Homeಮುಖಪುಟಘೋರ ಅಪರಾಧದ ಆರೋಪದ ಹೊರತು ಜಾಮೀನು ರಹಿತ ವಾರಂಟ್‌ ಹೊರಡಿಸಬಾರದು: ಸುಪ್ರೀಂ ಕೋರ್ಟ್‌

ಘೋರ ಅಪರಾಧದ ಆರೋಪದ ಹೊರತು ಜಾಮೀನು ರಹಿತ ವಾರಂಟ್‌ ಹೊರಡಿಸಬಾರದು: ಸುಪ್ರೀಂ ಕೋರ್ಟ್‌

- Advertisement -
- Advertisement -

ಜಾಮೀನು ರಹಿತ ವಾರಂಟ್‌ಗಳನ್ನು ನೀಡುವುದನ್ನು ವಾಡಿಕೆಯಾಗಿರಿಸಿರುವ ಬಗ್ಗೆ ಮೇ 1ರಂದು ನೀಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಆರೋಪಿಯ ಮೇಲೆ ಘೋರ ಅಪರಾಧದ ಆರೋಪ ಹೊರಿಸದ ಹೊರತು ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಬಾರದು ಮತ್ತು ಕಾನೂನಿನ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಅಥವಾ ಸಾಕ್ಷ್ಯವನ್ನು ನಾಶಪಡಿಸುವ ಸಾಧ್ಯತೆಯಿದೆ ಎಂದಾದರೆ ಮಾತ್ರ ಜಾಮೀನು ರಹಿತ ವಾರಂಟ್‌ಗಳನ್ನು ನೀಡಬೇಕು ಎಂದು ಹೇಳಿದೆ.

ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಲು ಯಾವುದೇ ಸಮಗ್ರ ಮಾರ್ಗಸೂಚಿಗಳಿಲ್ಲದಿದ್ದರೂ,  ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಬಾರದು ಎಂದು ಈ ನ್ಯಾಯಾಲಯವು ಹಲವಾರು ಸಂದರ್ಭಗಳಲ್ಲಿ ಗಮನಿಸಿದೆ. ಆರೋಪಿಯ ಮೇಲೆ ಘೋರ ಅಪರಾಧದ ಆರೋಪ ಹೊರಿಸದ ಹೊರತು ಜಾಮೀನು ರಹಿತ ವಾರಂಟ್‌ಗಳನ್ನು ನೀಡಬಾರದು ಮತ್ತು ಕಾನೂನಿನ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ, ಪುರಾವೆ ನಾಶಪಡಿಸುವ ಸಾಧ್ಯತೆ ಇದೆ ಎಂದು ನ್ಯಾಯಾಲಯವು ಗಮನಿಸಿದ್ದಲ್ಲಿ ಮಾತ್ರ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠ ಹೇಳಿದೆ.

ಜಾಮೀನು ನೀಡಬಹುದಾದ ವಾರಂಟ್ ಜಾರಿ ಮಾಡಿದರೂ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗದಿದ್ದರೆ ವಿಚಾರಣಾ ನ್ಯಾಯಾಲಯವು ಆರೋಪಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಬಹದು.

ಮೇಲ್ಮನವಿದಾರರ ವಿರುದ್ಧ ಐಪಿಸಿಯ 323, 504, 506, 120ಬಿ, 308 ಮತ್ತು 325ರ ಅಡಿಯಲ್ಲಿ ಅಪರಾಧಗಳನ್ನು ಒಳಗೊಂಡಿರುವ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಹೈಕೋರ್ಟ್‌ನ ಆದೇಶಗಳನ್ನು ರದ್ದುಗೊಳಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಬರೆದಿರುವ ತೀರ್ಪು, ಮೇಲ್ಮನವಿದಾರರ ವಿರುದ್ಧ ಹೊರಡಿಸಲಾದ ಜಾಮೀನು ರಹಿತ ವಾರಂಟ್‌ಗಳು ಸಮರ್ಥನೀಯವಲ್ಲ ಮತ್ತು ಅದನ್ನು ರದ್ದುಗೊಳಿಸಬೇಕು ಎಂದು ಹೇಳಿದೆ.

ಜಾಮೀನು ರಹಿತ ವಾರಂಟ್‌ಗಳನ್ನು ಪದೇ ಪದೇ  ಹೊರಡಿಸಲಾಗುವುದಿಲ್ಲ ಮತ್ತು ಸಾರ್ವಜನಿಕ ಮತ್ತು ರಾಜ್ಯದ ಹೆಚ್ಚಿನ ಹಿತಾಸಕ್ತಿಯ ಅಗತ್ಯದ ಹೊರತು ವ್ಯಕ್ತಿಯ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗುವುದಿಲ್ಲ ಎಂಬುದು ಕಾನೂನಿನ ಸ್ಥಿರವಾದ ನಿಲುವು ಎಂದು ನ್ಯಾಯಾಲಯ ಹೇಳಿದೆ.

ಇದನ್ನು ಓದಿ: ‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...