Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

- Advertisement -
- Advertisement -

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ದಾಳಿಯನ್ನು ಆರಂಭದಿಂದಲೇ ಪ್ರತಿಭಟಿಸಿದ್ದ ಕೊಲಂಬಿಯಾ ಇದೀಗ ಮಹತ್ವದ ನಿಲುವನ್ನು ತೆಗೆದುಕೊಂಡಿದ್ದು, ಇಸ್ರೇಲ್‌ನೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಂಡಿದೆ. ಈ ಕುರಿತು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಘೋಷಣೆಯನ್ನು ಮಾಡಿದ್ದಾರೆ.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ಹತ್ಯಾಕಾಂಡವನ್ನು “ಜನಾಂಗೀಯ ಹತ್ಯೆ” ಎಂದು ಬಣ್ಣಿಸಿದೆ. ಕೊಲಂಬಿಯಾ ಇಸ್ರೇಲ್‌ನ ಆಪ್ತ ದೇಶಗಳಲ್ಲೊಂದಾಗಿತ್ತು. ಆದರೆ ಗಾಝಾದ ಮೇಲೆ ಇಸ್ರೇಲ್‌ ನಿರಂತರ ದಾಳಿ ಹಿನ್ನೆಲೆ ಈ ಹಿಂದೆ ಇಸ್ರೇಲ್‌ನಿಂದ ಶಸ್ತ್ರಾಸ್ತ್ರಗಳ ಖರೀದಿಯನ್ನು ಕೊಲಂಬಿಯಾ ಸ್ಥಗಿತಗೊಳಿಸಿತ್ತು ಮತ್ತು ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡವನ್ನು ಜರ್ಮನಿಯ ನಾಝಿ ಕ್ರಮಗಳಿಗೆ ಹೋಲಿಸಿತ್ತು.

ಕೊಲಂಬಿಯಾದ ರಾಜಧಾನಿಯಲ್ಲಿ ನಡೆದ ಅಂತರಾಷ್ಟ್ರೀಯ ಕಾರ್ಮಿಕರ ದಿನದ ಮೆರವಣಿಗೆಯಲ್ಲಿ ಮಾತನಾಡಿದ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ನಾಳೆಯಿಂದ ಕೊಲಂಬಿಯಾ, ನರಹಂತಕ ಅಧ್ಯಕ್ಷರನ್ನು ಹೊಂದಿದ್ದಕ್ಕಾಗಿ ಇಸ್ರೇಲ್ ದೇಶದೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಳ್ಳಲಿದೆ. ಪ್ಯಾಲೆಸ್ತೀನ್‌ ಸತ್ತರೆ, ಮಾನವೀಯತೆಯು ಸಾಯುತ್ತದೆ, ಮತ್ತು ನಾವು ಅದನ್ನು ಸಾಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ನ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಎಕ್ಸ್‌ನಲ್ಲಿ ಪೆಟ್ರೋ ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ. ಶಿಶುಗಳನ್ನು ಸುಟ್ಟುಹಾಕಿದ, ಮಕ್ಕಳನ್ನು ಕೊಂದ, ಮಹಿಳೆಯರನ್ನು ಅತ್ಯಾಚಾರ ಮಾಡಿದ ಮತ್ತು ಅಮಾಯಕ ನಾಗರಿಕರನ್ನು ಅಪಹರಿಸಿದ ಅತ್ಯಂತ ಹೇಯ ರಾಕ್ಷಸರ ಪರವಾಗಿ ನಿಲ್ಲಲು ಗುಸ್ಟಾವೊ ಪೆಟ್ರೋ ನಿರ್ಧರಿಸಿದ್ದಾರೆ ಎಂದು ಇತಿಹಾಸವು ನೆನಪಿಸಿಕೊಳ್ಳುತ್ತದೆ ಎಂದು ಇಸ್ರೇಲ್‌ ನಡೆಸಿದ್ದ ಮಹಾ ಹತ್ಯಾಕಾಂಡವನ್ನು ಸಮರ್ಥಿಸಿ ಇಸ್ರೇಲ್ ಕಾಟ್ಜ್ ಹಮಾಸ್‌ ಕಡೆ ಬೊಟ್ಟು ಮಾಡಿದ್ದಾರೆ.

ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ, ಆ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿದ ಬೆನ್ನಲ್ಲಿ ಇಸ್ರೇಲ್‌ನಿಂದ ಕೊಲಂಬಿಯಾ ತನ್ನ ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿತ್ತು. ಇದಲ್ಲದೆ ಇಸ್ರೇಲ್‌ನ ಮಿಲಿಟರಿ ನಡೆಸುತ್ತಿರುವ ಅಪರಾಧವನ್ನು ಟೀಕಿಸಿತ್ತು.

‘ಕೊಲಂಬಿಯಾ’ ಲ್ಯಾಟಿನ್ ಅಮೇರಿಕಾದಲ್ಲಿ ಇಸ್ರೇಲ್‌ನ ಹತ್ತಿರದ ಪಾಲುದಾರರಲ್ಲಿ ಒಂದಾಗಿದೆ. ಆದರೆ 2022 ರಲ್ಲಿ ಕೊಲಂಬಿಯಾದ ಮೊದಲ ಎಡಪಂಥೀಯ ಅಧ್ಯಕ್ಷರಾಗಿ ಪೆಟ್ರೋ ಆಯ್ಕೆಯಾದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳು ಹದಗೆಟ್ಟಿದೆ. ಬಂಡಾಯ ಗುಂಪುಗಳ ವಿರುದ್ಧ ಹೋರಾಡಲು ಕೊಲಂಬಿಯಾ ಇಸ್ರೇಲ್‌-ನಿರ್ಮಿತ ಯುದ್ಧವಿಮಾನಗಳು ಮತ್ತು ಮೆಷಿನ್ ಗನ್‌ಗಳನ್ನು ಬಳಸುತ್ತದೆ ಮತ್ತು ಎರಡೂ ದೇಶಗಳು 2020ರಲ್ಲಿ ಈ ಬಗ್ಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ.

ಇಸ್ರೇಲ್ ಮತ್ತು ಕೊಲಂಬಿಯಾದ ನಡುವಿನ ಸಂಬಂಧಗಳು ಯಾವಾಗಲೂ ಚೆನ್ನಾಗಿರುತ್ತದೆ ಮತ್ತು ಯಾವುದೇ ಯೆಹೂದ್ಯ ವಿರೋಧಿ ಮತ್ತು ದ್ವೇಷ ತುಂಬಿದ ಅಧ್ಯಕ್ಷರು ಅದನ್ನು ಬದಲಾಯಿಸುವಲ್ಲಿ ಯಶಸ್ವಿಯಾಗುವುದಿಲ್ಲ. ಇಸ್ರೇಲ್ ರಾಜ್ಯವು ತನ್ನ ನಾಗರಿಕರನ್ನು ಚಿಂತೆ ಮತ್ತು ಭಯವಿಲ್ಲದೆ ರಕ್ಷಿಸುವುದನ್ನು ಮುಂದುವರಿಸುತ್ತದೆ ಎಂದು ಕಾಟ್ಜ್ ಹೇಳಿದ್ದಾರೆ.

 ಇದನ್ನು ಓದಿ: ಬಿಆರ್‌ಎಸ್ ಮುಖ್ಯಸ್ಥ ಕೆಸಿಆರ್‌ಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚು.ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...