Homeಮುಖಪುಟರೋಹಿತ್ ವೇಮುಲಾ 'ಪರಿಶಿಷ್ಟ ಜಾತಿ'ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ.

2016ರ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಮುಕ್ತಾಯದ (ಫೈಲ್ ಕ್ಲೋಸ್) ವರದಿಯನ್ನು ಸಲ್ಲಿಸಿದ್ದು, ಆಗಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್ ಮತ್ತು ಉಪಕುಲಪತಿ ಅಪ್ಪಾ ರಾವ್, ಎಬಿವಿಪಿ ಮುಖಂಡರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಕ್ಲೀನ್‌ ಚಿಟ್‌ ನೀಡಿದೆ.

ಮೇ 3ರಂದು ತೆಲಂಗಾಣ ಹೈಕೋರ್ಟ್‌ಗೆ ಈ ಕುರಿತು ವರದಿ ಸಲ್ಲಿಕೆ ನಡೆಯಲಿದೆ. ವರದಿಯು ರೋಹಿತ್ ‘ಪರಿಶಿಷ್ಟ ಜಾತಿಗೆ ಸೇರಿದವನಲ್ಲ’ ಎಂದು ಹೇಳಿದೆ ಮತ್ತು ತನ್ನ “ನಿಜವಾದ ಜಾತಿಯ ಗುರುತು” ಪತ್ತೆಯಾಗುತ್ತದೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಊಹಿಸಲಾಗಿದೆ ಎಂದು ಹೇಳಲಾಗಿದೆ. ಆತನ ಕುಟುಂಬದ ಜಾತಿ ಪ್ರಮಾಣಪತ್ರಗಳನ್ನು ಯಾವುದೇ ಸಾಕ್ಷ್ಯವನ್ನು ನೀಡದೆ ನಕಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಅಚ್ಚರಿ ಎಂದರೆ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಾಲ್ಕು ತಿಂಗಳ ಬಳಿಕ ಈ ವರದಿ ಬಂದಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಮೇ 13ರಂದು ತೆಲಂಗಾಣ ಮತದಾನಕ್ಕೆ ಸಿದ್ದವಾಗುತ್ತಿದ್ದು, ಮತದಾನಕ್ಕೆ ಕೇವಲ 10 ದಿನಗಳ ಮೊದಲು ವರದಿಯನ್ನು ಬಿಡುಗಡೆ ಮಾಡಲಾಗಿದೆ. 2016ರಲ್ಲಿ ‘ಜಸ್ಟೀಸ್ ಫಾರ್ ವೇಮುಲಾ ಅಭಿಯಾನ’ಕ್ಕೆ ಕಾಂಗ್ರೆಸ್ ಬೆಂಬಲ ನೀಡಿತ್ತು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರೋಹಿತ್ ವೇಮುಲಾ ಆಕ್ಟ್ ಎಂಬ ಕಾನೂನನ್ನು ರಚಿಸುವುದಾಗಿ ಭರವಸೆ ನೀಡಿದ್ದರು. ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳು (ಎಸ್‌ಟಿ), ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಅಲ್ಪಸಂಖ್ಯಾತರಿಗೆ “ಶಿಕ್ಷಣ ಮತ್ತು ಘನತೆಯ ಹಕ್ಕನ್ನು ಕಾಪಾಡಲು” ಜಾರಿಗೊಳಿಸುವುದಾಗಿ ಹೇಳಿದ್ದರು. ಇತ್ತೀಚಿನ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಅವರು ರೋಹಿತ್ ಅವರ ತಾಯಿ ರಾಧಿಕಾ ವೇಮುಲಾ ಅವರನ್ನು ಕಾಂಗ್ರೆಸ್ ಸೇರಲು ಆಹ್ವಾನಿಸಿದ್ದರು.

ತೆಲಂಗಾಣ ಕಾಂಗ್ರೆಸ್ ಅಥವಾ ಕೇಂದ್ರದ ನಾಯಕರು ಪ್ರಕರಣವನ್ನು ಮುಚ್ಚುವ ವರದಿಗೆ ಸಂಬಂಧಿಸಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಎಸ್‌ಎ) ಮುಖಂಡರು ಮತ್ತು ರೋಹಿತ್ ವೇಮುಲಾ ಅವರ ತಾಯಿ ರಾಧಿಕಾ ಸೇರಿದಂತೆ ಅವರ ಸಂಬಂಧಿಕರನ್ನು ಸಂಪರ್ಕಿಸಿದಾಗ ಶುಕ್ರವಾರ ನ್ಯಾಯಾಲಯದ ವಿಚಾರಣೆಯವರೆಗೂ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ಪ್ರಾಥಮಿಕವಾಗಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು SC/ST ದೌರ್ಜನ್ಯ ತಡೆ (POA) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಿಸಲಾಗಿದೆ, ಮುಚ್ಚುವಿಕೆಯ ವರದಿಯು ವೇಮುಲನ ಜಾತಿಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತದೆಯೇ ಹೊರತು ಆತ್ಮಹತ್ಯೆಗೆ ಕಾರಣಗಳಲ್ಲ, ಅವರ ಆತ್ಮಹತ್ಯೆಗೆ ಯಾರೂ ಕಾರಣರಾಗಿರುವ ಬಗ್ಗೆ ಪುರವೆಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವರದಿಯು ರೋಹಿತ್‌, ತಾನು ಪರಿಶಿಷ್ಟ ಜಾತಿಗೆ ಸೇರಿದವನಲ್ಲ ಎಂದು ತಿಳಿದಿದ್ದನು ಮತ್ತು ಅವನ ತಾಯಿ ಅವನಿಗೆ ಎಸ್‌ಸಿ ಪ್ರಮಾಣಪತ್ರವನ್ನು ಪಡೆದಿದ್ದರು ಎಂದು ಹೇಳುತ್ತದೆ. ಇದು ರೋಹಿತ್‌ನಲ್ಲಿ ನಿರಂತರವಾಗಿದ್ದ ಭಯದಲ್ಲಿ ಒಂದಾಗಿರಬಹುದು, ಏಕೆಂದರೆ ಇದು ಬಹಿರಂಗಗೊಂಡರೆ ಆತ ಕಾನೂನು ಕ್ರಮ ಎದುರಿಸುವ ಭೀತಿಯಲ್ಲಿದ್ದ ಎಂದು ಉಲ್ಲೇಖಿಸಲಾಗಿದೆ.

