Homeಮುಖಪುಟಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ ಟ್ರೋಲ್ ಆದ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು: ಕ್ಷಮಿಸುವಂತೆ ಮನವಿ

ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ ಟ್ರೋಲ್ ಆದ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು: ಕ್ಷಮಿಸುವಂತೆ ಮನವಿ

- Advertisement -
- Advertisement -

ಕಾಂಗ್ರೆಸ್ ವಿರುದ್ದ ಪ್ರತಿಭಟಿಸುವ ಮೂಲಕ ಉತ್ತರ ಪ್ರದೇಶದ ಗಾಲ್ಗೋಟಿಯಾಸ್ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ನಿನ್ನೆಯಿಂದ (ಮೇ 1) ಭಾರೀ ಸುದ್ದಿಯಲ್ಲಿದ್ದಾರೆ.

ಕಾಂಗ್ರೆಸ್‌ ವಿರುದ್ದ ಹಲವು ಆರೋಪಗಳನ್ನು ಹೊರಿಸಿ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪಿತ್ರಾರ್ಜಿತ ಆಸ್ತಿ ತೆರಿಗೆ (Inheritance tax), ನಗರ ನಕ್ಸಲರು (Urban Naxalism) ಇತ್ಯಾದಿ ಭಿತ್ತಿ ಪತ್ರಗಳನ್ನು ಹಿಡಿದು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಸಾಗುತ್ತಿದ್ದರು. ಈ ವೇಳೆ ಆಜ್‌ತಕ್ ಸುದ್ದಿ ವಾಹಿನಿಯ ವರದಿಗಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಮಾತನಾಡಿಸಿದ್ದಾರೆ.

ವರದಿಗಾರ “ನೀವು ಏಕೆ, ಪ್ರತಿಭಟಿಸುತ್ತಿದ್ದೀರಿ?” ಎಂದು ಕೇಳಿದ್ದಕ್ಕೆ, ಕೆಲ ವಿದ್ಯಾರ್ಥಿಗಳು “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆ ಮಾಡಲಿದೆ, ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಗೆ ತರಲಿದೆ” ಎಂದಿದ್ದಾರೆ. “ಪಿತ್ರಾರ್ಜಿತ ಆಸ್ತಿ ತೆರಿಗೆ ಎಂದರೇನು?” ಎಂದು ವರದಿಗಾರ ಕೇಳಿದ್ದಕ್ಕೆ ವಿದ್ಯಾರ್ಥಿಗಳು ಉತ್ತರಿಸಲು ತಡವರಿಸಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳು ತಾವು ಹಿಡಿದಿದ್ದ ಭಿತ್ತಿ ಪತ್ರವನ್ನು ಸರಿಯಾಗಿ ಓದಲು ವಿಫಲರಾಗಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ, ವಿದ್ಯಾರ್ಥಿಗಳಿಗೆ ತಾವು ಏಕೆ ಪ್ರತಿಭಟಿಸುತ್ತೀದ್ದೇವೆ ಎಂದೇ ಗೊತ್ತಿರಲಿಲ್ಲ.

ಆಜ್‌ತಕ್‌ ವರದಿ ಪ್ರಸಾರಗೊಂಡ ತಕ್ಷಣ ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋ ಭಾರೀ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕರು ಸೇರಿದಂತೆ ಸಾವಿರಾರು ಜನರು ವಿಡಿಯೋ ಹಂಚಿಕೊಂಡು, “ಈ ವಿದ್ಯಾರ್ಥಿಗಳು ಮೋದಿಯ ವಾಟ್ಸಾಪ್ ಯೂನಿವರ್ಸಿಟಿಯವರು” ಎಂದು ಟ್ರೋಲ್ ಮಾಡಿದ್ದಾರೆ. ಎಕ್ಸ್‌ನಲ್ಲಿ ‘ಗಾಲ್ಗೋಟಿಯಾಸ್ ಯೂನಿವರ್ಸಿಟಿ’ ಟ್ರೆಡಿಂಗ್ ಆಗಿದೆ.

ಕ್ಷಮಿಸುವಂತೆ ಮನವಿ ಮಾಡಿದ ವಿದ್ಯಾರ್ಥಿಗಳು :

ತಮ್ಮ ವಿಡಿಯೋ ದೇಶದಾದ್ಯಂತ ವೈರಲ್ ಆಗುತ್ತಿದ್ದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಹೊರಗಡೆ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಕ್ಷಮೆ ಕೇಳಿದ್ದು, ಪ್ರತಿಭಟನೆಯ ಹಿಂದಿನ ಸತ್ಯ ಬಿಚ್ಚಿಟ್ಟಿದ್ದಾರೆ.

