Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿಯ ವಯನಾಡ್‌ ಕ್ಷೇತ್ರದ ಹಿಂದೂ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ...

FACT CHECK : ರಾಹುಲ್ ಗಾಂಧಿಯ ವಯನಾಡ್‌ ಕ್ಷೇತ್ರದ ಹಿಂದೂ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್‌ನ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ದೇವಸ್ಥಾನವೊಂದರಲ್ಲಿ ಕೋಳಿ ಅಂಗಡಿ (ಚಿಕನ್ ಶಾಪ್) ತೆರೆಯಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ವೈರಲ್ ವಿಡಿಯೋದಲ್ಲಿ ದೇವಾಲಯದಂತಹ ಕಟ್ಟಡವೊಂದು ಕಾಣಿಸುತ್ತಿದ್ದು, ವ್ಯಕ್ತಿಯೊಬ್ಬರು ಸ್ನೇಹಿತರೇ ಇದು ಸೀತಾರಾಮ ಮಂದಿರ. ಇದರ ಕೆಳಗಡೆ ಚಿಕನ್ ಅಂಗಡಿ ತೆರೆಯಲಾಗಿದೆ ಎಂದು ಹೇಳುವುದು ಕೇಳಿಸುತ್ತದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋದ ಮೇಲೆ ” ಹಿಂದೂಗಳೇ ಎದ್ದೇಳಿ. ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್ ಕ್ಷೇತ್ರದಲ್ಲಿ ಸೀತಾರಾಮ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ. ಇದನ್ನು ಈ ಹಿಂದೆ ರಾಹುಲ್ ಗಾಂಧಿ ಉದ್ಘಾಟಿಸಿದ್ದರು. ಕಾಂಗ್ರೆಸ್‌ಗೆ ಇಡೀ ದೇಶದಲ್ಲಿ ಬಂದರೆ. ನಮ್ಮ ಎಲ್ಲಾ ಮಂದಿರಗಳನ್ನು ಏನು ಮಾಡಬಹುದು ಎಂದು ಯೋಚಿಸಿ. ಇದಕ್ಕಾಗಿಯೇ ಮುಸ್ಲಿಮರು ಕಾಂಗ್ರೆಸ್ ವೋಟ್ ಹಾಕ್ತಾರೆ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಈ ಕುರಿತು ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಅನೇಕ ಮಾಧ್ಯಮಗಳು ಪಾಕಿಸ್ತಾನದಲ್ಲಿ ದೇವಾಲಯವನ್ನು ಚಿಕನ್ ಶಾಪ್ ಆಗಿ ಪರಿವರ್ತಿಸಲಾಗಿದೆ ಎಂದಿದೆ.

‘Makhan Ram jaipal Vlogs’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ 25 ಆಗಸ್ಟ್ 2023ರಂದು ‘Seeta Ram Mandir Became chicken shop after partition|| Condition of Mandir In Pakistan’ ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ. ಪಾಕಿಸ್ತಾನದಲ್ಲಿ ಬೃಹತ್ ಸೀತಾರಾಮ ಮಂದಿರವೊಂದರಲ್ಲಿ ಚಿಕನ್ ಶಾಪ್ ಸೇರಿದಂತೆ ಇತರ ಹಲವು ಅಂಗಡಿಗಳು ತೆರೆದಿರುವುದನ್ನು ವ್ಲಾಗರ್ ತೋರಿಸಿದ್ದಾರೆ. ವೈರಲ್ ವಿಡಿಯೋದಲ್ಲಿರುವ ಮಂದಿರ ಮತ್ತು ಯೂಟ್ಯೂಬರ್ ತೋರಿಸಿರುವ ಮಂದಿರ ಒಂದೇ ಆಗಿದೆ.

ಯೂಟ್ಯೂಬ್ ವಿಡಿಯೋದಲ್ಲಿ ತೋರಿಸಿರುವ ದೇವಾಲಯವು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝಾಂಗ್ ಜಿಲ್ಲೆಯ ಅಹ್ಮದ್‌ಪುರ ಸಿಯಾಲ್ ಎಂಬ ಪಟ್ಟಣದಲ್ಲಿದೆ. ಆ ಪ್ರದೇಶದ ಸುತ್ತಲೂ ಯಾವುದೇ ಹಿಂದೂಗಳು ವಾಸಿಸುತ್ತಿಲ್ಲ ಎಂದು ತಿಳಿದು ಬಂದಿದೆ.

