Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿಯ ವಯನಾಡ್‌ ಕ್ಷೇತ್ರದ ಹಿಂದೂ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ...

FACT CHECK : ರಾಹುಲ್ ಗಾಂಧಿಯ ವಯನಾಡ್‌ ಕ್ಷೇತ್ರದ ಹಿಂದೂ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್‌ನ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ದೇವಸ್ಥಾನವೊಂದರಲ್ಲಿ ಕೋಳಿ ಅಂಗಡಿ (ಚಿಕನ್ ಶಾಪ್) ತೆರೆಯಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ವೈರಲ್ ವಿಡಿಯೋದಲ್ಲಿ ದೇವಾಲಯದಂತಹ ಕಟ್ಟಡವೊಂದು ಕಾಣಿಸುತ್ತಿದ್ದು, ವ್ಯಕ್ತಿಯೊಬ್ಬರು ಸ್ನೇಹಿತರೇ ಇದು ಸೀತಾರಾಮ ಮಂದಿರ. ಇದರ ಕೆಳಗಡೆ ಚಿಕನ್ ಅಂಗಡಿ ತೆರೆಯಲಾಗಿದೆ ಎಂದು ಹೇಳುವುದು ಕೇಳಿಸುತ್ತದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋದ ಮೇಲೆ ” ಹಿಂದೂಗಳೇ ಎದ್ದೇಳಿ. ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್ ಕ್ಷೇತ್ರದಲ್ಲಿ ಸೀತಾರಾಮ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ. ಇದನ್ನು ಈ ಹಿಂದೆ ರಾಹುಲ್ ಗಾಂಧಿ ಉದ್ಘಾಟಿಸಿದ್ದರು. ಕಾಂಗ್ರೆಸ್‌ಗೆ ಇಡೀ ದೇಶದಲ್ಲಿ ಬಂದರೆ. ನಮ್ಮ ಎಲ್ಲಾ ಮಂದಿರಗಳನ್ನು ಏನು ಮಾಡಬಹುದು ಎಂದು ಯೋಚಿಸಿ. ಇದಕ್ಕಾಗಿಯೇ ಮುಸ್ಲಿಮರು ಕಾಂಗ್ರೆಸ್ ವೋಟ್ ಹಾಕ್ತಾರೆ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಈ ಕುರಿತು ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಅನೇಕ ಮಾಧ್ಯಮಗಳು ಪಾಕಿಸ್ತಾನದಲ್ಲಿ ದೇವಾಲಯವನ್ನು ಚಿಕನ್ ಶಾಪ್ ಆಗಿ ಪರಿವರ್ತಿಸಲಾಗಿದೆ ಎಂದಿದೆ.

‘Makhan Ram jaipal Vlogs’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ 25 ಆಗಸ್ಟ್ 2023ರಂದು ‘Seeta Ram Mandir Became chicken shop after partition|| Condition of Mandir In Pakistan’ ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ. ಪಾಕಿಸ್ತಾನದಲ್ಲಿ ಬೃಹತ್ ಸೀತಾರಾಮ ಮಂದಿರವೊಂದರಲ್ಲಿ ಚಿಕನ್ ಶಾಪ್ ಸೇರಿದಂತೆ ಇತರ ಹಲವು ಅಂಗಡಿಗಳು ತೆರೆದಿರುವುದನ್ನು ವ್ಲಾಗರ್ ತೋರಿಸಿದ್ದಾರೆ. ವೈರಲ್ ವಿಡಿಯೋದಲ್ಲಿರುವ ಮಂದಿರ ಮತ್ತು ಯೂಟ್ಯೂಬರ್ ತೋರಿಸಿರುವ ಮಂದಿರ ಒಂದೇ ಆಗಿದೆ.

ಯೂಟ್ಯೂಬ್ ವಿಡಿಯೋದಲ್ಲಿ ತೋರಿಸಿರುವ ದೇವಾಲಯವು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝಾಂಗ್ ಜಿಲ್ಲೆಯ ಅಹ್ಮದ್‌ಪುರ ಸಿಯಾಲ್ ಎಂಬ ಪಟ್ಟಣದಲ್ಲಿದೆ. ಆ ಪ್ರದೇಶದ ಸುತ್ತಲೂ ಯಾವುದೇ ಹಿಂದೂಗಳು ವಾಸಿಸುತ್ತಿಲ್ಲ ಎಂದು ತಿಳಿದು ಬಂದಿದೆ.