ಲಕ್ಷೀ ಶರ್ಮಾ ಎಂಬ ವಿದ್ಯಾರ್ಥಿನಿ ಎಕ್ಸ್‌ ಮೂಲಕ ಪ್ರತಿಕ್ರಿಯಿಸಿ ” ನಮ್ಮ ತಪ್ಪುಗಳು ನಮಗೆ ಅರಿವಾಗಿದೆ. ನಮಗೆ ಅದು ಪ್ರೊಪಗೊಂಡ ಕಾರ್ಯಕ್ರಮ ಎಂದು ಗೊತ್ತಿರಲಿಲ್ಲ. ಕಂಗನಾ ರಣಾವತ್ ಅವರನ್ನು ಭೇಟಿಯಾಗುವ ಅವಕಾಶ ಸಿಗಲಿದೆ ಎಂದು ನಮಗೆ ಹೇಳಲಾಗಿತ್ತು. ವಿದ್ಯಾರ್ಥಿ ಪರಿಷತ್ತಿನ ಪರವಾಗಿ ನಾನು ಎಲ್ಲರಲ್ಲಿ ಕ್ಷಮೆಯಾಚಿಸುತ್ತೇನೆ. ವಿಶ್ವವಿದ್ಯಾನಿಲಯದ ಆಡಳಿತ ಪ್ರತಿಭಟನೆಗೆ ತೆರಳಲು ನಮ್ಮನ್ನು ಒತ್ತಾಯಿಸಿತ್ತು. ಭಿತ್ತಿ ಪತ್ರಗಳನ್ನೂ ಅವರೇ ನೀಡಿದ್ದು” ಎಂದಿದ್ದಾರೆ.

“ಪ್ರತಿಭಟನೆಯಲ್ಲಿ ಉತ್ತಮ ಮುದ್ರಿತ ಪೋಸ್ಟರ್‌ ಬಳಸಲು ನಮ್ಮ ಬಳಿ ಹಣ ಇರಲಿಲ್ಲ. ಹಾಗಾಗಿ, ಚಾರ್ಟ್ ಪೇಪರ್‌ನಲ್ಲಿ ಭಿತ್ತಿ ಪತ್ರಗಳನ್ನು ಕೈಯಿಂದ ಬರೆದಿದ್ದೆವು. ಅವುಗಳ ಎಲ್ಲಾ ವಿಡಿಯೋಗಳನ್ನು ಇನ್‌ಸ್ಟಾ ಹ್ಯಾಂಡಲ್‌ನಿಂದ ತೆಗೆಸಲಾಗಿದೆ. ಐಎಎಸ್ ಆಗಬೇಕೆಂಬುದು ನನ್ನ ಕನಸು. ನಾವು ಯಾವುದೇ ರಾಜಕೀಯದಲ್ಲಿ ಇಲ್ಲ. ಆಂತರಿಕ ಪರೀಕ್ಷೆಯಲ್ಲಿ ಅಂಕ ನೀಡುವುದಾಗಿ ವಿವಿ ಆಡಳಿತ ನಮಗೆ ಭರವಸೆ ನೀಡಿತ್ತು” ಎಂದು ವಿದ್ಯಾರ್ಥಿನಿ ಸತ್ಯ ಬಹಿರಂಗಪಡಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಒಂದೆಡೆ ಟ್ರೋಲ್ ಆಗುತ್ತಿದ್ದರೆ, ಮತ್ತೊಂದೆಡೆ ಗಾಲ್ಗೋಟಿಯಾಸ್ ವಿವಿ ಕಾಲೇಜಿನ ಸಿಇಒ ಎನ್ನಲಾದ ಧ್ರುವ್ ಗಾಲ್ಗೋಟಿಯಾ ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, “ಗಾಲ್ಗೋಟಿಯಾಸ್ ವಿವಿಯ ವಿದ್ಯಾರ್ಥಿಗಳು ಧೈರ್ಯವಾಗಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾರೆ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಧ್ರವ್ ಅವರ ಪೋಸ್ಟನ್ನು ಉಲ್ಲೇಖಿಸಿ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. “ಗಾಲ್ಗೋಟಿಯಾಸ್ ಕಾಲೇಜಿನ ಸಿಇಒ ಧ್ರುವ ಗಾಲ್ಗೋಟಿಯಾ ಅವರು ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ (ವಿದ್ಯಾರ್ಥಿಗಳಿಗೆ) ಹಿಂದಿ. ಇಂಗ್ಲಿಷ್ ಕೂಡ ಓದಲು ಬರುವುದಿಲ್ಲ. ಆದರೆ, ವಿದ್ಯಾರ್ಥಿಗಳು ಧೈರ್ಯವಾಗಿ ಮಾತನಾಡುತ್ತಿದ್ದಾರೆ ಎಂದು ಸಿಇಒ ಬರೆದಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ, ಅವರನ್ನೇ ಹೊಣೆಗಾರರನ್ನಾಗಿಸಬೇಕು ಮತ್ತು ಅವರು ತಮ್ಮ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಏನು ಮಾಡುತ್ತಿದ್ದಾರೆ? ಅವೆಲ್ಲವೂ ವಾಟ್ಸಾಪ್‌ ಯೂನಿವರ್ಸಿಟಿ ಉತ್ಪನ್ನಗಳಾಗಿವೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...