2023ರ ಡಿಸೆಂಬರ್ 17 ರಂದು ‘ಪಂಜಾಬ್ ಕೇಸರಿ’ಯಲ್ಲಿ ಪ್ರಕಟವಾಗಿದ್ದ ವರದಿಯಲ್ಲಿ, “ಪಾಕಿಸ್ತಾನದ ಅಹ್ಮದ್‌ಪುರ್ ಸಿಯಾಲ್‌ನಲ್ಲಿ ಐತಿಹಾಸಿಕ ಸೀತಾರಾಮ ಮಂದಿರ ಇತ್ತು. ಅದನ್ನು ಹಾಳುಗೆಡವಿ ಚಿಕನ್ ಅಂಗಡಿಯಾಗಿ ಪರಿವರ್ತನೆ ಮಾಡಲಾಗಿದೆ. ಈ ದೇಗುಲವನ್ನು ಶತಮಾನಗಳ ಹಿಂದೆ ನಿರ್ಮಿಸಲಾಗಿತ್ತು. ಇದಕ್ಕೆ ಐತಿಹಾಸಿಕ ಮಾತ್ರವಲ್ಲ, ಸಾಂಸ್ಕೃತಿಕ ಮಹತ್ವವೂ ಇದೆ ಎಂದು ಹೇಳಲಾಗಿದೆ.

ವರದಿ ಲಿಂಕ್ ಇಲ್ಲಿದೆ 

ಈ ದೇವಾಲಯದ ಕುರಿತು, ಪಾಕಿಸ್ತಾನದ ‘ದಿ ಫ್ರೈಡೇ ಟೈಮ್ಸ್ ವೆಬ್‌ಸೈಟ್‌’ನಲ್ಲಿ ಹಲವು ಮಾಹಿತಿಗಳು ಲಭ್ಯವಾಗಿದೆ. ಈ ಲೇಖನವನ್ನು 12 ಮೇ 2017 ರಂದು ಪ್ರಕಟಿಸಲಾಗಿದೆ. ಲೇಖನದ ಪ್ರಕಾರ, ಸೀತಾ ರಾಮ ದೇವಾಲಯವನ್ನು 1887 ರಲ್ಲಿ ನಿರ್ಮಿಸಲಾಯಿತು ಮತ್ತು ಭಾರತದ ವಿಭಜನೆಯ ಮೊದಲು ನಗರದಲ್ಲಿ ಪ್ರಮುಖ ದೇವಾಲಯವಾಗಿತ್ತು. ವಿಭಜನೆಯ ನಂತರ, ದೇವಾಲಯವನ್ನು ಕೈಬಿಡಲಾಯಿತು ಮತ್ತು ದೇವಾಲಯದ ಒಳಗಿದ್ದ ಎಲ್ಲಾ ಬೆಲೆ ಬಾಳುವ ವಸ್ತುಗಳನ್ನು ಸ್ಥಳೀಯರು ಲೂಟಿ ಮಾಡಿದರು ಎಂದು ತಿಳಿದು ಬಂದಿದೆ.

ವರದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಕೇರಳದ ವಯನಾಡ್‌ನಲ್ಲಿ ಸೀತಾರಾಮ ಮಂದಿರವನ್ನು ಚಿಕನ್ ಶಾಪ್ ಆಗಿ ಪರಿವರ್ತಿಸಲಾಗಿದ ಎಂಬ ಸುದ್ದಿ ಸುಳ್ಳು ಎಂಬುವುದು ಗೊತ್ತಾಗಿದೆ. ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಳ್ಳುತ್ತಿರುವ ವಿಡಿಯೋದಲ್ಲಿರುವ ದೇವಸ್ಥಾನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝಾಂಗ್ ಜಿಲ್ಲೆಯ ಅಹ್ಮದ್‌ಪುರ ಸಿಯಾಲ್ ಎಂಬ ಪಟ್ಟಣದಲ್ಲಿದೆ. ಈಗ ಅದರಲ್ಲಿ ಚಿಕನ್ ಸೇರಿದಂತೆ ಇತರ ಅಂಗಡಿಗಳನ್ನು ತೆರೆದಿರುವುದು ನಿಜ.

ಇದನ್ನೂ ಓದಿ : FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...