Homeಮುಖಪುಟಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

- Advertisement -
- Advertisement -

ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರಗಳಾಗಿ ಗುರುತಿಸುವ ಮೂಲಕ ಸಂಘರ್ಷ ಕೊನೆಗೊಳಿಸಬೇಕೆಂಬ ತನ್ನ ದೀರ್ಘ ಕಾಲದ ನಿಲುವನ್ನು ಭಾರತ ಪುನರುಚ್ಚರಿಸಿದೆ.

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ನೀಡಲು ಅನುಮತಿಸಲು ಮತದಾನ ನಡೆಸುವಂತೆ ಶಿಫಾರಸು ಮಾಡುವ ಕರಡು ನಿರ್ಣಯವನ್ನು ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಏಪ್ರಿಲ್‌ 18ರಂದು ತಡೆದಿತ್ತು.

ನಿರ್ಣಯದ ಪರವಾಗಿ 12 ಮತಗಳು ಬಿದ್ದಿತ್ತು. ಸ್ವಿಟ್ಜರ್ಲೆಂಡ್ ಮತ್ತು ಯುನೈಟೆಡ್ ಕಿಂಗ್‌ಡಮ್ (ಯುಕೆ) ಮತದಾನದಿಂದ ದೂರ ಉಳಿದಿತ್ತು. ನಿರ್ಣಯದ ಪರವಾಗಿ ಒಂಬತ್ತು ಮತಗಳ ಅಗತ್ಯವಿತ್ತು. ವಿಶ್ವ ಸಂಸ್ಥೆಯ ಖಾಯಂ ಸದಸ್ಯರಾದ ಚೀನಾ, ಫ್ರಾನ್ಸ್, ರಷ್ಯಾ, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ ವೀಟೋ ಪ್ರಯೋಗಿಸಿರಲಿಲ್ಲ.

ಪ್ಯಾಲೆಸ್ತೀನ್ ಪ್ರಸ್ತುತ ವಿಶ್ವಸಂಸ್ಥೆಯಲ್ಲಿ “ಶಾಶ್ವತ ವೀಕ್ಷಕ” ಸ್ಥಾನಮಾನವನ್ನು ಹೊಂದಿದೆ. ಇದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಭೆಗಳಲ್ಲಿ ಮಾತನಾಡಲು ಅವಕಾಶ ನೀಡುತ್ತದೆ. ಆದರೆ, ನಿರ್ಣಯಗಳ ಮೇಲೆ ಮತ ಚಲಾಯಿಸಲು ಅವಕಾಶವಿಲ್ಲ.

ಬುಧವಾರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ “ವಿಶ್ವಸಂಸ್ಥೆಯಲ್ಲಿ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್‌ನ ಅರ್ಜಿಯನ್ನು ಭದ್ರತಾ ಮಂಡಳಿಯು ಮೇಲಿನ ವೀಟೋ ಕಾರಣದಿಂದ ಅನುಮೋದಿಸಲಿಲ್ಲ ಎಂದು ನಾವು ಗಮನಿಸಿದ್ದೇವೆ. ಪೂರ್ಣ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್ ಮಾಡಿರುವ ಮನವಿಯನ್ನು ಪರಿಶೀಲಿಸಿ ಅನುಮೋದಿಸುವ ಭರವಸೆ ನಮಗಿದೆ” ಎಂದಿದ್ದಾರೆ.

“ಕಳೆದ ಆರು ತಿಂಗಳಿನಿಂದ ಗಾಝಾ ಮೇಲೆ ದಾಳಿ ನಡೆಯುತ್ತಿದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ನಾಗರಿಕರು ಜೀವ ಕಳೆದುಕೊಂಡಿದ್ದಾರೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಬಲಿಯಾಗಿದ್ದಾರೆ. ಇದು ಸ್ವೀಕಾರ್ಹವಲ್ಲ” ಎಂದು ರುಚಿರಾ ಕಾಂಬೋಜ್ ಹೇಳಿದ್ದಾರೆ.

“ಅಂತಾರಾಷ್ಟ್ರೀಯ ಮಾನವೀಯ ಕಾನೂನುಗಳನ್ನು ಎಲ್ಲಾ ಸಂದರ್ಭಗಳಲ್ಲಿಯೂ, ಎಲ್ಲರೂ ಗೌರವಿಸಬೇಕು” ಎಂದು ರುಚಿರಾ ಹೇಳಿದ್ದು, ಆಕ್ಟೋಬರ್ 7, 2023ರಂದು ಇಸ್ರೇಲ್ ಮೇಲೆ ಹಮಾಸ್ ಗುಂಪು ನಡೆಸಿದ ದಾಳಿಯನ್ನು ಖಂಡಿಸಿದ್ದಾರೆ. ಆದರೆ, ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಾರಣಹೋಮದ ಬಗ್ಗೆ ಅವರು ಚಕಾರವೆತ್ತಿಲ್ಲ.

ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ಎರಡು ದೇಶಗಳ ಜನರು ಸುರಕ್ಷಿತವಾಗಿ ಮತ್ತು ಸ್ವತಂತ್ರವಾಗಿ ಬದುಕಲು ಸಾಧ್ಯವಾಗುವಂತಹ ದ್ವಿರಾಷ್ಟ್ರ ಸೂತ್ರವನ್ನು ಬೆಂಬಲಿಸುವುದಾಗಿ ರುಚಿರಾ ಕಾಂಬೋಜ್ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ : ಘೋರ ಅಪರಾಧದ ಆರೋಪದ ಹೊರತು ಜಾಮೀನು ರಹಿತ ವಾರಂಟ್‌ ಹೊರಡಿಸಬಾರದು: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...