2023ರ ಡಿಸೆಂಬರ್ 17 ರಂದು ‘ಪಂಜಾಬ್ ಕೇಸರಿ’ಯಲ್ಲಿ ಪ್ರಕಟವಾಗಿದ್ದ ವರದಿಯಲ್ಲಿ, “ಪಾಕಿಸ್ತಾನದ ಅಹ್ಮದ್‌ಪುರ್ ಸಿಯಾಲ್‌ನಲ್ಲಿ ಐತಿಹಾಸಿಕ ಸೀತಾರಾಮ ಮಂದಿರ ಇತ್ತು. ಅದನ್ನು ಹಾಳುಗೆಡವಿ ಚಿಕನ್ ಅಂಗಡಿಯಾಗಿ ಪರಿವರ್ತನೆ ಮಾಡಲಾಗಿದೆ. ಈ ದೇಗುಲವನ್ನು ಶತಮಾನಗಳ ಹಿಂದೆ ನಿರ್ಮಿಸಲಾಗಿತ್ತು. ಇದಕ್ಕೆ ಐತಿಹಾಸಿಕ ಮಾತ್ರವಲ್ಲ, ಸಾಂಸ್ಕೃತಿಕ ಮಹತ್ವವೂ ಇದೆ ಎಂದು ಹೇಳಲಾಗಿದೆ.

ವರದಿ ಲಿಂಕ್ ಇಲ್ಲಿದೆ 

ಈ ದೇವಾಲಯದ ಕುರಿತು, ಪಾಕಿಸ್ತಾನದ ‘ದಿ ಫ್ರೈಡೇ ಟೈಮ್ಸ್ ವೆಬ್‌ಸೈಟ್‌’ನಲ್ಲಿ ಹಲವು ಮಾಹಿತಿಗಳು ಲಭ್ಯವಾಗಿದೆ. ಈ ಲೇಖನವನ್ನು 12 ಮೇ 2017 ರಂದು ಪ್ರಕಟಿಸಲಾಗಿದೆ. ಲೇಖನದ ಪ್ರಕಾರ, ಸೀತಾ ರಾಮ ದೇವಾಲಯವನ್ನು 1887 ರಲ್ಲಿ ನಿರ್ಮಿಸಲಾಯಿತು ಮತ್ತು ಭಾರತದ ವಿಭಜನೆಯ ಮೊದಲು ನಗರದಲ್ಲಿ ಪ್ರಮುಖ ದೇವಾಲಯವಾಗಿತ್ತು. ವಿಭಜನೆಯ ನಂತರ, ದೇವಾಲಯವನ್ನು ಕೈಬಿಡಲಾಯಿತು ಮತ್ತು ದೇವಾಲಯದ ಒಳಗಿದ್ದ ಎಲ್ಲಾ ಬೆಲೆ ಬಾಳುವ ವಸ್ತುಗಳನ್ನು ಸ್ಥಳೀಯರು ಲೂಟಿ ಮಾಡಿದರು ಎಂದು ತಿಳಿದು ಬಂದಿದೆ.

ವರದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಕೇರಳದ ವಯನಾಡ್‌ನಲ್ಲಿ ಸೀತಾರಾಮ ಮಂದಿರವನ್ನು ಚಿಕನ್ ಶಾಪ್ ಆಗಿ ಪರಿವರ್ತಿಸಲಾಗಿದ ಎಂಬ ಸುದ್ದಿ ಸುಳ್ಳು ಎಂಬುವುದು ಗೊತ್ತಾಗಿದೆ. ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಳ್ಳುತ್ತಿರುವ ವಿಡಿಯೋದಲ್ಲಿರುವ ದೇವಸ್ಥಾನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝಾಂಗ್ ಜಿಲ್ಲೆಯ ಅಹ್ಮದ್‌ಪುರ ಸಿಯಾಲ್ ಎಂಬ ಪಟ್ಟಣದಲ್ಲಿದೆ. ಈಗ ಅದರಲ್ಲಿ ಚಿಕನ್ ಸೇರಿದಂತೆ ಇತರ ಅಂಗಡಿಗಳನ್ನು ತೆರೆದಿರುವುದು ನಿಜ.

ಇದನ್ನೂ ಓದಿ : FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...