Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

- Advertisement -
- Advertisement -

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ದಾಳಿಯನ್ನು ಆರಂಭದಿಂದಲೇ ಪ್ರತಿಭಟಿಸಿದ್ದ ಕೊಲಂಬಿಯಾ ಇದೀಗ ಮಹತ್ವದ ನಿಲುವನ್ನು ತೆಗೆದುಕೊಂಡಿದ್ದು, ಇಸ್ರೇಲ್‌ನೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಂಡಿದೆ. ಈ ಕುರಿತು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಘೋಷಣೆಯನ್ನು ಮಾಡಿದ್ದಾರೆ.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ಹತ್ಯಾಕಾಂಡವನ್ನು “ಜನಾಂಗೀಯ ಹತ್ಯೆ” ಎಂದು ಬಣ್ಣಿಸಿದೆ. ಕೊಲಂಬಿಯಾ ಇಸ್ರೇಲ್‌ನ ಆಪ್ತ ದೇಶಗಳಲ್ಲೊಂದಾಗಿತ್ತು. ಆದರೆ ಗಾಝಾದ ಮೇಲೆ ಇಸ್ರೇಲ್‌ ನಿರಂತರ ದಾಳಿ ಹಿನ್ನೆಲೆ ಈ ಹಿಂದೆ ಇಸ್ರೇಲ್‌ನಿಂದ ಶಸ್ತ್ರಾಸ್ತ್ರಗಳ ಖರೀದಿಯನ್ನು ಕೊಲಂಬಿಯಾ ಸ್ಥಗಿತಗೊಳಿಸಿತ್ತು ಮತ್ತು ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡವನ್ನು ಜರ್ಮನಿಯ ನಾಝಿ ಕ್ರಮಗಳಿಗೆ ಹೋಲಿಸಿತ್ತು.

ಕೊಲಂಬಿಯಾದ ರಾಜಧಾನಿಯಲ್ಲಿ ನಡೆದ ಅಂತರಾಷ್ಟ್ರೀಯ ಕಾರ್ಮಿಕರ ದಿನದ ಮೆರವಣಿಗೆಯಲ್ಲಿ ಮಾತನಾಡಿದ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ನಾಳೆಯಿಂದ ಕೊಲಂಬಿಯಾ, ನರಹಂತಕ ಅಧ್ಯಕ್ಷರನ್ನು ಹೊಂದಿದ್ದಕ್ಕಾಗಿ ಇಸ್ರೇಲ್ ದೇಶದೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಳ್ಳಲಿದೆ. ಪ್ಯಾಲೆಸ್ತೀನ್‌ ಸತ್ತರೆ, ಮಾನವೀಯತೆಯು ಸಾಯುತ್ತದೆ, ಮತ್ತು ನಾವು ಅದನ್ನು ಸಾಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ನ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಎಕ್ಸ್‌ನಲ್ಲಿ ಪೆಟ್ರೋ ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ. ಶಿಶುಗಳನ್ನು ಸುಟ್ಟುಹಾಕಿದ, ಮಕ್ಕಳನ್ನು ಕೊಂದ, ಮಹಿಳೆಯರನ್ನು ಅತ್ಯಾಚಾರ ಮಾಡಿದ ಮತ್ತು ಅಮಾಯಕ ನಾಗರಿಕರನ್ನು ಅಪಹರಿಸಿದ ಅತ್ಯಂತ ಹೇಯ ರಾಕ್ಷಸರ ಪರವಾಗಿ ನಿಲ್ಲಲು ಗುಸ್ಟಾವೊ ಪೆಟ್ರೋ ನಿರ್ಧರಿಸಿದ್ದಾರೆ ಎಂದು ಇತಿಹಾಸವು ನೆನಪಿಸಿಕೊಳ್ಳುತ್ತದೆ ಎಂದು ಇಸ್ರೇಲ್‌ ನಡೆಸಿದ್ದ ಮಹಾ ಹತ್ಯಾಕಾಂಡವನ್ನು ಸಮರ್ಥಿಸಿ ಇಸ್ರೇಲ್ ಕಾಟ್ಜ್ ಹಮಾಸ್‌ ಕಡೆ ಬೊಟ್ಟು ಮಾಡಿದ್ದಾರೆ.

ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ, ಆ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿದ ಬೆನ್ನಲ್ಲಿ ಇಸ್ರೇಲ್‌ನಿಂದ ಕೊಲಂಬಿಯಾ ತನ್ನ ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿತ್ತು. ಇದಲ್ಲದೆ ಇಸ್ರೇಲ್‌ನ ಮಿಲಿಟರಿ ನಡೆಸುತ್ತಿರುವ ಅಪರಾಧವನ್ನು ಟೀಕಿಸಿತ್ತು.

‘ಕೊಲಂಬಿಯಾ’ ಲ್ಯಾಟಿನ್ ಅಮೇರಿಕಾದಲ್ಲಿ ಇಸ್ರೇಲ್‌ನ ಹತ್ತಿರದ ಪಾಲುದಾರರಲ್ಲಿ ಒಂದಾಗಿದೆ. ಆದರೆ 2022 ರಲ್ಲಿ ಕೊಲಂಬಿಯಾದ ಮೊದಲ ಎಡಪಂಥೀಯ ಅಧ್ಯಕ್ಷರಾಗಿ ಪೆಟ್ರೋ ಆಯ್ಕೆಯಾದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳು ಹದಗೆಟ್ಟಿದೆ. ಬಂಡಾಯ ಗುಂಪುಗಳ ವಿರುದ್ಧ ಹೋರಾಡಲು ಕೊಲಂಬಿಯಾ ಇಸ್ರೇಲ್‌-ನಿರ್ಮಿತ ಯುದ್ಧವಿಮಾನಗಳು ಮತ್ತು ಮೆಷಿನ್ ಗನ್‌ಗಳನ್ನು ಬಳಸುತ್ತದೆ ಮತ್ತು ಎರಡೂ ದೇಶಗಳು 2020ರಲ್ಲಿ ಈ ಬಗ್ಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ.

ಇಸ್ರೇಲ್ ಮತ್ತು ಕೊಲಂಬಿಯಾದ ನಡುವಿನ ಸಂಬಂಧಗಳು ಯಾವಾಗಲೂ ಚೆನ್ನಾಗಿರುತ್ತದೆ ಮತ್ತು ಯಾವುದೇ ಯೆಹೂದ್ಯ ವಿರೋಧಿ ಮತ್ತು ದ್ವೇಷ ತುಂಬಿದ ಅಧ್ಯಕ್ಷರು ಅದನ್ನು ಬದಲಾಯಿಸುವಲ್ಲಿ ಯಶಸ್ವಿಯಾಗುವುದಿಲ್ಲ. ಇಸ್ರೇಲ್ ರಾಜ್ಯವು ತನ್ನ ನಾಗರಿಕರನ್ನು ಚಿಂತೆ ಮತ್ತು ಭಯವಿಲ್ಲದೆ ರಕ್ಷಿಸುವುದನ್ನು ಮುಂದುವರಿಸುತ್ತದೆ ಎಂದು ಕಾಟ್ಜ್ ಹೇಳಿದ್ದಾರೆ.

 ಇದನ್ನು ಓದಿ: ಬಿಆರ್‌ಎಸ್ ಮುಖ್ಯಸ್ಥ ಕೆಸಿಆರ್‌ಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚು.ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...