಬಳಿಕ ಹಠಾತ್ತನೆ ಭಾರತವನ್ನು ತೊರೆಯಬೇಕಾಯಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನನ್ನ ವರದಿಯು ‘ಮಿತಿ ದಾಟಿದೆ’ ಎಂಬ ಕಾರಣ ನೀಡಿ ವೀಸಾ ವಿಸ್ತರಣೆಗೆ ನಿರಾಕರಿಸಿದೆ” ಎಂದು ಹೇಳಿದ್ದರು.

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸುದ್ದಿಯನ್ನು ಭಾರತದಲ್ಲಿ ಪ್ರಸಾರ ಮಾಡುವುದಕ್ಕೆ ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಯೂಟ್ಯೂಬ್‌ಗೆ ನಿರ್ಬಂಧ ವಿಧಿಸಿದ ವಾರಗಳ ನಂತರ ಅವನಿ ಡಯಾಸ್ ಅವರಿಗೆ ವೀಸಾ ನಿರಾಕರಿಸಲಾಗಿದೆ ಎಂದು ವರದಿ ತಿಳಿಸಿದೆ.

ಒಟ್ಟಾರೆಯಾಗಿ, ಜನವರಿಯಿಂದ ದೇಶದಲ್ಲಿ ಸಾಮಾಜಿಕ ಮಾಧ್ಯಮ, ಸುದ್ದಿ ಮಾಧ್ಯಮ, ಶೈಕ್ಷಣಿಕ ಮತ್ತು ಮನರಂಜನಾ ಕ್ಷೇತ್ರವನ್ನು ಒಳಗೊಂಡಿರುವ ಸೆನ್ಸಾರ್‌ಶಿಪ್‌ನ 46 ಪ್ರಕರಣಗಳು ವರದಿಯಾಗಿವೆ.

ಜನವರಿ 22 ರಂದು ರಾಮ ಮಂದಿರದ ಉದ್ಘಾಟನೆಗೆ ಮುಂಚಿತವಾಗಿ, ಸುಮಾರು 100 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ವರದಿ ಹೇಳಿದೆ.

1992ರ ಬಾಬ್ರಿ ಮಸೀದಿ ಧ್ವಂಸ ಕುರಿತ ಪೋಸ್ಟರ್ ಅನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸಿದ್ದಕ್ಕಾಗಿ ಜನವರಿ 24 ರಂದು, ಪುಣೆಯ ಫಿಲ್ಮ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಏಳು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಹಿಂದುತ್ವದ ಗುಂಪೊಂದು ಕ್ಯಾಂಪಸ್‌ಗೆ ನುಗ್ಗಿ, ಘೋಷಣೆಗಳನ್ನು ಕೂಗಿ, “ಸಂವಿಧಾನದ ಸಾವನ್ನು ನೆನಪಿಸಿಕೊಳ್ಳಿ” ಎಂಬ ಬ್ಯಾನರ್‌ಗೆ ಬೆಂಕಿ ಹಚ್ಚಿದ ಒಂದು ದಿನದ ನಂತರ ಇದು ಸಂಭವಿಸಿತ್ತು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಕಪ್ ನೊಕ್ವೊಹಮ್, ಪ್ರಧಾನ ಕಾರ್ಯದರ್ಶಿ ಸಯಂತನ್ ಚಕ್ರವರ್ತಿ ಮತ್ತು ಒಬ್ಬ ವಿದ್ಯಾರ್ಥಿನಿ ಸೇರಿದಂತೆ ಇತರ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ರಾಮ ಮಂದಿರ ಉದ್ಘಾಟನೆಯ ಬಳಿಕ ಹಲವು ರಾಜ್ಯಗಳಲ್ಲಿ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರದ ಪ್ರದರ್ಶಕ್ಕೆ ಅಡ್ಡಿಪಡಿಸಲಾಗಿದೆ ಎಂದು ವರದಿಯು ಗಮನಸೆಳೆದಿದೆ. ‘ರಾಮ್ ಕೆ ನಾಮ್’ ಅಯೋಧ್ಯೆಯಲ್ಲಿ ಹಿಂದಿನ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಹಿಂದುತ್ವ ಗುಂಪುಗಳ ಪ್ರಚಾರದ ಕುರಿತು ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರ 1992ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...