Homeಮುಖಪುಟದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರು ಹುದ್ದೆಯಿಂದ ವಜಾ!

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರು ಹುದ್ದೆಯಿಂದ ವಜಾ!

- Advertisement -
- Advertisement -

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಹುದ್ದೆಯಿಂದ ವಜಾಗೊಳಿಸಿದ್ದಾರೆ. ಈ ಹಿಂದೆ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದ ಎಎಪಿಯ ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಅವರು ನಿಯಮ ಮೀರಿ ಹೆಚ್ಚುವರಿ ನೌಕರರನ್ನು ನೇಮಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಲೆಫ್ಟಿನೆಂಟ್ ಗವರ್ನರ್ ಕಚೇರಿ ಹೊರಡಿಸಿದ ಆದೇಶದಲ್ಲಿ, ದೆಹಲಿ ಮಹಿಳಾ ಆಯೋಗದ ಕಾಯ್ದೆಯ ಪ್ರಕಾರ, ಆಯೋಗಕ್ಕೆ 40 ಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳಲು ಮಾತ್ರ ಅವಕಾಶವಿದೆ. ಆದರೆ, ಲೆಫ್ಟಿನೆಂಟ್ ಗವರ್ನರ್ ಅವರ ಅನುಮೋದನೆಯಿಲ್ಲದೆ 223 ಹೊಸ ಹುದ್ದೆಗಳನ್ನು ರಚಿಸಲಾಗಿದೆ. ಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುವ ಅಧಿಕಾರ ಆಯೋಗಕ್ಕೆ ಇಲ್ಲ. 2017ರ ಫೆಬ್ರವರಿಯಲ್ಲಿ ಅಂದಿನ ಲೆಫ್ಟಿನೆಂಟ್ ಗವರ್ನರ್‌ಗೆ ಸಲ್ಲಿಸಿದ ತನಿಖಾ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ನಿರ್ದೇಶಕರು ಹೊರಡಿಸಿರುವ ಆದೇಶದಲ್ಲಿ, ನೇಮಕಾತಿಗೂ ಮುನ್ನ ಅಗತ್ಯ ಹುದ್ದೆಗಳ ಮೌಲ್ಯಮಾಪನ ನಡೆಸಿಲ್ಲ. ಹಣಕಾಸು ಇಲಾಖೆಯ ಅನುಮೋದನೆಯಿಲ್ಲದೆ ಸರ್ಕಾರಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಉಂಟುಮಾಡುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಆಯೋಗಕ್ಕೆ ತಿಳಿಸಲಾಗಿದೆ ಎಂದು ಹೇಳಲಾಗಿದೆ.

ನೇಮಕಾತಿಗಳನ್ನು ನಿಗದಿತ ಕಾರ್ಯವಿಧಾನಗಳ ಪ್ರಕಾರ ಮಾಡಿಲ್ಲ. ಆಯೋಗದ ಸಿಬ್ಬಂದಿಗೆ ವೇತನ ಮತ್ತು ಭತ್ಯೆ ನಿಗದಿಪಡಿಸುವಾಗಲೂ ಕಾರ್ಯವಿಧಾನಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯ ಅನುಮೋದನೆ ಪಡೆಯುವಂತೆ ಸ್ವಾತಿ ಮಲಿವಾಲ್ ಅವರಿಗೆ ಪದೇ ಪದೇ ಸಲಹೆ ನೀಡಲಾಗಿತ್ತು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಎಎಪಿ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಪಾದಿತ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧಿತರಾಗಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಎಎಪಿಯಿಂದ ರಾಜ್ಯಸಭೆ ಸದಸ್ಯೆಯಾಗಿ ನಾಮ ನಿರ್ದೇಶನಗೊಳ್ಳುವ ಮುನ್ನ ಒಂಬತ್ತು ವರ್ಷಗಳ ಕಾಲ ಸ್ವಾತಿ ಮಲಿವಾಲ್ ಅವರು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥರಾಗಿದ್ದರು. ಸದ್ಯ ಸಮಿತಿಯ ಅಧ್ಯಕ್ಷರ ಹುದ್ದೆ ಖಾಲಿ ಇದೆ.

ಗವರ್ನರ್ ಕಚೇರಿಯ ಆದೇಶದಲ್ಲಿ ಉಲ್ಲೇಖಿಸಲಾದ ಆರೋಪಗಳಿಗೆ ಸಂಬಂಧಿಸಿದಂತೆ ಎಎಪಿ ಮತ್ತು ಸ್ವಾತಿ ಮಲಿವಾಲ್ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ. ಸಿಬ್ಬಂದಿಯನ್ನು ಹುದ್ದೆಯಿಂದ ವಜಾಗೊಳಿಸುವ ಆದೇಶ ಎಎಪಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ಹೊಸ ತಿಕ್ಕಾಟಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳಿವೆ.

ಲೆಫ್ಟಿನೆಂಟ್ ಗವರ್ನರ್ ಕಚೇರಿಯು ತನ್ನ ಆಡಳಿತದ ಕ್ರಮಗಳನ್ನು ತಡೆಯುತ್ತಿದೆ. ಗವರ್ನರ್ ಕೇಂದ್ರದ ನೇಮಕವಾಗಿದ್ದು, ನಮಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತಿಲ್ಲ ಎಂದು ಎಎಪಿ ಆರೋಪಿಸಿದೆ.

ಇದನ್ನೂ ಓದಿ : ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...