ರಾಧಿಕಾ ವೇಮುಲಾ ಅವರು ಎಸ್‌ಸಿ ಮಾಲಾ ಜಾತಿಗೆ ಸೇರಿದವರು ಮತ್ತು ತಮ್ಮ ಬಾಲ್ಯದಿಂದಲೂ ವಡ್ಡರ ಒಬಿಸಿ ಕುಟುಂಬದಲ್ಲಿ ಮನೆ ಸಹಾಯಕರಾಗಿ ಬೆಳೆದರು. ರೋಹಿತ್ ಅವರ ತಂದೆ ಮಣಿಕುಮಾರ್ ಕೂಡ ವಡ್ಡರ ಸಮುದಾಯಕ್ಕೆ ಸೇರಿದವರಾಗಿದ್ದರು.

ವರದಿಯ ಪ್ರಕಾರ, ರೋಹಿತ್ ಸ್ವಯಂ ಸಮಸ್ಯೆಗಳನ್ನು ಹೊಂದಿದ್ದ ಎಂದು ಹೇಳಲಾಗಿದೆ. ರೋಹಿತ್‌ ಅತ್ಯುತ್ತಮ ಶೈಕ್ಷಣಿಕ ಸಾಧನೆಯ ಹೊರತಾಗಿಯೂ, ಅಧ್ಯಯನಕ್ಕಿಂತ ಕ್ಯಾಂಪಸ್‌ನಲ್ಲಿ ರಾಜಕೀಯ ವಿಷಯಗಳಲ್ಲಿ ಹೆಚ್ಚು ತೊಡಗಿಸಿಕೊಂಡಿರುವಂತೆ ತೋರುತ್ತಿದೆ ಎಂದು ಹೇಳಿದೆ. ವಿಶ್ವವಿದ್ಯಾಲಯದ ನಿರ್ಧಾರದಿಂದ ಅವರು ಕೋಪಗೊಂಡಿದ್ದರೆ, ಅವರು ಖಂಡಿತವಾಗಿಯೂ ನಿರ್ದಿಷ್ಟ ಪದಗಳಲ್ಲಿ ಬರೆಯುತ್ತಿದ್ದರು. ಆದರೆ ಅವರು ಹಾಗೆ ಮಾಡಲಿಲ್ಲ. ರೋಹಿತ್ ಸಾವಿಗೆ ಆ ಸಮಯದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಚಾಲ್ತಿಯಲ್ಲಿರುವ ಸನ್ನಿವೇಶಗಳು ಕಾರಣವಲ್ಲ ಎಂದು ಎಂದು ವರದಿಯಲ್ಲಿ ಹೇಳಲಾಗಿದೆ.

ರೋಹಿತ್ ಅವರ ತಾಯಿ ರಾಧಿಕಾ ವೇಮುಲಾ ಅವರನ್ನು ವಿಚಾರಣೆ ನಡೆಸುವಾಗ ತನಿಖಾ ಅಧಿಕಾರಿ (ಐಒ)  ಜಾತಿಯ ಬಗ್ಗೆ ನಿರ್ಧರಿಸಲು ಕುಟುಂಬದ ಸದಸ್ಯರ ಮಾದರಿಗಳೊಂದಿಗೆ ಡಿಎನ್‌ಎ ಪರೀಕ್ಷೆಗೆ ಒಳಗಾಗಲು ಸಿದ್ಧರಿದ್ದೀರಾ ಎಂದು ಕೇಳಿದಾಗ ಅವರು ‘ಮೌನವಾಗಿದ್ದರು’ ಎಂದು ಉಲ್ಲೇಖಿಸಲಾಗಿದೆ. ಇದಲ್ಲದೆ ರೋಹಿತ್ ಮತ್ತು ಇತರ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್(ASA) ನಾಯಕರನ್ನು ಹಾಸ್ಟೆಲ್‌ಗಳಿಂದ ಹೊರಹಾಕಿರುವ ನಿರ್ಧಾರ ವಿಶ್ವವಿದ್ಯಾಲಯದ ಶಿಸ್ತಿನ ನಿಯಮಗಳಲ್ಲಿ ಸೂಚಿಸಲಾದ ಶಿಕ್ಷೆಗಳಲ್ಲಿ ಒಂದಾಗಿದೆ ಎಂದು ವರದಿಯು ವಾದಿಸುತ್ತದೆ.

ಇದನ್ನು ಓದಿ: ಪ್ಯಾಲೆಸ್ತೀನ್‌ ಪರ, ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಹಾಕಿದ ಪ್ರಾಂಶುಪಾಲೆಗೆ ರಾಜೀನಾಮೆ ನೀಡುವಂತೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...